ಕೊಲೆ, ದರೋಡೆಗೆ ಸಂಚು: 6 ಮಂದಿ ಸೆರೆ, ಸೊತ್ತು ವಶ


Team Udayavani, Feb 20, 2017, 3:45 AM IST

1902mlr3.jpg

ಮಂಗಳೂರು: ತಣ್ಣೀರುಬಾವಿ ಬೀಚ್‌ ಬಳಿ ವ್ಯಕ್ತಿಯೊಬ್ಬರ ಕೊಲೆಗೆ ಮತ್ತು ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ 6 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ 2 ಪಿಸ್ತೂಲು, 7 ಸಜೀವ ಮದ್ದು ಗುಂಡುಗಳು, 2 ಚೂರಿ, 3 ಮೊಬೈಲ್‌ ಫೋನ್‌, ಮಾರುತಿ ಸ್ವಿಫ್ಟ್‌ ಕಾರು ಮತ್ತು ಆಟೋ ರಿಕ್ಷಾವನ್ನು ವಶ ಪಡಿಸಿಕೊಂಡಿದ್ದಾರೆ. 

ಕೃಷ್ಣಾಪುರ 7ನೇ ಬ್ಲಾಕ್‌ನ ಸಫಾÌನ್‌ ಹುಸೈನ್‌ ಯಾನೆ ಸುಹೈನ್‌ ಯಾನೆ ಸುಭಾಷ್‌ (33) ಮತ್ತು ಮೊಹಮದ್‌ ಫೈಝಲ್‌ ಇಬ್ರಾಹಿಂ ಶೇಖ್‌ (33), ಎಮ್ಮೆಕೆರೆಯ ಅಬ್ದುಲ್‌ ನಾಸಿರ್‌ ಯಾನೆ ಡಾನ್‌ ನಾಸಿರ್‌ (34), ಮುಕ್ಕ ಸುರತ್ಕಲ್‌ನ ಶಂಸುದ್ದೀನ್‌ (27), ಉಳ್ಳಾಲ ಹಳೆಕೋಟೆಯ ಉಮ್ಮರ್‌ ಫಾರೂಕ್‌ ಯಾನೆ ಮಾನಾ ಫಾರೂಕ್‌ (25) ಮತ್ತು ಮೊಹಮದ್‌ ಅನ್ಸಾರ್‌ (30) ಬಂಧಿತರು. 

ಜೈಲಿನಿಂದ ಇತ್ತೀಚೆಗೆ ಬಿಡುಗಡೆಗೊಂಡ ಕೆಲವರು ರವಿವಾರ ಬೆಳಗ್ಗೆ ತಣ್ಣೀರುಬಾವಿ ಬೀಚ್‌ ರಸ್ತೆಯಲ್ಲಿ ಕಾರು ಮತ್ತು ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಕಾರು ಮತ್ತು ರಿಕ್ಷಾವನ್ನು ಅಡ್ಡಗಟ್ಟಿ ಅದರಲ್ಲಿದ್ದ ಆರೋಪಿಗಳನ್ನು ಮತ್ತು ಅವರ ಬಳಿ ಇದ್ದ ಶಸ್ತ್ರಾಸ್ತÅಗಳನ್ನು ವಶಕ್ಕೆ ಪಡೆದುಕೊಂಡರು. ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ನ ಡಿಸಿಪಿಗಳಾದ ಕೆ. ಎಂ. ಶಾಂತರಾಜು ಮತ್ತು ಡಾ | ಸಂಜೀವ್‌ ಎಂ. ಪಾಟೀಲ್‌ ಅವರು ರವಿವಾರ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 

2 ತಿಂಗಳ ಹಿಂದೆ ಹೊರಗೆ ಬಂದಿದ್ದ ಸಫಾನ್‌
ಸಫಾÌನ್‌ ಹುಸೈನ್‌ ಮೇಲೆ ಕೊಲೆ, ಕೊಲೆಗೆ ಯತ್ನ, ಅಪಹರಣ, ದರೋಡೆ, ಪೊಲೀಸರ ಮೇಲೆ ಹಲ್ಲೆ ಸಹಿತ 23‌ ಪ್ರಕರಣಗಳು ದಾಖಲಾಗಿವೆ. ಗೂಂಡಾ ಕಾಯ್ದೆಯಡಿ ಒಂದು ವರ್ಷದ ಬಂಧನ ಅವಧಿಯನ್ನು ಕಳೆದು ಎರಡು ತಿಂಗಳ ಹಿಂದೇಯಷ್ಟೇ ಬಿಡುಗಡೆ ಹೊಂದಿ ಹೊರಗೆ ಬಂದಿದ್ದನು. ದೇರಳಕಟ್ಟೆಯ ಬ್ಲೂ ಫಿಲಂ ಚಿತ್ರೀಕರಣ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದನು. 

