ಗ್ಯಾಸ್ ಸಂಪರ್ಕ ಇರುವವರಿಗೂ ಸೀಮೆಎಣ್ಣೆ: ಸಚಿವ ಖಾದರ್
Team Udayavani, Feb 24, 2017, 10:59 AM IST
ಮಂಗಳೂರು: ರಾಜ್ಯದಲ್ಲಿ ನಗರ ಪ್ರದೇಶಗಳನ್ನು ಹೊರತು ಪಡಿಸಿ ಗ್ರಾಮಾಂತರ ಪ್ರದೇಶಗಳಲ್ಲಿ ಗ್ಯಾಸ್ ಹೊಂದಿರುವ ಪಡಿತರ ಚೀಟಿದಾರರಿಗೆ 1 ಲೀ. ಸೀಮೆಎಣ್ಣೆ ವಿತರಿಸಬೇಕೆಂಬ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ , ಅದರಲ್ಲೂ ಮುಖ್ಯವಾಗಿ ಮಲೆನಾಡು ಜಿಲ್ಲೆಗಳಲ್ಲಿ ಗ್ಯಾಸ್ ಇದ್ದವರಿಗೂ ಸೀಮೆಎಣ್ಣೆಯ ಆವಶ್ಯಕತೆ ಇರುವುದನ್ನು ಮನಗಂಡು ತಿಂಗಳಿಗೆ 1 ಲೀ. ಸೀಮೆಎಣ್ಣೆಯನ್ನಾದರೂ ವಿತರಿಸಲು ವ್ಯವಸ್ಥೆ ಆಗಬೇಕೆಂದು ಆಹಾರ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಅದನ್ನು ಮುಖ್ಯಮಂತ್ರಿ ಅನುಮೋದಿಸಿದ್ದಾರೆ. ಇದರಿಂದ ಬಹುಕಾಲದ ಬೇಡಿಕೆಯೊಂದು ಈಡೇರಿದಂತಾಗಿದೆ ಎಂದವರು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಒಪ್ಪಿಗೆ ಪತ್ರ ಕೊಡಬೇಕು: ಗ್ಯಾಸ್ ಹೊಂದಿದವರು ಈ 1 ಲೀ. ಸೀಮೆ ಎಣ್ಣೆಯನ್ನು ಪಡೆಯಲು ಒಪ್ಪಿಗೆ ಪತ್ರವನ್ನು (ವಿಲ್ಲಿಂಗ್ನೆಸ್ ಲೆಟರ್) ಗ್ರಾ.ಪಂ.ಗೆ ಸಲ್ಲಿಸಬೇಕು. ಒಂದು ಬಾರಿ ಈ ಪತ್ರವನ್ನು ಕೊಟ್ಟರೆ ಸಾಕು ಎಂದು ಸಚಿವರು ತಿಳಿಸಿದರು.ಕೇಂದ್ರ ಸರಕಾರವು ಉಜ್ವಲ ಯೋಜನೆಯಡಿ ಸೀಮೆಎಣ್ಣೆ ಮುಕ್ತ ವಲಯ ಸೃಷ್ಟಿಸಬೇಕೆಂದು ಸಲಹೆ ನೀಡಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
Mangaluru: ಸೆನ್ ಪೊಲೀಸ್ ಠಾಣೆಗಳು ಮೇಲ್ದರ್ಜೆಗೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.