ಶೂಟೌಟ್ಗೆ ವಿಜಯಪುರದ ಲಿಂಕ್
Team Udayavani, Feb 24, 2017, 11:24 AM IST
ಬೆಂಗಳೂರು: ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಕಾರಾಗೃಹದಲ್ಲಿರುವ ಇಬ್ಬರು ಆರೋಪಿಗಳಿಗೆ ಬೆಂಗಳೂರು ಪೊಲೀಸರು ಬಾಡಿ ವಾರೆಂಟ್ ಕೇಳಿದ್ದಾರೆ.
ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಇನ್ನಿತರ ಶಸ್ತ್ರಾಸ್ತ್ರಗಳು ವಿಜಯಪುರದಿಂದ ಅಕ್ರಮವಾಗಿ ಪೂರೈಕೆಯಾಗಿವೆ ಎನ್ನಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ವಿಜಯಪುರ ಜೈನಲ್ಲಿರುವ ವಿಚಾರಣಾಧೀನ ಕೈದಿಗಳಾದ ಇಂಡಿ ತಾಲೂಕಿನ ಇಜಾಜ್ ಅಹ್ಮದ್ ಪಟೇಲ್ ಹಾಗೂ ಅಬ್ಟಾಸ್ ಅಲಿ ಪೂರೈಸಿದ್ದಾರೆ ಎಂದು ಶಂಕಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಅವರಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ನಗರ ಪೊಲೀಸರು ಬಾಡಿ ವಾರೆಂಟ್ ಕೇಳಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಜೈಲಿನಲ್ಲಿರುವ ಇಜಾಜ್ ಅಹ್ಮದ್ ಪಟೇಲ್ ಹಾಗೂ ಅಬ್ಟಾಸ್ ಅಲಿ ಕೆಲ ದಿನಗಳಿಂದ ಅಕ್ರಮ ಶಸ್ತ್ರಾಸ್ತ್ರ ಸರಬರಾಜು ಆರೋಪದಡಿ ಬಂಧಿತರಾಗಿ ವಿಜಯಪುರ ಜೈಲು ಸೇರಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಬಂಧನಕ್ಕೊಳಧಿಗಾಗಿರುವ ಸೈಲಂಟ್ ಸುನೀಲ ಮತ್ತು ಒಂಟೆ ರೋಹಿತ ಸಹಚರರಾದ ಮೋಹನ್ ಅಲಿಯಾಸ್ ಬಡ್ಡಿ ಮೋಹನ್, ನಾಗರಾಜ್ ಅಲಿಯಾಸ್ ನಾಗನನ್ನು ಬಂಧಿಸಿ ಅವರ ಬಳಿಯಿದ್ದ ಪಿಸ್ತೂಲ್ ಹಾಗೂ ಜಕೀನ್ನನ್ನು ಜಪ್ತಿ ಮಾಡಿದ್ದರು. ಕೃತ್ಯದಲ್ಲಿ ಇವರು ಭಾಗಿಯಾಗಿರುವ ಶಂಕೆಯಿದ್ದು, ಇವರು ನೀಡಿದ ಮಾಹಿತಿ ಮೇರೆಗೆ ಇದೀಗ ಇಜಾಜ್ ಅಹ್ಮದ್ ಪಟೇಲ್ ಮತ್ತು ಅಬ್ಟಾಸ್ ಅಲಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Bengaluru: ದುಷ್ಕರ್ಮಿಗಳಿಂದ ಬಸ್ ಡ್ರೈವರ್, ಕಂಡಕ್ಟರ್ಗೆ ಥಳಿತ!
Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್
MUST WATCH
ಹೊಸ ಸೇರ್ಪಡೆ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ
Sandalwood: ʼಧೀರ ಭಗತ್ ರಾಯ್ʼಗೆ ಭೀಮ ಬಲ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.