ಕಪ್ಪ ಕೊಟ್ಟಿಲ್ಲ ಎಂದಾದರೆ ಬಿಎಸ್ವೈ ನೇಣು ಹಾಕೊಳ್ತಾರ: ಕಾಗೋಡು
Team Udayavani, Feb 17, 2017, 3:45 AM IST
ತುಮಕೂರು: ಪಕ್ಷದ ಹೈಕಮಾಂಡ್ಗೆ ಸಿದ್ದರಾಮಯ್ಯ ಸಾವಿರ ಕೋಟಿ ರೂ. ಕಪ್ಪ ಕೊಟ್ಟಿಲ್ಲ ಎಂಬುದು ಸಾಬೀತಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಣು ಹಾಕಿಕೊಳ್ತಾರ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ಗೆ ಸಾವಿರ ಕೋಟಿ ರೂ. ಕಪ್ಪ ನೀಡಿದ್ದಾರೆಂದು ಡೈರಿಯಲ್ಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಮೂರ್ಖತನದ ಪರಮಾವಧಿ. ಯಡಿಯೂರಪ್ಪ ದಾಖಲೆ ಇಟ್ಟುಕೊಂಡು ಮಾತನಾಡಲಿ ಎಂದರು. ಅವರು ಸಹ ಆಡಳಿತ ನಡೆಸಿದ್ದಾರೆ. ಅಲ್ಲದೆ ಅವರ ಕಾಲದಲ್ಲಿ ಯಾರ್ಯಾರು ಜೈಲಿಗೆ ಹೋಗಿ ಬಂದವರು ಎನ್ನುವುದು ತಿಳಿದಿದೆ. ಈ ಪ್ರಕರಣದಲ್ಲಿ ಒಂದು ವೇಳೆ ಕಪ್ಪ ಕೊಟ್ಟಿಲ್ಲ ಎಂದು ಋಜುವಾದರೆ ಯಡಿಯೂರಪ್ಪ ನೇಣು ಹಾಕಿ ಕೊಳ್ಳುತ್ತಾರಾ ಎಂದು ಮರು ಪ್ರಶ್ನಿಸಿದರು.
**
ಎಸ್ಎಂಕೆ, ಪ್ರಸಾದ್ ಸ್ವಾರ್ಥಕ್ಕಾಗಿ ಕಾಂಗ್ರೆಸ್ ತೊರೆದಿದ್ದಾರೆ
ವಿಜಯಪುರ: ಕಾಂಗ್ರೆಸ್ನಲ್ಲಿ 40-50 ವರ್ಷಗಳಿಂದ ನಿಷ್ಠೆಯಿಂದ ದುಡಿದರೂ ಯಾವುದೇ ಅಧಿಕಾರ ಪಡೆಯದ ಸಾವಿರಾರು ಹಿರಿಯ ಕಾರ್ಯಕರ್ತರಿದ್ದಾರೆ. ಪಕ್ಷದಲ್ಲಿ ಸಾಧ್ಯವಿರುವ ಎಲ್ಲ ಅಧಿಕಾರ ಅನುಭವಿಸಿದ ಎಸ್.ಎಂ.ಕೃಷ್ಣ, ಶ್ರೀನಿವಾಸ ಪ್ರಸಾದ್ ಅವರಂಥವರು ಸ್ವಾರ್ಥಕ್ಕಾಗಿ ಕಾಂಗ್ರೆಸ್ ತೊರೆದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಟೀಕಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ. ಆದರೆ ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಜನಮತ ಗಣನೆ ಅಲ್ಲ ಎಂದು ಸ್ಪಷ್ಟಪಡಿಸಿದರು.
ರಾಜೀನಾಮೆ ನೀಡಲಿ: ಸಿಎಂ ವಿರುದ್ಧ ಯಡಿಯೂರಪ್ಪ ಆಧಾರ ರಹಿತವಾಗಿ ಲಂಚ, ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಇದೀಗ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಅನಂತಕುಮಾರ ಬಿಜೆಪಿ ಹೈಕಮಾಂಡ್ಗೆ ಭ್ರಷ್ಟಾಚಾರದಿಂದ ಹಣ ಕಳಿಸಿದ್ದಾಗಿ ಖುದ್ದು ಒಪ್ಪಿಕೊಂಡ ವಿಡಿಯೋ ಸಾûಾಧಾರ ಬಹಿರಂಗವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಅನಂತಕುಮಾರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.