20ರಂದು ಬಿಜೆಪಿ ಬೃಹತ್‌ ಪ್ರತಿಭಟನೆ


Team Udayavani, Feb 18, 2017, 1:23 PM IST

dvg3.jpg

ದಾವಣಗೆರೆ: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಹಗರಣಗಳ ಸರಮಾಲೆ ವಿರೋಧಿಸಿ ಫೆ. 20 ರಂದು ಬೃಹತ್‌ ಪ್ರತಿಭಟನೆ ಹಮ್ಮಿಧಿ ಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌ ತಿಳಿಸಿದ್ದಾರೆ.  ಸೋಮವಾರ ಬೆಳಗ್ಗೆ 11ಕ್ಕೆ ಪಕ್ಷದ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದರು. ಭ್ರಷ್ಟಾಚಾರ, ಹಗರಣಗಳ ವಿರುದ್ಧ ನಿರಂತರ ಹೋರಾಟ ನಡೆಸುವುದಾಗಿ ವಿಧಾನ ಸೌಧದಲ್ಲೇ ತೊಡೆ ತಟ್ಟಿದ್ದರು. ಈಗ ಅದೇ ಸಿದ್ದರಾಮಯ್ಯನವರೇ ಖುದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಡುಗಡೆಯಾಗಿ ಪಡೆದಿದ್ದ ದುಬಾರಿ ವಾಚ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆಯಾಗಿ ಉತ್ತರ ನೀಡಿದ್ದರು.

ಅದು ಉಡುಗರೆ ವಾಚ್‌ ಎಂಬುದಾಗಿ ಹೇಳಳು ಒಂದು ವಾರ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮಂತ್ರಿ ಮಂಡಲ ದಲ್ಲಿರುವ ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್‌, ಶಾಸಕ ಎಂ.ಟಿ.ಬಿ. ನಾಗರಾಜ್‌ ಮನೆ ಮೇಲೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಯಿತು. ಅವರ ಆಪ್ತ ಅಧಿಕಾರಿಧಿ ಗಳಾದ ಜಯಚಂದ್ರ, ಚಿಕ್ಕರಾಯಪ್ಪ ಬಳಿಯೂ ಅಕ್ರಮ ಆಸ್ತಿ ಪತ್ತೆಯಾದರೂ ಈವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಮಾತನಾಡಿಲ್ಲ.

ಕ್ರಮದ ಬಗ್ಗೆ ಅಪ್ಪಿತಪ್ಪಿಯೂ ಹೇಳಿಲ್ಲ. ಇದನೆಲ್ಲಾ ನೋಡಿದರೆ ಎಲ್ಲಿಯೋ ಒಂದು ಕಡೆ ಅವರೇ ಪ್ರತ್ಯಕ್ಷ ಸಹಕಾರ ಇದೆ ಎಂದೆನೆಸುತ್ತಿದೆ ಎಂದು ದೂರಿದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರ ಸರ್ಕಾರ ಬರೀ ಹಗರಣದಲ್ಲಿ ಮುಳುಗಿದೆ. ಬರದಿಂದ ತತ್ತರಿಸಿರುವ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.   

1 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಒಳಗಾಗಿದ್ದರೂ ಒಬ್ಬ ರೈತರ ಮನೆಗೆ ಭೇಟಿ ನೀಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಬರದ ಪರಿಸ್ಥಿತಿ ನಿರ್ವಹಣೆಯತ್ತ  ಗಮನ ನೀಡುತ್ತಿಲ್ಲ. ಸರ್ಕಾರ ಇಡೀರಾಜ್ಯವನ್ನು ಹಾಳುಕೊಂಪೆಯನ್ನಾಗಿ ಮಾಡುತ್ತಿದೆ. ಭ್ರಷ್ಟಾಚಾರ, ಹಗರಣದ ಸರ್ಕಾರ ತೊಲಗಿಸುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.  ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಕಾಂಗ್ರೆಸ್‌ನವರನ್ನೇ ಗುರಿಯಾಗಿಟ್ಟುಕೊಂಡು ಐಟಿ ದಾಳಿ ನಡೆಸುತ್ತಿಲ್ಲ.

ಅಕ್ರಮ ಆಸ್ತಿ ಇದ್ದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಬೇಕಾದಲ್ಲಿ ಬಿಜೆಪಿ ಮುಖಂಡರ ಬಗ್ಗೆಯೂ ಐಟಿ ಇಲಾಖೆಗೆ ಮಾಹಿತಿ ನೀಡಲಿ. ಬೇಡ ಎನ್ನುವರು ಯಾರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ತಾಪಂ ಸದಸ್ಯ ಆಲೂರು ನಿಂಗರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ರಮೇಶ್‌ನಾಯ್ಕ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ವಕ್ತಾರ ಕೊಂಡಜ್ಜಿ ಜಯಪ್ರಕಾಶ್‌, ಕೆ. ಹೇಮಂತ್‌ ಕುಮಾರ್‌, ಎಚ್‌.ಎಸ್‌. ಲಿಂಗರಾಜ್‌, ಸೊಕ್ಕೆ ನಾಗರಾಜ್‌, ಎನ್‌. ರಾಜಶೇಖರ್‌, ಧನುಶ್‌, ಅರುಣ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.