ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ: ಜೆಡಿಎಸ್‌ ಸ್ಪರ್ಧೆ


Team Udayavani, Feb 19, 2017, 3:45 AM IST

HD-Kumarswamy-700.jpg

ಮೈಸೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಸದ್ಯದಲ್ಲೇ ಪ್ರಕಟವಾಗಲಿರುವುದರಿಂದ ಇಲ್ಲಿ ಸಭೆ ನಡೆಸಿ ಕಾರ್ಯಕರ್ತರ ಭಾವನೆ ತಿಳಿದುಕೊಂಡಿದ್ದೇನೆ. ಜೆಡಿಎಸ್‌ನಲ್ಲಿ ಅಭ್ಯರ್ಥಿಗಳಿಗೇನು ಕೊರತೆ ಇಲ್ಲ. ಎರಡೂ ಕ್ಷೇತ್ರದಲ್ಲಿ ಹಲವು ಮಂದಿ ಸ್ಪರ್ಧಾಕಾಂಕ್ಷಿಗಳಿದ್ದಾರೆ. ಅಲ್ಲದೇ, ಜನರ ಒಲವು ಕೂಡ ಜೆಡಿಎಸ್‌ ಪರವಾಗಿದೆ. ಹಿಂದೆ ಬಿಜೆಪಿ ಆಪರೇಷನ್‌ ಕಮಲ ಮಾಡಿದ್ದ ಸಂದರ್ಭದಲ್ಲಿಯೇ 20 ಉಪ ಚುನಾವಣೆ ಎದುರಿಸಿದ ತನಗೆ ಈ ಎರಡು ಉಪ ಚುನಾವಣೆ ಎದುರಿಸುವ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.

ಪಕ್ಷಕ್ಕೆ ದ್ರೋಹ ಎಸಗಿದ ಕಳಲೆ:
ಕಾಂಗ್ರೆಸ್‌ ಸೇರಿರುವ ಕಳಲೆ ಕೇಶವಮೂರ್ತಿ, ಪಕ್ಷ ಬಿಡುವ ಕುರಿತು ತನ್ನೊಡನೆ ಮಾತುಕತೆ ನಡೆಸಿರಲಿಲ್ಲ. ಅಲ್ಲದೆ, ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ ಎಂದು ಎಲ್ಲರೆದರು ಹೇಳಿದ್ದ ಕೇಶವಮೂರ್ತಿ, ಪಕ್ಷ ಬಿಟ್ಟು ಹೋಗಿದ್ದಾರೆ. ಆ ಬಗ್ಗೆ ತಾನು ತಲೆಕೆಡಿಸಿಕೊಂಡಿಲ್ಲ. ಪಕ್ಷದಲ್ಲಿ ಕ್ರಿಯಾಶೀಲರಾಗಿರುವ ಹೊಸ ಮುಖಗಳಿಗೆ ಅವಕಾಶ ನೀಡುತ್ತೇನೆ ಎಂದು ತಿಳಿಸಿದರು.

ನಂಜನಗೂಡು ಕ್ಷೇತ್ರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಇನ್ನಿಲ್ಲದ ಪ್ರೀತಿ ಬಂದಿದೆ. ಶ್ರೀನಿವಾಸಪ್ರಸಾದ್‌ ಕಾಂಗ್ರೆಸ್‌ನಲ್ಲಿ ಇರುವವರೆಗೂ ಇಲ್ಲದ ಪ್ರೀತಿ, ಈಗ ಹೆಚ್ಚಾಗಿದೆ. ನಿಯಮ ಗಾಳಿಗೆ ತೂರಿ ನೂರಾರು ಕೋಟಿ ಯೋಜನೆಗೆ ಅನುಮೋದನೆ ನೀಡುತ್ತಿದ್ದಾರೆ. 

ಶ್ರೀನಿವಾಸಪ್ರಸಾದ್‌ ಜೊತೆಗಿದ್ದಾಗಲೇ ಇಷ್ಟು ಅನುದಾನ ನೀಡಿದ್ದರೆ ಬದ್ಧತೆ ಇರುತ್ತಿತ್ತು. ಈಗ ಜನರ ದುಡ್ಡನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.

ಚಾಮರಾಜನಗರ ಜಿಲ್ಲೆಯ ಸ್ಥಿತಿ ಇನ್ನೂ ಶೋಚಿನೀಯವಾಗಿದೆ. ಅಲ್ಲಿನ ಜನ ವೀರಪ್ಪನ್‌ ಬದುಕಿದ್ದಾಗಲೇ ಚೆನ್ನಾಗಿತ್ತು ಎಂದು ಮಾತನಾಡಿಕೊಳ್ಳುತ್ತಿದ್ದಾರೆ ಎಂದರೆ ಈ ಸರ್ಕಾರದಲ್ಲಿ ವೀರಪ್ಪನ್‌ಗಿಂತಲೂ ಕೆಟ್ಟ ದರೋಡೆಕೋರರು ಇದ್ದಾರೆ ಎಂದಾಯಿತು ಎಂದು ಅವರು ಲೇವಡಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಂತೆ ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಹೋಲಿಕೆ ಮಾಡುವುದು ಸರಿಯಲ್ಲ ಎಂಬುದು ಸತ್ಯ, ಏಕೆಂದರೆ ತಮಗೆ ಬೇರೆ ಪಕ್ಷದಿಂದ ಅಭ್ಯರ್ಥಿಗಳನ್ನು ಕರೆತಂದು ಚುನಾವಣೆಯಲ್ಲಿ ಕಣಕ್ಕಿಳಿಸಬೇಕಾದಷ್ಟು ದಾರಿದ್ರé ಬಂದಿಲ್ಲ. ಇತ್ತೀಚೆಗೆ ನಡೆದ ಅಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯುಲ್ಲಿ ಕೂಡ ಕಾಂಗ್ರೆಸ್‌ ಠೇವಣಿ ಕಳೆದುಕೊಂಡಿದೆ, ಹೀಗಿರುವಾಗ ಕಾಂಗ್ರೆಸ್‌ಗೆ ಜೆಡಿಎಸ್‌ ಅನ್ನು ಹೇಗೆ ಹೋಲಿಕೆ ಮಾಡಲು ಸಾಧ್ಯ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

ದಬ್ಟಾಳಿಕೆ:
ನಂಜನಗೂಡಿಗೆ ತೆರಳಿದ ತನ್ನನ್ನು ಬರಮಾಡಿಕೊಳ್ಳಲು ಬಂದ ಪಕ್ಷದ ಕಾರ್ಯಕರ್ತರ ಬೈಕ್‌, ಕಾರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಚುನಾವಣೆಗೆ ಮುನ್ನವೇ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇನ್ನು ಮುಂದೆ ಹೇಗೋ ಎಂಬ ಆತಂಕ ಕಾಡುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.