ಯುವಜನ ಮೇಳದಲ್ಲಿ ಜಾನಪದ ಪ್ರಕಾರಗಳ ಅನಾವರಣ


Team Udayavani, Feb 16, 2017, 1:10 PM IST

dvg3.jpg

ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಜನಪದ ನೃತ್ಯ, ಗಾಯನ ಲೋಕವೇ ಅನಾವರಣಗೊಂಡು, ಭಾವಗೀತೆ, ಗೀಗೀ ಪದ, ಲಾವಣಿ, ಕೋಲಾಟ, ವೀರಗಾಸೆ, ಡೊಳ್ಳುಕುಣಿತ, ರಂಗಗೀತೆ, ಏಕಪಾತ್ರಾಭಿನಯ ಅಲ್ಲಿದ್ದವರ ಕಣ್ಮನ ಸೆಳೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳ ಕನ್ನಡದ ನೆಲ ಸಂಸ್ಕೃತಿಯಲ್ಲಿ ಹಾಸು ಹೊಕ್ಕಾಗಿರುವ ಅನೇಕ ಕಲಾ ಪ್ರಕಾರಗಳಿಗೆ ಸಾಕ್ಷಿಯಾಯಿತು. 

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಯುವಕ, ಯುವತಿ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮಲ್ಲಿನ ಕಲಾ ಪ್ರತಿಭೆ ಪ್ರದರ್ಶಿಸಿದರು. ಕನ್ನಡದ ಸಾರಸ್ವತ ಲೋಕದ ಖ್ಯಾತಿವೆತ್ತ ದರಾ ಬೇಂದ್ರೆ, ಕುವೆಂಪು, ಡಾ| ಎಚ್‌.ಎಸ್‌. ವೆಂಕಟೇಶಮೂರ್ತಿ, ಡಾ| ಕೆ.ಎಸ್‌. ನರಸಿಂಹಸ್ವಾಮಿ ಮುಂತಾದ ಮೇರು ಕವಿಗಳ ಕವನಗಳಿಗೆ ಮೇಳದಲ್ಲಿನ ಸ್ಪರ್ಧಿಗಳು ಧ್ವನಿಯಾದರು.  

ಕನ್ನಡ ನೆಲದ ಸಾಂಸ್ಕೃತಿಕ ಬೇರಿನ ಜನಪದ, ಗೀಗೀಪದ, ಧಾನ್ಯಗಳ ಕುಟ್ಟಿ, ಹಸನು ಮಾಡುವ ಹೊತ್ತನ್ನು ಕಳೆಯಲಿಕ್ಕೆ ಹಾಡಲ್ಪಡುತ್ತಿದ್ದ ಹಾಡುಗಳು, ಮದುವೆ ಮುಂತಾದ ಶುಭ ಸಂದರ್ಭದಲ್ಲಿನ ಸೋಬಾನೆ ಪದ…ಹೀಗೆ ವಿವಿಧ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಸ್ಪರ್ಧಿಗಳು ಗಮನ ಸೆಳೆದರು. ದಾವಣಗೆರೆಯ ದವನ ಫೋಕ್‌ ಆರ್ಟ್ಸ್ನ ವಿದ್ಯಾರ್ಥಿನಿಯ ಜಾನಪದ ನೃತ್ಯ ಸೊಗಸಾಗಿ ಮೂಡಿ ಬಂದಿತು.

ಧ್ವನಿಮುದ್ರಿತ ಹಾಡಿನ ಬದಲಾಗಿ ಕಲಾವಿದರು ಹಾಡಿದಂಥಹ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕುವ ಮೂಲಕ ಜಾನಪದ ಲೋಕವನ್ನೇ ತೆರೆದಿಟ್ಟರು. ವೇಷಭೂಷಣ ಒಪ್ಪಓರಣವಾಗಿತ್ತು. ಹರಪನಹಳ್ಳಿಯ ಸೇವಾಲಾಲ್‌ ಗ್ರಾಮೀಣ ಅಭಿವೃದ್ಧಿ ಸಂಘದ ಪದಾಧಿಕಾರಿಗಳ ಲಂಬಾಣಿ ನೃತ್ಯ ಆಕರ್ಷಕವಾಗಿತ್ತು.

ಲಂಬಾಣಿ ಸಮಾಜದ ಸಂಪ್ರದಾಯದ ಉಡುಪಿನೊಂದಿಗೆ ಕಂಗೊಳಿಸಿದ ಯುವತಿಯರು ಡುಂ ಡುಂ ಡುಮುಕಿ… ಹಾಡಿಗೆ ಅತ್ಯಾಕರ್ಷಕದ ನೃತ್ಯದ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು. ಇಲ್ಲಿಯೂ ಧ್ವನಿಮುದ್ರಿಯ ಹಾಡಿ ಇರಲಿಲ್ಲ ಎಂಬುದು ವಿಶೇಷ. ಯುವಜನ ಮೇಳದ ಸ್ಪರ್ಧಿಯಾಗಿರದಿದ್ದರೂ ಬಾಲಕಿ ಕೆ. ಸಿಂಚನಾ ತನ್ನ ತೊದಲು ನುಡಿಗಳಿಂದ ನಡೆಸಿಕೊಟ್ಟ ಬಬ್ರುವಾಹನ… ಏಕಪಾತ್ರಾಭಿನಯಕ್ಕೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದರು. 

ಎರಡು ದಿನಗಳ ಕಾಲ ನಡೆಯುವ ಯುವಜನ ಮೇಳದಲ್ಲಿ ಮೊದಲ ದಿನ ದಾವಣಗೆರೆ ತಾಲೂಕಿನ 82, ಹರಿಹರದ 25, ಹೊನ್ನಾಳಿಯ 39, ಹರಪನಹಳ್ಳಿಯ 20, ಚನ್ನಗಿರಿಯ 10 ಕಲಾವಿದರು ನೋಂದಣಿ ಮಾಡಿಕೊಂಡಿದ್ದರು. ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲಿನಲ್ಲಿ ಫೆ. 17 ರಿಂದ 19ರ ವರೆಗೆ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವರು. 

ಮಾರ್ಚ್‌ನಲ್ಲಿ ಉಡುಪಿಯಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್‌. ಶ್ರೀನಿವಾಸ್‌ ತಿಳಿಸಿದರು. ಯುವಜನ ಮೇಳದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ಮಾತ್ರವೇ ನೀಡಲಾಗುತ್ತದೆ. ಇತರೆ ವೆಚ್ಚವನ್ನು ತಗ್ಗಿಸಿ, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.

ತಾವು ಈವರೆಗೆ ಸೇವೆ ಸಲ್ಲಿಸಿರುವ ಕಡೆ ನಗದು ಬಹುಮಾನ ನೀಡಲಾಗುತ್ತಿತ್ತು. ನಗದು ಬಹುಮಾನ ನೀಡಿದಲ್ಲಿ  ಸ್ಪರ್ಧಿಗಳಿಗೆ ಉತ್ತೇಜನ ದೊರೆತಂತಾಗುತ್ತದೆ ಎಂದು ತಿಳಿಸಿದರು. ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಮಾಗಾನಹಳ್ಳಿ ಮಂಜುನಾಥ್‌, ರಾಜ್ಯ ಪ್ರಶಸ್ತಿ ಪಡೆದಿರುವ ಎಂ. ಯೋಗೇಶ್‌, ಡಿ.ಎಲ್‌. ಜಯರಾಜನಾಯ್ಕ, ಆರ್‌. ಶಿವಾನಂದನಾಯ್ಕ ಇತರರು ಇದ್ದರು.  

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.