ಕಳ್ಳರ ಬಂಧನ: ಚಿನ್ನ-ಬೆಳ್ಳಿ ಆಭರಣ, ಬೈಕ್ ವಶ
Team Udayavani, Feb 17, 2017, 1:08 PM IST
ದಾವಣಗೆರೆ: ಹಾವೇರಿ ಜಿಲ್ಲೆಯ ಬ್ಯಾಡಗಿ, ಹಂಸಭಾವಿ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ ಹಾಗೂ ಬೈಕ್ ಕಳವು ಸಂಬಂಧಿಸಿದಂತೆ ಐವರನ್ನು ಬಂಧಿಸಿರುವ ಬಡಾವಣೆ ಠಾಣೆ ಪೊಲೀಸರು, ಆರೋಪಿಗಳಿಂದ ಚಿನ್ನ-ಬೆಳ್ಳಿ ಆಭರಣ, 2 ಬೈಕ್ ವಶಪಡಿಸಿಕೊಂಡಿದ್ದಾರೆ.
ಪ್ರಕರಣಗಳಿಗೆ ಸಂಬಂಧಿಸಿದಂತೆ ಮಲೇಬೆನ್ನೂರು ವಾಸಿ ನಾಗರಾಜ್ ಅಲಿಯಾಸ್ ಬಳ್ಳಾರಿ ನಾಗ (25), ಬ್ಯಾಡಗಿ ತಾಲೂಕಿನ ಕದರಮಂಡಲಗಿಯ ಸಿದ್ದು ಉಜ್ಜಿನಿ (21), ಶಿವರಾಜನಾಯ್ಕರ್ ಹಾಗೂ ಕದ್ದ ವಸ್ತುಗಳನ್ನು ಖರೀದಿಸಿದ್ದ ರಾಣಿಬೆನ್ನೂರಿನ ಚಂದ್ರಶೇಖರ್ ಅಂಬಲಿ, ಹಾಲಪ್ಪ ಶಿವಪ್ಪ ಮಾಳಗಿ ಬಂಧಿತ ಆರೋಪಿಗಳು.
ಬಂಧಿತರಿಂದ ಒಟ್ಟು 5,13, 580 ರೂಪಾಯಿ ಮೌಲ್ಯದ 189 ಗ್ರಾಂ ಚಿನ್ನ, 682 ಗ್ರಾಂ ತೂಕದ ಬೆಳ್ಳಿ ಆಭರಣ, 2 ಬೈಕ್ ವಶಪಡಿಸಿಕೊಳ್ಳಲಾಗಿದೆ. ಇವರ ಬಂಧನದಿಂದಾಗಿ ಹಂಸಭಾವಿ ಠಾಣೆಯಲ್ಲಿ ವ್ಯಾಪ್ತಿಯಲ್ಲಿ 4, ಬ್ಯಾಡಗಿ ಠಾಣಾ ವ್ಯಾಪ್ತಿಯಲ್ಲಿ 2 ಮನೆಗಳ್ಳತನ ಹಾಗೂ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿವೆ.
ಆರೋಪಿ ನಾಗರಾಜ್ ಅಲಿಯಾಸ್ ಬಳ್ಳಾರಿ ನಾಗ ಈ ಹಿಂದೆ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್ ಎಸ್. ಗುಳೇದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಬಡಾವಣೆ ಪೊಲೀಸ್ ಠಾಣೆಯ ಪಿಎಸ್ ಐಗಳಾದ ಡಿ.ಎಂ. ಭವ್ಯ, ವೈ.ಎಸ್. ಶಿಲ್ಪ ಸಿಬ್ಬಂದಿ ದಾವಣಗೆರೆಯ ರಿಂಗ್ ರಸ್ತೆಯಲ್ಲಿ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ನಂಬರ್ ಪ್ಲೇಟ್ ಇಲ್ಲದ ಬಂದ ಇಬ್ಬರು ಬೈಕ್ ಸವಾರರನ್ನು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತು.
ಇಬ್ಬರನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಮತ್ತೂಬ್ಬ ಕಳ್ಳ ಶಿವರಾಜನಾಯ್ಕರ್ ಹಾಗೂ ಕದ್ದ ವಸ್ತುಗಳನ್ನು ಖರೀದಿಸಿದ್ದ ರಾಣಿಬೆನ್ನೂರಿನ ಚಂದ್ರಶೇಖರ್ ಅಂಬಲಿ, ಹಾಲಪ್ಪ ಶಿವಪ್ಪ ಮಾಳಗಿ ಬಗ್ಗೆ ಮಾಹಿತಿ ನೀಡಿದ್ದರು. ಅದರ ಆಧಾರದಂತೆ ಎಲ್ಲರನ್ನೂ ಬಂಧಿಸಲಾಗಿದೆ ಎಂದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಯಶೋಧಾ ಎಸ್. ವಂಟಿಗೋಡಿ, ನಗರ ಪೊಲೀಸ್ ಉಪಾಧೀಕ್ಷಕ ಕೆ. ಅಶೋಕ್ಕುಮಾರ್, ವೃತ್ತ ನಿರೀಕ್ಷಕ ಸಂಗನಾಥ್, ಪಿಎಸ್ಐಗಳಾದ ಡಿ.ಎಂ. ಭವ್ಯ, ವೈ.ಎಸ್. ಶಿಲ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.