ಬೆಂಗ್ಳೂರು-ಮಂಗ್ಳೂರು ಇನ್ನೂ ಹತ್ತಿರ;ಇಂಟರ್ ಸಿಟಿ ರೈಲು ಶೀಘ್ರ ಶುರು


Team Udayavani, Feb 17, 2017, 3:45 AM IST

train.jpg

ಬೆಂಗಳೂರು: ಬಹು ನಿರೀಕ್ಷಿತ “ಬೆಂಗಳೂರು-ಹಾಸನ- ಮಂಗಳೂರು’ ರೈಲು ಮಾರ್ಗ ಪೂರ್ಣಗೊಂಡಿರುವುದರಿಂದ ಮಾರ್ಚ್‌ ಮೊದಲ ವಾರದಲ್ಲಿ ಎರಡು ಇಂಟಿರ್‌ಸಿಟಿ ರೈಲುಗಳ ಸಂಚಾರಕ್ಕೆ ದಿನಗಣನೆ ಪ್ರಾರಂಭವಾಗಿದೆ.

ಈಗಾಗಲೇ “ಬೆಂಗಳೂರು-ಹಾಸನ’ ನಡುವಿನ ಇಂಟರ್‌ ಸಿಟಿ ಸಂಚಾರಕ್ಕೆ ವೇಳಾ ಪಟ್ಟಿಯೂ ಸಿದ್ಧಗೊಂಡಿದ್ದು, ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹಾಸನ ಬಿಡುವ ರೈಲು 9.40 ಕ್ಕೆ ಯಶವಂತಪುರ ತಲುಪಲಿದೆ. ಅದೇ ರೀತಿ ಸಂಜೆ 6 ಕ್ಕೆ ಯಶವಂತಪುರ ಬಿಟ್ಟು ರಾತ್ರಿ 9.30 ಕ್ಕೆ ಹಾಸನ ತಲುಪಲಿದೆ.

ಇದರ ಜತೆಗೆ “ಬೆಂಗಳೂರು-ಮಂಗಳೂರು ನಡುವೆ ಇಂಟರ್‌ಸಿಟಿ ರೈಲು ಸಂಚಾರ ಆರಂಭಕ್ಕೆ ಪ್ರಸ್ತಾವ ಸಲ್ಲಿಕೆ ಯಾಗಿರುವುದು ಆ ಭಾಗದ ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರುವ ಆಸೆ ಚಿಗುರೊಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗಬೇಕಾದರೆ ಕೊಂಕಣ ಸುತ್ತಿ ಮೈಲಾರಕ್ಕೆ ಎಂಬಂತೆ ತುಮಕೂರು ಅರಸೀಕೆರೆ ಮಾರ್ಗ ಅಥವಾ ಮೈಸೂರು ಹೊಳೇನರಸೀಪುರ ಮಾರ್ಗದಲ್ಲಿ ಹೋಗಬೇಕಿತ್ತಾದರೂ ಇದೀಗ ನೂತನ ಮಾರ್ಗ ಪೂರ್ಣಗೊಂಡಿರುವುದರಿಂದ 9 ತಾಸಿನಲ್ಲಿ ಬೆಂಗಳೂರಿನಿಂದ ಮಂಗಳೂರು ತಲುಪ ಬಹುದಾಗಿದೆ.

ಇತ್ತೀಚೆಗಷ್ಟೇ ನೆಲಮಂಗಲ-ಶ್ರವಣಬೆಳ ಗೊಳವರೆಗಿನ 110 ಕಿಮೀ. ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ವಿಭಾಗದವರು ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಬೆಂಗಳೂರು-ಹಾಸನ ಮಾರ್ಗದಲ್ಲಿ ಹೊಸ ರೈಲು ಸೇವೆಗೆ ರೈಲ್ವೆ ಸುರಕ್ಷತಾ ವಿಭಾಗದ ಒಪ್ಪಿಗಾಗಿ ಕಾಯಲಾಗುತ್ತಿದೆ.

ಬೆಂಗಳೂರು-ಹಾಸನ-ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗವಾಗಿ ಮಂಗಳೂರಿಗೆ ಇಂಟರ್‌ಸಿಟಿ ರೈಲು ಸಂಚಾರದಲ್ಲಿ ಸಕಲೇಶಪುರದಿಂದ ಸುಬ್ರಹ್ಮಣ್ಯವರೆಗಿನ 55 ಕಿ.ಮೀ. ಮಾರ್ಗ ಪಶ್ಚಿಮ ಘಟ್ಟದ ಮೂಲಕ ಹಾದು ಹೋಗಿರುವುದರಿಂದ ಅಲ್ಲಿ ಸುರಕ್ಷತೆ ದೃಷ್ಟಿಯಿಂದ ಯಾವ ಸಮಯದಲ್ಲಿ ಪ್ಯಾಸೆಂಜರ್‌ ರೈಲು ಓಡಿಸುವುದು ಉತ್ತಮ ಎಂಬ ಬಗ್ಗೆ ಪರಿಶೀಲನೆ
ನೆಡಸಲಾಗುತ್ತಿದೆ.

*ಸುರೇಶ್ ಪುದುವೆಟ್ಟು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.