ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ


Team Udayavani, Feb 21, 2017, 2:47 PM IST

gul5.jpg

ಕಲಬುರಗಿ: ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನಗರದಲ್ಲಿ ರಾಜ್ಯವ್ಯಾಪಿ ಕರೆ ಮೇರೆಗೆ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಸರ್ದಾರ ವಲ್ಲಭಭಾಯಿ ಪಟೇಲ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 

ಕಾಂಗ್ರೆಸ್‌ ಪಕ್ಷದ ವರಿಷ್ಠರಿಗೆ ಮುಖ್ಯಮಂತ್ರಿಗಳ ಪರವಾಗಿ 1000 ಕೋಟಿ ರೂ. ನೀಡಿರುವ ಕುರಿತು ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜು ಅವರ ಡೈರಿಯಲ್ಲಿ ಉಲ್ಲೇಖವಾಗಿದೆ. ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿರುವ ಡೈರಿಯಲ್ಲಿ ಪಕ್ಷದ ವರಿಷ್ಠರಿಗೆ ಹಣ ಸಂದಾಯ ಮಾಡಿದ್ದು, ದಾಖಲೆ ಇದೆ. ಅದನ್ನು ಸ್ವತಃ ಗೋವಿಂದರಾಜು ಅವರು ಐಟಿ ಇಲಾಖೆಗೆ ಡೈರಿಯಲ್ಲಿನ ಅಂಶಗಳು ಬಿಜೆಪಿಯವರಿಗೆ ಹೇಗೆ ಗೊತ್ತಾಗಿವೆ ಎಂದು ಪತ್ರ ಬರೆಯುವ ಮುಖಾಂತರ ಒಪ್ಪಿಕೊಂಡಿದ್ದಾರೆ. 

ಈ ಕುರಿತು ಸಮಗ್ರ ಮಾಹಿತಿ ಬಹಿರಂಗಪಡಿಸಲು ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಉಕ್ಕಿನ ಮೇಲ್ಸೇತುವೆ ಯೋಜನೆಗೆ ಮುಖ್ಯಮಂತ್ರಿಗಳ ಆಪ್ತರಿಗೆ, ಕುಟುಂಬದವರಿಗೆ 65 ಕೋಟಿ ರೂ. ಲಂಚ ನೀಡಲಾಗಿದೆ. ಆದರೆ ಭ್ರಷ್ಟಾಚಾರದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ಒಂದು ದಾಖಲೆ ತೋರಿಸಲಿ ಎಂದು ಮೊಂಡುವಾದ ಪ್ರತಿಪಾದಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಮಾಧ್ಯಮದಲ್ಲಿ ವರದಿಯಾದಂತೆ ಸಚಿವ ರಮೇಶ ಜಾರಕಿಹೊಳಿ ಮತ್ತು ಪ್ರದೇಶ ಕಾಂಗ್ರೆಸ್‌ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷಿ ಹೆಬ್ಟಾಳಕರ್‌ ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ದಾಳಿ ನಡೆದು 162 ಕೋಟಿ ರೂ.ಗಳ ಅಕ್ರಮ ಸಂಪತ್ತು, ದಾಖಲೆಗಳಿಲ್ಲದ 41 ಲಕ್ಷ ರೂ. ನಗದು, 12 ಕೆಜಿ ಚಿನ್ನಾಭರಣ ಪತ್ತೆಯಾಗಿದ್ದರೂ ಮುಖ್ಯಮಂತ್ರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ.

ಇದನ್ನು ನೋಡಿದರೆ ಮುಖ್ಯಮಂತ್ರಿಗಳು ಭ್ರಷ್ಟರ ಜತೆ ಕೈಗೂಡಿಸಿರುವುದು ಸಾಬೀತುಪಡಿಸುತ್ತದೆ. ಒಟ್ಟಾರೆ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪಕ್ಷದ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪಕ್ಷದ ನಗರ ಜಿಲ್ಲಾಧ್ಯಕ್ಷ ಮತ್ತು ವಿಧಾನ ಪರಿಷತ್‌  ಸದಸ್ಯ ಬಿ.ಜಿ. ಪಾಟೀಲ, ಮಾಜಿ ಸಚಿವರಾದ ಬಾಬುರಾವ ಚವ್ಹಾಣ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ವಿಧಾನ ಪರಿಷತ್‌ ಸದಸ್ಯರಾದ ಕೆ.ಬಿ. ಶಾಣಪ್ಪ, ಅಮರನಾಥ ಪಾಟೀಲ,

ಮಾಜಿ ಶಾಸಕ ಎಂ.ವೈ. ಪಾಟೀಲ, ಜಿಪಂ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಮುಖಂಡರಾದ ದಯಾಘನ್‌ ಧಾರವಾಡಕರ, ರವಿ ಬಿರಾದಾರ, ಪ್ರಕಾಶ ಜಮಾದಾರ, ಶರಣು ಸಲಗರ, ಸೂರ್ಯಕಾಂತ ನಾಕೇದಾರ, ವಿದ್ಯಾಸಾಗರ ಕುಲಕರ್ಣಿ, ಸಂಗಮೇಶ ರಾಜೋಳೆ, ಬಸವರಾಜ ಮತ್ತಿಮೂಡ, ಶಿವಶರಣಪ್ಪ ನಿಗ್ಗುಡಗಿ, ಮಲ್ಲಿಕಾರ್ಜುನ ಲಿಂಗದಳ್ಳಿ, ಶ್ಯಾಮರಾವ ಪ್ಯಾಟಿ, ನಾಮದೇವ ರಾಠೊಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.