ಚೌಕಕ್ಕೆ ಉತ್ತಮ ಪ್ರತಿಕ್ರಿಯೆ
Team Udayavani, Feb 16, 2017, 2:35 PM IST
ಹುಬ್ಬಳ್ಳಿ: ಸಾಹಸಸಿಂಹ ದಿ. ಡಾ| ವಿಷ್ಣುವರ್ಧನ ಅವರ ಅಭಿನಯದ “ಆಪ್ತಮಿತ್ರ’ ಚಿತ್ರದ ನಂತರ “ಚೌಕ’ ಕನ್ನಡ ಚಲನಚಿತ್ರವು ಯಶಸ್ವಿಯಾಗಿ ಮೂಡಿ ಬಂದಿದೆ. ಚಿತ್ರದ ಬಗ್ಗೆ ರಾಜ್ಯಾದ್ಯಂತ ಪ್ರೇಕ್ಷಕರಿಂದ ನಿರೀಕ್ಷೆಗಿಂತಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ತರುಣ ಸುಧೀರ ಹಾಗೂ ನಿರ್ಮಾಪಕ ಯೋಗೀಶ ದ್ವಾರಕೀಶ ಹೇಳಿದರು.
ನಗರದಲ್ಲಿ ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಿತ್ರದ ಯಶಸ್ಸಿನಿಂದ ತುಂಬಾ ಸಂತಸವಾಗಿದೆ. ಅದನ್ನು ಬೆಂಗಳೂರಿನಲ್ಲೇ ಕುಳಿತು ಅನುಭವಿಸುವುದು ಬೇಡ. ಬದಲಾಗಿ ಚಿತ್ರ ತಂಡದೊಂದಿಗೆ ಚೌಕ ವಿಜಯಯಾತ್ರೆ ಆರಂಭಿಸಿ ರಾಜ್ಯಾದ್ಯಂತ ಪ್ರೇಕ್ಷಕರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ಎಂದರು.
ನಿರ್ದೇಶಕ ತರುಣ ಸುಧೀರ ಮಾತನಾಡಿ, ನನ್ನ ತಂದೆ ಉತ್ತರ ಕರ್ನಾಟಕದ ರಂಗಭೂಮಿಗಳಲ್ಲಿ ಸಾಕಷ್ಟು ನಾಟಕಗಳನ್ನು ಪ್ರದರ್ಶಿಸಿದ್ದಾರೆ. ನಮ್ಮ ಕುಟುಂಬದ ಮೇಲೆ ಈ ಭಾಗದ ಅನ್ನದ ಋಣವಿದೆ. ಅದನ್ನು ಮರೆಯಲಾಗದು. ಜನರಿಂದ ಚೌಕ ಚಿತ್ರಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಪ್ರೋತ್ಸಾಹ, ಬೆಂಬಲ ಸಿಕ್ಕಿದೆ ಎಂದರು.
ಚಿತ್ರದ ನಾಯಕ ನಟರಾದ ಪ್ರಜ್ವಲ್ ದೇವರಾಜ್, ದಿಗಂತ್, ಪ್ರೇಮ್ ಮಾತನಾಡಿ, ರಾಜ್ಯಾದ್ಯಂತ ಚೌಕ ಚಿತ್ರ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ದೊರೆಯುತ್ತಿದೆ. ಇದರಿಂದ ನಮಗೆಲ್ಲ ತುಂಬಾ ಸಂತಸವಾಗಿದೆ ಎಂದರು. ಚಿತ್ರ ತಂಡದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.