ಬಿಜೆಪಿ ಭರವಸೆ ಕಾರ್ಯಗತಗೊಂಡಿಲ್ಲ: ಆಸ್ಕರ್‌ 


Team Udayavani, Feb 19, 2017, 8:45 AM IST

18-LOC-5.jpg

ಉಡುಪಿ: ಚುನಾವಣಾ ಪೂರ್ವದಲ್ಲಿ ಬಿಜೆಪಿ ನೀಡಿದ್ದ ಯಾವುದೇ ಭರವಸೆ ಕಾರ್ಯಗತವಾಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್‌ ಫೆರ್ನಾಂಡಿಸ್‌ ಟೀಕಿಸಿದ್ದಾರೆ. ಕಪ್ಪು ಹಣ ತರುವ ಭರವಸೆ ಯೊಂದಿಗೆ ನೋಟು ಅಪಮೌಲ್ಯ ಗೊಳಿಸಲಾಗಿದೆ ಎಂದು ಕೇಂದ್ರ ಹೇಳಿಕೆ ನೀಡುತ್ತಿದೆ. ಚಲಾವಣೆಯಲ್ಲಿ ಇದ್ದ 15ರಿಂದ 18 ಲ.ಕೋ. ರೂ.ಬ್ಯಾಂಕ್‌ಗಳಿಗೆ ಮರು ಪಾವತಿಯಾಗಿದೆ. ಹೀಗಿರುವಾಗ ಕಪ್ಪು ಹಣ ತರುವ ಉದ್ದೇಶ ಈಡೇರಿದೆಯೋ ಎಂಬ ಬಗ್ಗೆ ಸರಕಾರದಿಂದ ಇಷ್ಟರವರೆಗೆ ಯಾವುದೇ ಹೇಳಿಕೆ ಪ್ರಕಟಗೊಂಡಿಲ್ಲ. ಆರ್‌ಬಿಐ ಗವರ್ನರ್‌ ಜತೆಗೆ ಚರ್ಚಿಸದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕೇಂದ್ರ ಸರಕಾರದ ನಡೆಯಿಂದ ದೇಶದ ಆರ್ಥಿಕತೆ ಹಾಗೂ ಉತ್ಪಾದನೆ ಹಿಂಜರಿತ ಕಂಡಿದೆ. ಈ ಸಮಸ್ಯೆಗಳಿಗೆ ಕೇಂದ್ರ ಸರಕಾರ ಯಾವುದೇ ಪರಿಹಾರ ಕಂಡು ಕೊಂಡಿಲ್ಲ ಎಂದು ಅವರು ಜಿಲ್ಲಾ ಕಾಂಗ್ರೆಸ್‌ ಸಭೆಯಲ್ಲಿ ಹೇಳಿದರು.

ಕಾಂಗ್ರೆಸ್‌ಗೆ ಪೂರಕ
ಭ್ರಷ್ಟಾಚಾರವನ್ನು ವಿರೋಧಿಸುತ್ತೇವೆ ಎನ್ನುವ ಮೋದಿಯವರು ಸಹರಾ, ಬಿರ್ಲಾ ಕಂಪೆನಿಗಳಿಂದ ಹಣ ಪಡೆದಿರುವುದು ಕಂಪೆನಿಗಳ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡು ಬರುತ್ತದೆ. ಆದರೆ ಕೇಂದ್ರ ಸರಕಾರದಿಂದ ಇಷ್ಟರವರೆಗೆ ಇದಕ್ಕೆ ಸ್ಪಷ್ಟನೆ ಬಂದಿಲ್ಲ. 1972ರಲ್ಲಿ ಇಂದಿರಾ ಗಾಂಧಿಯವರು ಸೋತ ಅನಂತರ 1980ರ ಲೋಕಸಭಾ ಚುನಾವಣೆಯಲ್ಲಿ ಇಂದಿರಾ ಅವರನ್ನು ಮರು ಆಯ್ಕೆ ಮಾಡುವ ವಾತಾವರಣ ಸೃಷ್ಟಿಯಾ ದಂತೆ ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಪೂರಕ ವಾತಾ
ವರಣ ಉಂಟಾಗಲಿದೆ ಎಂದರು.

