2018ರ ಚುನಾವಣೆಗೆ ಸಾಮೂಹಿಕ ನಾಯಕತ್ವ
Team Udayavani, Feb 17, 2017, 3:45 AM IST
ಕಲಬುರಗಿ: 2018ರ ಚುನಾವಣೆ ಯಾರದೇ ನೇತೃತ್ವದಲ್ಲಿ ನಡೆಯೋದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸಲಿದೆಯೆಂದು ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿದೆ. 2018ರ ಚುನಾವಣೆಯಲ್ಲಿ ಪಕ್ಷ ಪುನಃ ಅಧಿಕಾರಕ್ಕೆ ಬಂದ ನಂತರ ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಹೇಳಿದ ನಂತರ ಯಾರೊಬ್ಬರೂ ಸೊಲ್ಲೆತ್ತದೆ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪುನರುಚ್ಚರಿಸಿದರು.
ಬಿ.ಎಸ್.ಯಡಿಯೂರಪ್ಪ ಹಾಗೂ ಇತರರು ಕಾಂಗ್ರೆಸ್ನಿಂದ ಅನೇಕರು ಬಿಜೆಪಿಗೆ ಬರಲಿದ್ದಾರೆ ಎನ್ನುತ್ತಿದ್ದಾರೆ. ಬಿಜೆಪಿ ಮಿಷನ್ -150 ಶಕ್ತವಾಗಿದ್ದರೆ ಕಾಂಗ್ರೆಸ್ನವರನ್ನು ಯಾಕೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ? ಬಿಜೆಪಿಯ ವಿ. ಸೋಮಣ್ಣ ಕಾಂಗ್ರೆಸ್ಗೆ ಬರುವ ಕುರಿತು ತಾವೂ ಸೇರಿ ಯಾರೊಂದಿಗೂ ಚರ್ಚಿಸಿಲ್ಲ ಎಂದು ತಿಳಿಸಿದರು.
ಕುಮಾರ್ ಬಂಗಾರಪ್ಪ ಜತೆ ಮಾತುಕತೆ
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಮಾರ್ ಬಂಗಾರಪ್ಪ ಅವರ ತಂದೆಯವರ ಸ್ಥಾನ ತುಂಬುತ್ತಾರೆಂಬ ನಿರೀಕ್ಷೆಯಿತ್ತು. ಇದೇ ಕಾರಣಕ್ಕೆ ಮಂತ್ರಿ ಸ್ಥಾನವನ್ನೂ ನೀಡಲಾಗಿತ್ತು. ಅವರ ತಂದೆ ಹಾದಿ ತುಳಿದರೆ ಏನು ಮಾಡಬೇಕು? ಆದರೂ ಅವರೊಂದಿಗೆ ಮಾತುಕತೆ ನಡೆಸಲಾಗುವುದೆಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.