ಚಿಕ್ಕ-ಪುಟ್ಟ ಭಿನ್ನಾಭಿಪ್ರಾಯ ಬಿಡಿ


Team Udayavani, Feb 18, 2017, 1:21 PM IST

dvg2.jpg

ದಾವಣಗೆರೆ: ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಎಚ್‌.ಡಿ. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬ ಜನರ ಆಸೆ, ನಿರೀಕ್ಷೆ, ಕನಸು ನನಸಾಗಿಸುವ ನಿಟ್ಟಿನಲ್ಲಿ ಜೆಡಿಎಸ್‌ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಬೂತ್‌ ಮಟ್ಟದಿಂದ ಪಕ್ಷ ಸಂಘಟಿಸಬೇಕು ಎಂದು ಜೆಡಿಎಸ್‌ ಕೋರ್‌ ಕಮಿಟಿ ಸಮಿತಿ ಸದಸ್ಯ, ಸೊರಬ ಶಾಸಕ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ. 

ಶುಕ್ರವಾರ ಚೇತನಾ ಹೋಟೆಲ್‌ ಸಭಾಂಗಣದಲ್ಲಿ ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ 20 ತಿಂಗಳ ಕಾಲ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಉತ್ತಮ ಆಡಳಿತ ನಡಸಿದ್ದರು. ಬಿಜೆಪಿ, ಕಾಂಗ್ರೆಸ್‌ ಆಡಳಿತದಿಂದ ಬೇಸತ್ತಿರುವ ಜನರು, ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಹೊಂದಿದ್ದಾರೆ.

ಆಸೆ, ನಿರೀಕ್ಷೆ ಇದ್ದ ಮಾತ್ರಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದಿಲ್ಲ. ಇರುವಂಥಹ ಚಿಕ್ಕ ಪುಟ್ಟ ವೈಮನಸ್ಸು ಬಿಟ್ಟು ಎಲ್ಲರೂ ಒಂದಾಗಿ ತಳ ಮಟ್ಟದಿಂದ ಪಕ್ಷವನ್ನು  ಕಟ್ಟಿ, ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದರು. ದಾವಣಗೆರೆ ಜಿಲ್ಲೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇವೆ ಎಂಬುದು ಗಮನಕ್ಕೆ ಬಂದಿದೆ. ಜಿಲ್ಲಾ ಅಧ್ಯಕ್ಷರು ಎಲ್ಲವನ್ನೂ ಬಗೆಹರಿಸಿ, ಜಿಲ್ಲಾ, ತಾಲೂಕು ಸಮಿತಿ ರಚಿಸಿ, ಕೋರ್‌ ಕಮಿಟಿಗೆ ವರದಿ ನೀಡಬೇಕು.

ಎಲ್ಲಾ ಕ್ಷೇತ್ರಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿ, ಪಕ್ಷ ಸಂಘಟಿಸಬೇಕಿದೆ ಎಂದು ತಿಳಿಸಿದರು. ರಾಷ್ಟ್ರೀಯ ಪಕ್ಷಗಳ ಆಡಳಿತ ನೋಡಿರುವ ಜನರು, ಈಗ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಮಸ್ಯೆ ನಿವಾರಣೆ ಸಾಧ್ಯ ಎಂಬ ಕಾರಣಕ್ಕೆ ಜೆಡಿಎಸ್‌ನತ್ತ ಒಲವು ತೋರುತ್ತಿದ್ದಾರೆ. ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಜನರ ಮನದಲ್ಲಿರುವ ಆಸೆ ಕಾರ್ಯಗತವಾಗಲು ಶಕ್ತಿ ಮೀರಿ ಕೆಲಸ ಮಾಡಬೇಕು.

ಮತ್ತೆ ಇಂತಹ ಅವಕಾಶ ದೊರೆಯದು. ಚುನಾವಣೆಯಲ್ಲಿ ಸೋತಲ್ಲಿ 6 ವರ್ಷ ಕಾಲ ಸುಮ್ಮನಿರಬೇಕಾಗುತ್ತದೆ. ಹಾಗಾಗಿ ಈ ಕ್ಷಣದಿಂದಲೇ ಪಕ್ಷದ ಘಟನೆಯಲ್ಲಿ ತೊಡಗಬೇಕು ಎಂದು ತಿಳಿಸಿದರು. ಹರಿಹರ ಶಾಸಕ ಎಚ್‌.ಎಸ್‌. ಶಿವಶಂಕರ್‌ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಗೊಂದಲವೇ ಇಲ್ಲ. ಪಕ್ಷ ಮುಗಿಸುವ ಸಂಚು ಮಾಡುವವರಿಗೆ ಅವಕಾಶವೇ ಇಲ್ಲ. ಬೂತ್‌ ಮಟ್ಟದಿಂದ ಪಕ್ಷ ಕಟ್ಟುವಂತಹವರಿಗೆ ಸದಾ ಸ್ವಾಗತ ಇದೆ.