ಮೊಹಮದ್‌ ಫೈಝಲ್‌ ಇಬ್ರಾಹಿಂ ಶೇಕ್‌ ವಿರುದ್ಧ ಕೊಲೆಗೆ ಯತ್ನ, ದರೋಡೆ, ಜೈಲಿನಲ್ಲಿ ಗಲಾಟೆ ಮುಂತಾದ 8 ಪ್ರಕರಣಗಳಿದ್ದು, ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಹೊಂದಿದ್ದನು. 

ಶಂಸುದ್ದೀನ್‌ ವಿರುದ್ಧ  ಕೊಲೆ, ಕೊಲೆಗೆ ಯತ್ನ, ಅಪಹರಣ, ದರೋಡೆ, ಜೈಲ್‌ನಲ್ಲಿ ಗಲಾಟೆ ಮತ್ತಿತರ 8 ಪ್ರಕರಣಗಳು ದಾಖಲಾಗಿದ್ದು, 8 ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬಂದಿದ್ದನು.
 
ಆರೋಪಿ ಅಬ್ದುಲ್‌ ನಾಸಿರ್‌ ಯಾನೆ ಡಾನ್‌ ನಾಸಿರ್‌ ವಿರುದ್ಧ ಕೊಲೆಗೆ ಯತ್ನ, ಅಪಹರಣ, ದರೋಡೆ, ಕೋಮು ಗಲಭೆ ಮುಂತಾದ 9 ಪ್ರಕರಣಗಳು ದಾಖಲಾಗಿವೆ. ಉಮರ್‌ ಫಾರೂಕ್‌ ವಿರುದ್ಧ ಕೊಲೆ ಯತ್ನ, ದರೋಡೆ ಯತ್ನ, ಹಲ್ಲೆ ಸೇರಿದಂತೆ ಮೂರು ಪ್ರಕರಣಗಳಿವೆ. 

6ನೇ ಆರೋಪಿ ಮೊಹಮದ್‌ ಅನ್ಸಾರ್‌ ವಿರುದ್ಧ ಯಾವುದೇ ಹಳೆ ಆರೋಪಗಳಿಲ್ಲ. ಈ ಪ್ರಕರಣದಲ್ಲಿ ಉಳಿದ ಆರೋಪಿಗಳ ಸಹಚರನಾಗಿ ಗುರುತಿಸಿಕೊಂಡಿದ್ದಾನೆ. 

ಸಿಸಿಬಿ ಇನ್ಸ್‌ಪೆಕ್ಟರ್‌ ಸುನಿಲ್‌ ವೈ. ನಾಯಕ್‌, ಸಬ್‌ ಇನ್ಸ್‌ಪೆಕ್ಟರ್‌ ಶ್ಯಾಂ ಸುಂದರ್‌, ಸಿಬಂದಿ ರಾಮ ಪೂಜಾರಿ, ಶೀನಪ್ಪ, ಗಣೇಶ್‌, ಚಂದ್ರಹಾಸ ಸನಿಲ್‌, ಚಂದ್ರ ಶೇಖರ, ಚಂದ್ರ, ಯೋಗೀಶ್‌, ಸುನಿಲ್‌, ಪ್ರಶಾಂತ್‌ ಶೆಟ್ಟಿ, ರಾಜೇಂದ್ರ ಪ್ರಸಾದ್‌, ದಾಮೋದರ, ಮಣಿ. ಅಬ್ದುಲ್‌ ಜಬ್ಟಾರ್‌, ಸುಧೀರ್‌ ಶೆಟ್ಟಿ,. ಇಸಾಕ್‌, ಅಶಿತ್‌, ವಿಶಾಲ್‌ ಡಿ’ಸೋಜಾ, ತೇಜ ಕುಮಾರ್‌ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.  ಈ ಪ್ರಕರಣದ ಕೆಲವು  ಆರೋಪಿಗಳಿಗೆ ಇತ್ತೀಚೆಗೆ  ಹತ್ಯೆಯಾದ ಕಾಲಿಯಾ ರಫೀಕ್‌ನ ನಂಟು ಇದೆ ಎನ್ನಲಾಗಿದೆ. 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.