ಅವಕಾಶ ಬಳಸಿ ಯಶಸ್ಸು ಗಳಿಸಿ


Team Udayavani, Feb 17, 2017, 12:37 PM IST

mys1.jpg

ಮೈಸೂರು: ವಿದ್ಯಾರ್ಥಿಗಳು ನದಿಯನ್ನು ಆದರ್ಶವನ್ನಾಗಿಟ್ಟುಕೊಂಡು, ಜೀವನದಲ್ಲಿ ಎದುರಾಗುವ ಅವಕಾಶಗಳನ್ನು ಬಳಸಿ ಕೊಂಡು ಬದುಕಿನಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಂಗೀತ ನಿರ್ದೇಶಕ ವಿ. ಮನೋಹರ್‌ ಸಲಹೆ ನೀಡಿದರು.

ಮೈಸೂರು ವಿಶ್ವ ವಿದ್ಯಾನಿಲಯ, ಮಹಾರಾಜ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ವತಿಯಿಂದ ಮಹಾ ರಾಜ ಕಾಲೇಜಿನ ಶತಮಾನೋತ್ಸವ ಭವನ ದಲ್ಲಿ ಆಯೋಜಿಸಿರುವ ಎರಡು ದಿನಗಳ ಚಲನಚಿತ್ರಗೀತೆಗಳ ಗಾಯನ ಸ್ಪರ್ಧೆಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಸಂದರ್ಭದಲ್ಲಿ ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತ ಗೊಳ್ಳದೆ ಕ್ರೀಡೆ ಹಾಗೂ ಇನ್ನಿತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಅಲ್ಲದೆ ವಿದ್ಯಾರ್ಥಿಗಳು ನದಿಯನ್ನು ಆದರ್ಶ ವಾಗಿಟ್ಟುಕೊಂಡು ಜೀವನದಲ್ಲಿ ಎದುರಾ ಗುವ ಕಷ್ಟ – ಸುಖಗಳನ್ನು ಧೈರ್ಯದಿಂದ ಎದುರಿಸುವ ಮೂಲಕ ಮುಂದೆ ಸಾಗುವ ಜತೆಗೆ ಜೀವನದಲ್ಲಿ ನಿರ್ದಿಷ್ಟ ವಾದ ಗುರಿಯನ್ನು ಹೊಂದಬೇಕು ಎಂದರು.

ವರನಟ ಡಾ. ರಾಜ್‌ಕುಮಾರ್‌ ಅವರು ದೇಶದ ಸಾಂಸ್ಕೃತಿಕ ಪ್ರತಿನಿಧಿಯಾಗಿದ್ದು, ಅವರೊಂದಿಗೆ ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ತನ್ನ ಸಂಗೀತವನ್ನು ಆಲಿಸಿದ್ದ ರಾಜ್‌ಕುಮಾರ್‌ ಅವರು ಅನೇಕ ಸಿನಿಮಾಗಳಲ್ಲಿ ಅವಕಾಶಗಳನ್ನು ದೊರಕಿಸಿ ಕೊಟ್ಟರು ಎಂದು ತಾವು ಚಿತ್ರರಂಗಕ್ಕೆ ಪ್ರವೇಶಿ ಸಿದ ದಿನಗಳನ್ನು ಮೆಲುಕು ಹಾಕಿದರು.

ಇತ್ತೀಚಿನ ದಿನಗಳಲ್ಲಿ ನಗರೀಕರಣದ ಭರಾಟೆ ಹೆಚ್ಚುತ್ತಿದ್ದು, ಇದಕ್ಕಾಗಿ ಸಾಕಷ್ಟು ಮರಗಳ ಹನನ ಮಾಡಲಾಗುತ್ತಿದೆ. ಇದ ರಿಂದಾಗಿ ಪರಿಸರದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವ ಮೂಲಕ ಸಾಂಸ್ಕೃತಿಕ ನಗರಿ ಪರಿಸರ ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶು ಪಾಲ ಪ್ರೊ. ಸಿ.ಪಿ. ಸುನೀತಾ, ಆಡಳಿತಾಧಿಕಾರಿ ಡಾ. ಎಲ್‌. ಲಿಂಬ್ಯಾನಾಯಕ್‌, ಪಠ್ಯೇತರ ಚಟುವಟಿಕೆಗಳ ಸಮಿತಿ ಸಂಚಾಲಕ ಡಾ. ಎಸ್‌.ಟಿ. ರಾಮಚಂದ್ರ, ಸದಸ್ಯ ಡಾ. ಸತ್ಯನಾರಾಯಣ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.