ಜಿಲ್ಲೆಯಲ್ಲಿ ಜೆಡಿಎಸ್‌ ಶಕ್ತಿ ತೋರಿಸುವುದಕ್ಕಾಗಿ ಜಿಲ್ಲಾ ಸಮಾವೇಶಕ್ಕಾಗಿ ಕೋರ್‌ ಕಮಿಟಿಯವರು ಅವಕಾಶ ನೀಡಬೇಕು. ಪಕ್ಷದ ರಾಜ್ಯ ಅಧ್ಯಕ್ಷ ಕುಮಾರಸ್ವಾಮಿ ಅವರು ಮಾ. 15 ರಿಂದ 20ರ ಒಳಗೆ ಸಮಾವೇಶ ನಡೆಸಿ, 120 ಅಭ್ಯರ್ಥಿಗಳ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ದಾವಣಗೆರೆ ಇಲ್ಲವೇ ಹರಿಹರದಲ್ಲೇ ಆ ಕಾರ್ಯಕ್ರಮ ನಡೆಸುವುದಕ್ಕೆ ಅವಕಾಶ ನೀಡಿದಲ್ಲಿ ಅಭೂತಪೂರ್ವ ಕಾರ್ಯಕ್ರಮ ಆಯೋಜಿಸಲಾಗುವುದು. 

ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 3 ಕ್ಷೇತ್ರದಲ್ಲಿ ಪಕ್ಷ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.  ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಇದೆ. ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎಂತಂತೋ ಭಾಗ್ಯಗಳ ಯೋಜನೆ ಜಾರಿಗೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಸಾಲ ಮನ್ನಾ ಮಾಡುವ ಮೂಲಕ ರೈತರ ಪುನಶ್ಚೇತನ ಭಾಗ್ಯ ಜಾರಿಗೊಳಿಸಲಿ ಎಂದು ಒತ್ತಾಯಿಸಿದರು.  

ಪಕ್ಷದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ  ಬಿ.ಎಂ. ಫಾರೂಖ್‌ ಮಾತನಾಡಿ, 100 ವರ್ಷ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಗೆ ನಂಜನಗೂಡು ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳೇ ಸಿಗದೇ ಇದ್ದ ಕಾರಣಕ್ಕೆ ಜೆಡಿಎಸ್‌ ನಲ್ಲಿದ್ದ ಕಳಲೆ ಕೇಶವಮೂರ್ತಿ ಅವರಿಗೆ ಆಸೆ, ಆಮಿಷ ತೋರಿಸಿ, ಪಕ್ಷಕ್ಕೆ ಸೇರಿಸಿಕೊಂಡಿದೆ. ಬಿಜೆಪಿಗೂ ಅವರದ್ದೇ ಪಕ್ಷದ ಅಭ್ಯರ್ಥಿಗಳಿಲ್ಲ. ಕಾಂಗ್ರೆಸ್‌ ಅಲ್ಪಸಂಖ್ಯಾತರ ಮತ ಮಾತ್ರ ಬೇಕು. ಅಭಿವೃದ್ಧಿ ಬೇಡ ಎಂದು ದೂರಿದರು.

ಜಿಲ್ಲಾ ಅಧ್ಯಕ್ಷ ಬಿ. ಚಿದಾನಂದಪ್ಪ ಮಾತನಾಡಿದರು. ಸೈಯದ್‌ ರೋಷನ್‌ಸಾಬ್‌, ಯುವ ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಜೆ. ಅಮಾನುಲ್ಲಾಖಾನ್‌, ಮುಖಂಡ ಕೆ.ಬಿ.ಕಲ್ಲೇರುದ್ರೇಶ್‌, ಶೀಲಾಕುಮಾರಿ ಇತರರು ಇದ್ದರು. ಆರ್‌. ಸಂಗನಗೌಡ್ರು ನಿರೂಪಿಸಿದರು.   

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.