ಕಾಂಗ್ರೆಸ್ ದುಷ್ಟರಕೂಟಕ್ಕೆ ದಿಗ್ವಿಜಯಸಿಂಗ್ ಮುಖ್ಯಸ್ಥ
Team Udayavani, Feb 18, 2017, 6:58 AM IST
ಮೈಸೂರು: ಕಾಂಗ್ರೆಸ್ ಹೈಕಮಾಂಡ್ಗೆ ಕಪ್ಪಕೊಡುವ ಸಲುವಾಗಿಯೇ ಸಿಎಂ ಸಿದ್ದರಾಮಯ್ಯ ದುಷ್ಟರಕೂಟವನ್ನೇ ರಚಿಸಿಕೊಂಡಿದ್ದಾರೆ. ಆ ಕೂಟದ ಮೂಲಕವೇ ಎಲ್ಲರನ್ನೂ ಸಮಾಧಾನಪಡಿಸುತ್ತಿದ್ದು, ದುಷ್ಟರಕೂಟಕ್ಕೆ ದಿಗ್ವಿಜಯಸಿಂಗ್
ಮುಖ್ಯಸ್ಥರಾಗಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಆರೋಪಿಸಿದರು.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಚಿವ ಎಚ್ .ಸಿ.ಮಹದೇವಪ್ಪ ಸಿದ್ದರಾಮಯ್ಯ ಅವರ ಗುಲಾಮ. ಆತ ರಾಜಕೀಯದಲ್ಲಿರುವುದೇ ಸಿದ್ದರಾಮಯ್ಯನಿಂದ. ಹೀಗಾಗಿ ಆತನಿಗೆ ವೋಟು, ಹಣ, ಅಧಿಕಾರ ಎಲ್ಲವನ್ನೂ ಕೊಟ್ಟಿದ್ದು ಸಿದ್ದರಾಮಯ್ಯ. ಅವರ ಕೃಪಾಕಟಾಕ್ಷವಿಲ್ಲದೇ ಹೋದರೆ ಮಹದೇವಪ್ಪಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಶಕ್ತಿಯೂ ಇಲ್ಲ ಎಂದು
ಲೇವಡಿ ಮಾಡಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ?: ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಂಡರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಪಡೆಯುತ್ತೀರಾ ಎಂದು ಸಿದ್ದರಾಮಯ್ಯ ಅವರಿಗೆ ಪ್ರಸಾದ್ ಸವಾಲೆಸೆದರು. ಉಪ
ಚುನಾವಣೆಯಲ್ಲಿ ಗೆಲ್ಲುವ ಕಾರಣಕ್ಕಾಗಿ ಸಿದ್ದರಾಮಯ್ಯ ತಮ್ಮ ಸಂಪುಟ ಮಾತ್ರವಲ್ಲದೆ ಎಐಸಿಸಿಯ ಎಲ್ಲ ಮುಖಂಡರನ್ನೂ ಕರೆದುಕೊಂಡು ಬರಲಿ. ಉಪ ಚುನಾವಣೆಯಲ್ಲಿ ನಾನು ಸೋತರೆ ರಾಜಕೀಯ ಸನ್ಯಾಸ ಸ್ವೀಕರಿಸುತ್ತೇನೆ. ಕಾಂಗ್ರೆಸ್ ಸೋತರೆ ನೀವು ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ತೆಗೆದು ಕೊಳ್ಳುತ್ತೀರಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.