ಕಾಂಗ್ರೆಸ್‌ ಮುತುವರ್ಜಿ
ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, 9/11, ಸಿಆರ್‌ಝಡ್‌, ಮರಳು ಸಮಸ್ಯೆಗಳು ಬಿಜೆಪಿ ಆಡಳಿತ ಅವಧಿಯ ಕೊಡುಗೆಗಳು. ಆದರೆ ಸಮಸ್ಯೆ ಪರಿಹಾರಕ್ಕಾಗಿ ಕಾಂಗ್ರೆಸ್‌ ಪಕ್ಷ ಮುತುವರ್ಜಿ ವಹಿಸಿದೆ. ಕಾನೂನು ತೊಡಕನ್ನು ಪರಿಹರಿಸಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಸರಕಾರ ಬದ್ಧವಾಗಿದೆ ಎಂದರು. ಈಗಾಗಲೇ ಹೊಸ ತಾಲೂಕು ರಚನೆಗಾಗಿ ಬ್ರಹ್ಮಾವರ, ಬೈಂದೂರು, ಕಾಪು, ಹೆಬ್ರಿಗಳಲ್ಲಿ ಬೇಡಿಕೆಗಳು ಬಂದಿವೆ. ಸಮಿತಿಯ ವರದಿಯ ಆಧಾರದ ನೆಲೆಯಲ್ಲಿ ಹಂತ ಹಂತ ವಾಗಿ ಹೊಸ ತಾಲೂಕುಗಳ  ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಸಮಾವೇಶ
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಕೆಎಸ್‌ಆರ್‌ಟಿಸಿ ಅಧ್ಯಕ್ಷ, ಶಾಸಕ ಗೋಪಾಲ ಪೂಜಾರಿ ಅವರು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ ಮತ್ತೂಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯುವ ಸಲುವಾಗಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಬ್ಲೋಸಂ ಫೆರ್ನಾಂಡಿಸ್‌, ಮುಖಂಡರಾದ ಪ್ರತಾಪಚಂದ್ರ ಶೆಟ್ಟಿ, ಗೋಪಾಲ ಭಂಡಾರಿ, ಎಂ.ಎ. ಗಫ‌ೂರ್‌, ಅಶೋಕ್‌ ಕುಮಾರ್‌ ಕೊಡವೂರು, ಕೃಷ್ಣರಾಜ ಸರಳಾಯ, ಮುರಳಿ ಶೆಟ್ಟಿ, ಅಬ್ದುಲ್‌ ಅಜೀಜ್‌, ಎಸ್‌. ನಾರಾಯಣ, ಯತೀಶ್‌ ಕರ್ಕೆರಾ, ಸರಳಾ ಕಾಂಚನ್‌, ಎಂ.ಪಿ ಮೊದಿನಬ್ಬ, ಶ್ಯಾಮಲಾ ಭಂಡಾರಿ, ಜಯಶ್ರೀ ಕೃಷ್ಣರಾಜ್‌, ವೆರೋನಿಕಾ ಕರ್ನೇಲಿಯೊ, ಚಂದ್ರಿಕಾ ಕೇಳ್ಕರ್‌, ಎಲ್ಲೂರು ಶಶಿಧರ ಶೆಟ್ಟಿ, ಜನಾರ್ದನ ತೋನ್ಸೆ, ಸುಧೀರ್‌ ಹೆಗ್ಡೆ, ಸುಧಾಕರ್‌ ಕೋಟ್ಯಾನ್‌, ನಿತ್ಯಾನಂದ ಶೆಟ್ಟಿ, ಸತೀಶ್‌ ಅಮೀನ್‌ ಪಡುಕೆರೆ, ಮಲ್ಯಾಡಿ ಶಿವರಾಮ್‌ ಶೆಟ್ಟಿ, ವಿಕಾಸ್‌ ಹೆಗ್ಡೆ, ಪ್ರಶಾಂತ್‌ ಪೂಜಾರಿ, ವಿಶ್ವಾಸ್‌ ಅಮೀನ್‌, ಸುಬ್ರಹ್ಮಣ್ಯ, ದಿನೇಶ್‌ ಪುತ್ರನ್‌, ಮಂಜಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.