ಜನರ ಪ್ರಶ್ನೆಗೆ ಉತ್ತರಿಸಲಾಗದೆ ಪ್ರಿಯಾಂಕಾ ಪ್ರಚಾರಕ್ಕೆ ಬರುತ್ತಿಲ್ಲ !
Team Udayavani, Feb 16, 2017, 9:50 AM IST
ಕಾನ್ಪುರ : ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಠಿಯಲ್ಲಿ ಜನರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದೆ ಪ್ರಿಯಾಂಕಾ ಚುನಾವಣಾ ಪ್ರಚಾರಕ್ಕೂ ಬರುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.
ನೀವು ಉತ್ತರಪ್ರದೇಶದ ಸಿಎಂ ಅಭ್ಯರ್ಥಿಯೆ ಎಂದು ಸುದ್ದಿಗಾರರು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರಿಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆರಬೇಕೆಂಬುದು ಬಯಕೆಯಾಗಿದೆ ಎಂದರು.
ನಾನು ಲೋಕಸಭಾ ಚುನಾವಣೆಯಲ್ಲಿ ಅಮೇಠಿಯಲ್ಲಿ ಸೋಲನುಭವಿಸಿದ ಹೊರತಾಗಿಯೂ ಕ್ಷೇತ್ರದಲ್ಲಿ ಸಕ್ರಿಯಳಾಗಿ ಜನರ ಕೆಲಸ ಮಾಡಿಕೊಂಡಿದ್ದೇನೆ ಎಂದರು.
ಇಲ್ಲಿ ಕಳೆದ ಚುನಾವಣೆಗಳಲ್ಲಿ ನೀಡಿದ ಆಶ್ವಾಸನೆಗಳನ್ನು ರಾಹುಲ್ ಗಾಂಧಿ ಈಡೇರಿಸಿಲ್ಲ. ಈಗ ಜನರು ಪ್ರಶ್ನೆಗಳನ್ನು ಮುಂದಿಡುತ್ತಿದ್ದು ಚುನಾವಣಾ ಪ್ರಚಾರಕ್ಕೆ ಬರಲೂ ಸಾಧ್ಯವಾಗುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.