ಪ್ರಗತಿಗೆ ಸಮಾಜವಾದಿ ವ್ಯವಸ್ಥೆ ಅನಿವಾರ್ಯ
Team Udayavani, Feb 21, 2017, 3:13 PM IST
ಶಹಾಬಾದ: ರಷ್ಯಾ ದೇಶ ಸಾಧನೆ ಮಾಡಿದ್ದನ್ನು ಭಾರತ ಸಾಧಿಸಬೇಕಾದರೆ ಸಮಾಜವಾದಿ ವ್ಯವಸ್ಥೆ ಅನಿವಾರ್ಯ ಎಂದು ಎಸ್ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಹೆಚ್.ವಿ. ದಿವಾಕರ್ ಹೇಳಿದರು. ಎಐಡಿಎಸ್ಒ, ಎಐಡಿವೈಒ, ಎಐಎಂಎಸ್ಎಸ್ ಹಾಗೂ ಪ್ರೇರಣಾ ಸಾಂಸ್ಕೃತಿಕ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಷ್ಯಾದ ನವೆಂಬರ್ ಮಹಾಕ್ರಾಂತಿಗೆ ಸಮರ್ಪಿತ ಶಹಾಬಾದನ 7ನೇ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಸಿನಿಮಾ, ಸಾಹಿತ್ಯ, ಟಿವಿ ಹಾಗೂ ಇತರೆ ಮಾಧ್ಯಮಗಳಿಂದ ಹರಡುತ್ತಿರುವ ಅಶ್ಲೀಲ, ಕ್ರೌರ್ಯ, ಅನೈತಿಕತೆಗಳ ವಿರುದ್ಧ ಹೋರಾಡಲು ಹೊಸ ಸಂಸ್ಕೃತಿ, ಕಲೆ, ಸಾಹಿತ್ಯದ ಅಗತ್ಯತೆ ಇದೆ ಎಂದು ಹೇಳಿದರು. ಸಮಾಜವಾದಿ ವ್ಯವಸ್ಥೆ ಇರುವವರೆಗೂ ರಷ್ಯಾದಲ್ಲಿ ನಿರುದ್ಯೋಗ, ಬಡತನ, ಅನಕ್ಷರತೆ, ಬಾಲ ಕಾರ್ಮಿಕರ ಪದ್ಧತಿಯಂತಹ ಅನಿಷ್ಠ ಕುರುಹುಗಳು ಸಿಗಲಿಲ್ಲ.
ಬದಲಿಗೆ ಅಲ್ಲಿ ಎಲ್ಲರೂ ಸಹಬಾಳ್ವೆಯನ್ನು ಸಮಾನವಾಗಿ ನಡೆಸುತ್ತಿದ್ದರು. ಅದರಿಂದಾಗಿ ಆ ದೇಶ ಕೆಲವೇ ಕೆಲವು ವರ್ಷಗಳಲ್ಲಿ ಇಡೀ ಪ್ರಪಂಚವನ್ನೇ ಬೆರಗುಗೊಳಿಸುವಂತೆ ಸಾಧಿಸಿ ತೋರಿಸಿತು ಎಂದು ಹೇಳಿದರು. ಮನಸ್ಸಿನಲ್ಲಿ ಸದಭಿರುಚಿ ಹಾಗೂ ಕೊಳೆತ ವ್ಯವಸ್ಥೆ ವಿರುದ್ಧ ಹೋರಾಡುವ ಮನೋಭಾವ ಬೆಳೆಸುವಂತಹ ಕಲೆ, ಸಾಹಿತ್ಯ, ನಾಟಕ, ಹಾಡು, ಕವನಗಳು ಸಮಾಜದಲ್ಲಿ ಬರಬೇಕು ಎಂದು ಹೇಳಿದರು.
ಎಸ್.ಎಸ್. ಮರಗೋಳ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಸೂರ್ಯಕಾಂತ ಬಿ. ಬಿರಾಜದಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕೂಡಲಸಂಗಮ ಶಿಕ್ಷಣ ಸಂಸ್ಥೆ ಪ್ರಾಧ್ಯಾಪಕ ಪೀರಪಾಶಾ ಎಂ. ಹೊನಗುಂಟಿಕರ್, ಎಐಎಂಎಸ್ ಎಸ್ ಅಧ್ಯಕ್ಷ ಗುಂಡಮ್ಮ ಮಡಿವಾಳ ಮಾತನಾಡಿದರು. ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ
ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!
Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.