ಸಮಾಜಮುಖೀ ಚಿಂತನೆ ಮೈಗೂಡಿಸಿಕೊಳ್ಳಿ
Team Udayavani, Feb 17, 2017, 1:29 PM IST
ಧಾರವಾಡ: ಇಂದಿನ ಯುವಕರು ಸಮಾಜಮುಖೀ ಚಿಂತನೆ ಮೈಗೂಡಿಸಿಕೊಳ್ಳುವುದರ ಮೂಲಕ ಉತ್ತಮ ನಾಯಕರಾಗಿ ಹೊರ ಹೊಮ್ಮಬೇಕು ಎಂದು ಮನೋರೋಗ ತಜ್ಞ ಡಾ| ಆದಿತ್ಯಾ ಪಾಂಡುರಂಗಿ ಹೇಳಿದರು.
ನೆಹರು ಯುವ ಕೇಂದ್ರ, ರುಡ್ಸೆಟ್ ಸಂಸ್ಥೆ, ಗಿರಿ ಫೌಂಡೇಶನ್ ಹಾಗೂ ಬಸವೇಶ್ವರ ಯುವಕ ಮಂಡಳ ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರಮ, ಬದ್ಧತೆ, ಉತ್ತಮ ನಡತೆ ಹಾಗೂ ನೈತಿಕ ಮೌಲ್ಯಗಳು ಅರ್ಥಪೂರ್ಣ ಬದುಕಿಗೆ ಸಹಕಾರಿಯಾಗುತ್ತವೆ ಎಂದರು. ಅಧ್ಯಕ್ಷತೆ ವಹಿಸಿದ್ದ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಮಹಾಂತೇಶ ವೀರಾಪೂರ ಮಾತನಾಡಿ, ಪ್ರತಿಯೊಬ್ಬರು ಜೀವನ ಪ್ರೀತಿ ಮತ್ತು ಉತ್ಸಾಹದಿಂದ ಕಾರ್ಯೋನ್ಮುಖರಾಗುವುದರ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಹೇಳಿದರು.
ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಅನಿಲ ಪುರಾಣಿಕ ಮಾತನಾಡಿ, ನೆಹರು ಯುವ ಕೇಂದ್ರದ ಕಾರ್ಯ ಚಟುವಟಿಕೆಗಳ ಕುರಿತು ವಿವರಿಸಿದರು. ಉಪನ್ಯಾಸಕರಾದ ಜಗದೀಶ ಪೂಜಾರ, ಚನ್ನಪ್ಪ ದೇವಗಿರಿ, ಶಿವಾಜಿ, ವಂದನಾ ಇದ್ದರು. ಪ್ರದೀಪ ಎಸ್. ಮೇಲ್ಗಡೆ ಸ್ವಾಗತಿಸಿದರು. ರಾಜು ಗಿರಿಯಪ್ಪನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ
Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.