ಪ್ರೀತಿ, ವಾತ್ಸಲ್ಯಗಳೇ ಧರ್ಮ: ಧರ್ಮಪಾಲನಾಥ ಸ್ವಾಮೀಜಿ
Team Udayavani, Feb 24, 2017, 2:17 PM IST
ಸುಳ್ಯ : ಅಗೋಚರವಾದ ಭಗವಂತನ ಇರುವಿಕೆಯನ್ನು ಅರ್ಥ ಮಾಡಿಕೊಳ್ಳದಿದ್ದರೆ ಈ ಮಾನವ ಜನ್ಮಕ್ಕೆ ಅರ್ಥವಿಲ್ಲ . ದಯೆ, ಕರುಣೆ, ಪ್ರೀತಿ, ವಾತ್ಸಲ್ಯ, ಅನುಕಂಪ ಇತ್ಯಾದಿಗಳು ಇದ್ದರೆ ಅದೇ ಧರ್ಮ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಅಡಾRರು ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಬ್ರಹ್ಮಕಲಶದ ಅಂತಿಮ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡುತ್ತಿದ್ದರು. ದಯೆ, ಕರುಣೆ, ಪ್ರೀತಿ, ವಾತ್ಸಲ್ಯ, ಅನುಕಂಪ ಇತ್ಯಾದಿಗಳು ಇದ್ದರೆ ಅದೇ ಧರ್ಮ. ಧರ್ಮದಲ್ಲಿ ಅಸ್ಪೃಶತೆ, ಜಾತಿ-ಭೇದಗಳು, ಕೀಳರಿಮೆಗಳು ಇರಬಾರದು. ಶ್ರದ್ಧೆಯಿಂದ, ನಂಬಿಕೆಯಿಂದ ನಿಷ್ಕಲ್ಮಶ ಹೃದಯದಿಂದ ದಾನ ಮಾಡಿದರೆ ಅದು ಧರ್ಮವೆನಿಸುತ್ತದೆ. ಬರೇ ಬ್ರಹ್ಮಕಲಶ ಮಾಡಿದರೆ ಸಾಲದು. ದೇವಾಲಯಗಳಿಗೆ ಆಗಾಗ ಹೋಗುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಧಾರ್ಮಿಕ ಉಪನ್ಯಾಸ ಮಾಡಿದ ವೇ| ಮೂ| ಕುಂಟಾರು ರವೀಶ ತಂತ್ರಿ, ನಮ್ಮೊಳಗಿನ ದೇವರನ್ನು ಕಂಡುಕೊಳ್ಳಬೇಕು. ಆತ್ಮಚೈತನ್ಯದ ವೃದ್ಧಿಗಾಗಿ ದೇವರ ಆರಾಧನೆಯ ಹೊರತು ನಮ್ಮ ಸಂಕಷ್ಟ ಪರಿಹಾರಕ್ಕಾಗಿ ಅಲ್ಲ. ದೇವರ ಎದುರು ಸ್ವಾರ್ಥಕ್ಕಾಗಿ ಪ್ರಾರ್ಥನೆ ಮಾಡಬಾರದು ಎಂದರು.
ನಮ್ಮ ದೇಶದಲ್ಲಿ ಇರುವ ಯಾವುದೇ ಆಚರಣೆಗಳಿಗೆ ಆಧಾರಗಳಿವೆ. ನಮ್ಮ ಧರ್ಮ, ಆಚರಣೆಗಳು ಇಂದು ಇಡೀ ಪ್ರಪಂಚದಲ್ಲಿ ಸರ್ವಮಾನ್ಯವಾಗಿವೆ. ದೇವಾಲಯಗಳು ಮನಸ್ಸಿಗೆ ಶಾಂತಿ, ಬುದ್ಧಿ, ಸಂಸ್ಕಾರ ನೀಡುತ್ತದೆ ಎಂದರು.ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ , ಶಾಸಕ ಎಸ್. ಅಂಗಾರ ಸಭಾಧ್ಯಕ್ಷತೆ ವಹಿಸಿ, ಅಡಾRರು ಆಸುಪಾಸಿನ ಜನರ ಶ್ರಮ, ದುಡಿಮೆ, ಶಿಸ್ತನ್ನು ಶ್ಲಾಘಿಸಿದರು. ಸಮಿತಿ ಸಂಚಾಲಕ ನ. ಸೀತಾರಾಮ ಪ್ರಾಸ್ತಾವಿಕ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ಧಾರ್ಮಿಕ ಮುಂದಾಳು ಹರೀಶ್ ಪೂಂಜಾ ಭಾಗವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ವ್ಯ.ಸ. ಅಧ್ಯಕ್ಷ ಗುರುರಾಜ್ ಭಟ್, ಬ್ರಹ್ಮಶ್ರೀ ವಾಸುದೇವ ತಂತ್ರಿ, ಹಿರಿಯರಾದ ಉಪೇಂದ್ರ ಕಾಮತ್, ವಿವಿಧ ಸಮಿತಿ ಪದಾಧಿಧಿಕಾರಿಗಳಾದ ಅಡ್ಡಂತಡ್ಕ ದೇರಣ್ಣ ಗೌಡ, ಎ.ಕೆ. ಭಾಸ್ಕರ ಪಟೇಲ್, ಜಯಂತ ಕಾಳಮನೆ, ಕುಕ್ಕೇಟಿ ಕುಶಾಲಪ್ಪ ಗೌಡ, ಜಯರಾಜ್ ಕುಕ್ಕೇಟಿ, ಹರಿಪ್ರಸಾದ್ ಅಡಾRರು, ಮುರಳೀಧರ ಅಡಾRರು, ಲಿಂಗಪ್ಪ ನಾೖಕ್, ಮಮತಾ, ಸುಲೋಚನಾ ನಾಯಕ್, ಶ್ರೀಕುಮಾರ್ ಭಟ್, ಶರತ್ ಅಡಾRರು, ದಿನೇಶ್ ಅಡಾRರು, ಡಾ| ಗೋಪಾಲಕೃಷ್ಣ ಭಟ್, ನಿವೇದಿತಾ ವಸಂತ, ಜಯರಾಮ ರೈ ಉಪಸ್ಥಿತರಿದ್ದರು.
ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ಸ್ವಾಗತಿಸಿ, ಜಯಪ್ರಸಾದ್ ಕಾರಿಂಜ ಹಾಗೂ ಶಶಿಧರ ಕಾರ್ಯಕ್ರಮ ನಿರೂಪಿಸಿದರು.
ಬ್ರಹ್ಮಕಲಶೋತ್ಸವ
ಗಣಪತಿ ಹೋಮ, ಕವಾಟೋದ್ಘಾಟನೆ, ಪ್ರಾಯಶ್ಚಿತ ಮತ್ತು ಶಾಂತಿ ಹೋಮ, ಕಲಶಾಭಿಷೇಕ, 1008 ಬ್ರಹ್ಮಕಲಶಾಭಿಷೇಕ, ಅವಭೃಥ ಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ ನಡೆಯಿತು. ಸಂಜೆ ಶ್ರೀದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ , ರಾಜಾಂಗಣ ಪ್ರಸಾದ ವಿತರಣೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.