ಸುಳ್ಳು ದೂರುದಾರರ ವಿರುದ್ಧ ಕ್ರಮ ಕೈಗೊಳ್ಳಿ: ಪ್ರತಿಭಟನೆ


Team Udayavani, Feb 17, 2017, 12:40 PM IST

mys3.jpg

ಮೈಸೂರು: ಗ್ರಾಮಸ್ಥರ ಮೇಲೆ ಸುಳ್ಳು ಆಪಾದನೆಗಳನ್ನು ಮಾಡುತ್ತಾ, ಸುಳ್ಳು ದೂರುಗಳನ್ನು ನೀಡುತ್ತಿರುವವರ ವಿರುದ್ಧ ಶಿಸ್ತುಕ್ರಮಕೈಗೊಳ್ಳುವ ಮೂಲಕ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಡಾ. ಭೀಮ್‌ರಾವ್‌ ಯುವಕರ ಸಂಘ ಹಾಗೂ ಮಾವಿನಹಳ್ಳಿ ಗ್ರಾಮಸ್ಥರು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದರು.

ಮಾವಿನಹಳ್ಳಿ ನಿವಾಸಿ ವೆಂಕಟರಾಮು, ಗ್ರಾಪಂ ಸದಸ್ಯ ರವಿ ಸೇರಿದಂತೆ ಏಳು ಮಂದಿ ವಿರುದ್ಧ ಸುಳ್ಳು ಹಲ್ಲೆ ಪ್ರಕರಣ ದಾಖಲಿಸಿದ್ದಾರೆ. ಇದಲ್ಲದೆ, ತಮ್ಮ ಮಕ್ಕಳನ್ನು ಅಂಗನ ವಾಡಿಗೆ ಸೇರಿಸಿಕೊಳ್ಳದೇ ಕಡಗಣಿಸಲಾಗಿದೆ ಎಂಬುದಾಗಿ ಜಯಪುರ ಪೊಲೀಸ್‌ ಠಾಣೆಗೆ ಸುಳ್ಳು ದೂರು ನೀಡಿದ್ದು, ವಿಚಾರಣೆ ನಡೆಸಿದ ತಹಶೀಲ್ದಾರ್‌ ಸುಳ್ಳುದೂರು ಎಂದು ಸ್ಪಷ್ಟೀಕರಣ ಸಹ ನೀಡಿದ್ದಾರೆ. 

ಆದರೆ, ಇದೀಗ ಮತ್ತೂಮ್ಮೆ ಏಳುಮಂದಿ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದು, ಈ ಪೈಕಿ ಸಿದ್ಧರಾಜು, ಮಹದೇವಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ವೆಂಕಟರಾಮು ನೀಡಿರುವ ದೂರಿನಲ್ಲಿ ಸತ್ಯಾಂಶವಿಲ್ಲ ಎಂದು ಪ್ರತಿಭಟನಾ ನಿರತ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಗ್ರಾಮದಿಂದ ಬಹಿಷ್ಕಾರ ಗೊಂಡಿದ್ದ ವೆಂಕಟರಾಮು ಗ್ರಾಮದಲ್ಲಿ ತಾವು ವೈಯುಕ್ತಿಕವಾಗಿ ದ್ವೇಷಿಸುವವರ ವಿರುದ್ಧ ಈ ರೀತಿ ದೂರು ನೀಡುತ್ತಾ ಬಂದಿದ್ದಾರೆ.

ಈ ಹಿಂದೆಯೂ ಗ್ರಾಮದ ಅನೇಕರ ವಿರುದ್ಧ ಜಯಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ವಿನಾಕಾರಣ ಸುಳ್ಳು ದೂರು ನೀಡುತ್ತಿರುವ ವೆಂಕಟರಾಮು ಹಾಗೂ ಅವರಿಗೆ ಬೆಂಬಲ ನೀಡುತ್ತಾ, ಗ್ರಾಮದ ವಾತಾವರಣವನ್ನು ಹಾಳು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಗ್ರಾಮದ ಜವರಯ್ಯನ ಶಿವಣ್ಣ, ಪಾಪಯ್ಯ, ಕಾಳಸ್ವಾಮಿ, ಮಹೇಶ್‌, ಯಾಜಮಾನ್‌ ಚೆಲುವಯ್ಯ, ಸಿದ್ದಯ್ಯ, ಮಹೇಶ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.