ಪರಿಸರ ಬೆಳೆಸುವ ಮಾತು ಅಸಮಂಜಸ


Team Udayavani, Feb 17, 2017, 1:14 PM IST

dvg5.jpg

ದಾವಣಗೆರೆ: ನಾವು ಇದುವರೆಗೆ ಪರಿಸರ ಅರ್ಥಮಾಡಿಕೊಳ್ಳುವ ಸ್ಥಿತಿಗೆ ತಲುಪಿಯೇ ಇಲ್ಲ, ಇನ್ನು ಅದನ್ನು ಬೆಳೆಸುವ ವಿಷಯ ಕುರಿತು ಮಾತನಾಡುವುದು ಅಸಮಂಜಸ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಹೇಳಿದ್ದಾರೆ. 

ಗುರುವಾರ ಸೇಂಟ್‌ ಜಾನ್ಸ್‌ ಕಾನ್ವೆಂಟ್‌ ಶಾಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯ  ವಿಜ್ಞಾನ ಪರಿಷತ್ತು ಇತರೆ ಇಲಾಖೆ, ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ, ಮಾತನಾಡಿದರು.

ನಾವು ಪರಿಸರವನ್ನು ಇನ್ನೂ ಅರ್ಥಮಾಡಿಕೊಂಡಿಲ್ಲ. ಅದರ ಬೆಳವಣಿಗೆ ಕುರಿತು ಮಾತನಾಡುವುದು ಅರ್ಥಹೀನ ಎಂದರು. ಪರಿಸರ ಎಂಬುದು  ಸಾವಿರಾರು ವರ್ಷಗಳಿಂದ ಇರುವಂತಹುದ್ದು. ಅದನ್ನು ಉಳಿಸಿ, ಬೆಳೆಸಬೇಕಾಗಿದ್ದ ನಾವು, ಇಂದು ಸಮತೋಲನ ಹದಗೆಡುವ ಮಟ್ಟಕ್ಕೆ ಹಾಳು ಮಾಡಿದ್ದೇವೆ.

ಈಗ ನಾವು  ಅದನ್ನು ಬೆಳೆಸುತ್ತೇವೆ ಎಂಬುದು ಅಸಾಧ್ಯದ ಮಾತು. ಸೂಕ್ಷಮಟ್ಟದಲ್ಲಿ ಪರಿಸರ ಬೆಳೆಸಲು ಸಾಧ್ಯವೇ ಹೊರತು ಅದನ್ನು ಪುನಃ ಇದ್ದ ಸ್ಥಿತಿಗೆ ತರುವುದು ಆಗದ ಕೆಲಸ ಅಸಾಧ್ಯ  ಎಂದು ಅವರು ತಿಳಿಸಿದರು. ನಾವು ಏನು ಮಾಡಿದರೂ ಪರಿಸರ ಸಹಿಸಿಕೊಳ್ಳಲಿದೆ ಎಂಬುದು ಸುಳ್ಳು. ಪರಿಸರಕ್ಕೆ ತನ್ನದೇ ಆದ ಇತಿಮಿತಿಗಳಿವೆ. 

ಇದುವರೆಗೆ ನಾವು ಮಾಡಿದ  ಎಲ್ಲಾ ದೌರ್ಜನ್ಯ ತಡೆದುಕೊಂಡಿದೆ. ಇದೀಗ ಆ ಶಕ್ತಿ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಪಂಚಭೂತಗಳೆಂದು ಕರೆಯಲ್ಪಡುವ ಗಾಳಿ, ಭೂಮಿ, ನೀರು, ಆಕಾಶ,  ಬೆಂಕಿಯಂತಹ ವಿಷಯಗಳು ಪರಿಸರದಲ್ಲಿವೆ. ಅವುಗಳನ್ನು ಸರಿ ಇಟ್ಟುಕೊಂಡರೆ ಸಾಕು. 

ಪರಿಸರ ತಾನಾಗಿಯೇ ಸಮತೋಲನ ಕಾಪಾಡಿಕೊಳ್ಳುತ್ತದೆ. ಆದರೆ, ನಾವಿಂದು ಭೂಮಿ, ಗಾಳಿ ಮಾತ್ರವಲ್ಲ ಆಕಾಶವನ್ನೂ ಕೆಡಿಸುವ ಹಂತಕ್ಕೆ ಬಂದು ನಿಂತಿದ್ದೇವೆ ಎಂದು ಅವರು ತಿಳಿಸಿದರು. ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಆರ್‌.ಎಚ್‌. ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಪರಿಸರ ಅಧಿಕಾರಿ ಎಂ.ಕೆ. ಪ್ರಭುದೇವ್‌, ವಿಜ್ಞಾನ ಪರಿಷತ್‌ ಅಧ್ಯಕ್ಷ ಪ್ರೊ. ವೈ. ವೃಷಭೇಂದ್ರಪ್ಪ, ದಾವಿವಿ ಸಿಂಡಿಕೇಟ್‌ ಸದಸ್ಯ ಡಾ|  ಎಚ್‌. ವಿಶ್ವನಾಥ್‌, ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್‌ ದೇವರಮನಿ, ಅಮೃತ ಯುವಕ ಸಂಘದ ಅಧ್ಯಕ್ಷ ಆರ್‌.ಬಿ. ಹನುಮಂತಪ್ಪ, ಸಹಾಯಕ ಪರಿಸರ ಅಧಿಕಾರಿ  ಗಣಪತಿ ಹೆಗಡೆ ಇತರರು ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.