ದಾವಣಗೆರೆ ಮಂದಿ ಅಭಿಮಾನಕ್ಕೆ ಬೆಲೆ ಕಟ್ಟಲಾಗದು


Team Udayavani, Feb 25, 2017, 1:12 PM IST

dvg1.jpg

ದಾವಣಗೆರೆ: ಕನ್ನಡದ ಎಲ್ಲ ಚಿತ್ರಗಳಿಗೆ ದಾವಣಗೆರೆಯ ಜನರು ನೀಡುವ ಪ್ರೋತ್ಸಾಹ, ಸಹಕಾರ, ಪೀÅತಿ, ಅಭಿಮಾನಕ್ಕೆ ಬೆಲೆ ಕಟ್ಟಲಾಗದು ಎಂದು ಕನ್ನಡ ಚಿತ್ರರಂಗದ ಖ್ಯಾತ ನಟ, ರಾಕಿಂಗ್‌ ಸ್ಟಾರ್‌ ಖ್ಯಾತಿಯ ಯಶ್‌ ಸ್ಮರಿಸಿದ್ದಾರೆ. 

ವಿಜಯಪುರದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಮಾರ್ಗಮಧ್ಯೆ ಶುಕ್ರವಾರ ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ನಿವಾಸಕ್ಕೆ ಭೇಟಿ ನೀಡಿದ ನಂತರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಸಾರ್ವಜನಿಕರು, ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು.

ದಾವಣಗೆರೆಯಲ್ಲಿ ಚಿತ್ರ ಗೆದ್ದರೆ ಇಡೀ ರಾಜ್ಯದಲ್ಲೇ ಗೆಲ್ಲುತ್ತವೆ. ಇಲ್ಲಿನ ಜನರು ಕನ್ನಡದ ಎಲ್ಲ ಚಿತ್ರಗಳಿಗೆ ಅಷ್ಟೊಂದು ಪ್ರೋತ್ಸಾಹ ನೀಡುತ್ತಾರೆ ಎಂದರು. ನನ್ನ ಅಭಿನಯದ ಎಲ್ಲ ಚಿತ್ರಗಳಿಗೆ ದಾವಣಗೆರೆಯ ಜನರು ಅತಿ ಹೆಚ್ಚಿನ ಪ್ರೋತ್ಸಾಹ, ಆಶೀರ್ವಾದ ನೀಡಿದ್ದಾರೆ. ಎಲ್ಲ ಚಿತ್ರಗಳು ಗಳಿಕೆಯಲ್ಲಿ ರೆಕಾರ್ಡ್‌ ಮಾಡಿವೆ.

ಮೊದಲ ಸಲ… ಚಿತ್ರ ಬೆಂಗಳೂರಿಗಿಂತಲೂ ಹೆಚ್ಚಿನ ಕಲೆಕ್ಷನ್‌ ಗಳಿಸಿದ್ದು ದಾವಣಗೆರೆಯಲ್ಲಿಯೇ ಎಂಬುದು ಖುಷಿ ಕೊಡುವ  ವಿಚಾರ. ಹಾಗಾಗಿ ದಾವಣಗೆರೆ ಎಂದರೆ ಹೆಚ್ಚು ಇಷ್ಟ ಎಂದು ತಿಳಿಸಿದರು. ನನ್ನ ಎಲ್ಲ ಚಿತ್ರಗಳನ್ನು ಗೆಲ್ಲಿಸಿದಂತಹ ಜನರಿಗೆ ಹೃದಯಪೂರ್ವಕ ಧನ್ಯವಾದ ಹೇಳಬೇಕು ಎಂಬ ಕಾರಣಕ್ಕಾಗಿ ವಿಜಯಪುರದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿರುವ ನಾನು ದಾವಣಗೆರೆಗೆ ಬಂದಿದ್ದೇನೆ.

ಮುಂದೆಯೂ ಎಲ್ಲ ಚಿತ್ರಗಳಿಗೆ ಪ್ರೋತ್ಸಾಹ ನೀಡುವ  ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು. ಗೂಗ್ಲಿ, ರಾಜಾಹುಲಿ, ಮಾಸ್ಟರ್‌ಪೀಸ್‌ ಚಿತ್ರಗಳ ಜನಪ್ರಿಯ ಡೈಲಾಗ್‌ ಹೇಳುವ ಮೂಲಕ ಸಾರ್ವಜನಿಕರು,  ಅಭಿಮಾನಿಗಳ ರಂಜಿಸಿದರು. ತಮ್ಮ ನೆಚ್ಚಿನ ಯುವ ನಾಯಕ ನಟನನ್ನು ನೋಡುವುದಕ್ಕಾಗಿ ನೂರಾರು ಜನರು ಉರಿ ಬಿಸಿಲನ್ನೂ ಲೆಕ್ಕಿಸದೆ ಕಾದರು.

ಯಶ್‌ ಬರುತ್ತಾರೆ ಎಂದು  ಹೇಳುತ್ತಿದ್ದಂತೆ ಹರ್ಷೋದ್ಘಾರ ಮಾಡುವುದು ಸಾಮಾನ್ಯವಾಗಿತ್ತು. ಕಾರಿನಿಂದ ಇಳಿದ ಕೂಡಲೇ ಯಶ್‌ ನೇರವಾಗಿ ಅಭಿಮಾನಿಗಳತ್ತ ತೆರಳಿದರು. ಹಸ್ತಲಾಘವ, ಸೆಲ್ಫಿಗೆ  ಜನರು ಅಕ್ಷರಶಃ ಮುಗಿ ಬಿದ್ದರು. ಕಾರು ಹತ್ತಲಿಕ್ಕೂ ಯಶ್‌ ಹರಸಾಹಸ ಪಡುವಂತಾಯಿತು. ಪೊಲೀಸರು ಲಾಠಿ ಪ್ರಯೋಗಿಸಿ, ಜನರನ್ನು ಚದುರಿಸಬೇಕಾಯಿತು. 

ಟಾಪ್ ನ್ಯೂಸ್

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

5-uv-fusion

Taro: ಕೆಸುವೆಂದು ಕರುಬಬೇಡಿ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

Jayam Ravi: ಜಯಂ ರವಿಯನ್ನು ಮನೆಯಿಂದ ಹೊರಹಾಕಿದ ಮಾಜಿ ಪತ್ನಿ; ಪೊಲೀಸರ ಮೊರೆ ಹೋದ ನಟ

1-kangg

BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್‌ ಬುಲ್ ಶ್ವಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.