ಸರ್ಕಾರಿ ಶಾಲಾ ಮಕ್ಕಳಿಂದ ಆಂಗ್ಲ ನಾಟಕ ಪ್ರದರ್ಶನ


Team Udayavani, Feb 25, 2017, 1:18 PM IST

dvg3.jpg

ದಾವಣಗೆರೆ: ತಾಲೂಕಿನ  ನರಗನಹಳ್ಳಿಯ ಸಮಾನ ಮನಸ್ಕ ಸಂಘಟನೆಗಳ ಗೆಳೆಯರ ಬಳಗದಿಂದ ಮಾಜಿ ಶಿಕ್ಷಣ ಸಚಿವ ದಿ. ಎಚ್‌.ಜಿ. ಗೋವಿಂದೇಗೌಡರ ಸ್ಮರಣಾರ್ಥ ಶಿಕ್ಷಕ ಪ್ರಕಾಶ್‌ ಕೊಡಗನೂರು ಅವರ ರೋಲ್‌ ಪ್ಲೇಸ್‌… ಕೃತಿ ಬಿಡುಗಡೆ ಹಾಗೂ ಮಕ್ಕಳ ರಂಗ ಪ್ರದರ್ಶನ ಫೆ. 25, 26 ರಂದು ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಗಂಗಾಧರ ಬಿ.ಎಲ್‌. ನಿಟ್ಟೂರು ತಿಳಿಸಿದ್ದಾರೆ. 

ನರಗನಹಳ್ಳಿಯ ಸರ್ಕಾರಿ ಶಾಲಾ ಶಿಕ್ಷಕ ಪ್ರಕಾಶ್‌ ಕೊಡಗನೂರು 3 ರಿಂದ 10ನೇ ತರಗತಿಯ ಇಂಗ್ಲಿಷ್‌ ಪಠ್ಯಾಧಾರಿಸಿ ರೋಲ್‌ ಪ್ಲೇಸ್‌… ಕೃತಿ ರಚಿಸಿದ್ದಾರೆ. ಅತಿ ಕಡಿಮೆ ಸಮಯದಲ್ಲಿ ವಿದ್ಯಾರ್ಥಿಗಳು ಪಠ್ಯದ ಅನುಭವದೊಂದಿಗೆ ಭಾಷೆಯನ್ನು ಸಂತಸದಿಂದ ನಿರರ್ಗಳವಾಗಿ ಬಳಸುವಂತೆ ಬರೆದಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ನರಗನಹಳ್ಳಿಯ ಸರ್ಕಾರಿ ಮಾಧ್ಯಮಿಕ ಹಿರಿಯ ಪ್ರಾಥಮಿಕ ಶಾಲೆಯ 65ಕ್ಕೂ ಹೆಚ್ಚು ಮಕ್ಕಳು ಇಂಟ್ರಡಕ್ಷನ್‌, ಎ ಯೂನಿಕ್‌ ಪೇಂಟಿಂಗ್‌, ಲವ್‌ ಫಾರ್‌ ಅನಿಮಲ್ಸ್‌, ಆ್ಯಕ್ಷನ್‌ ವರ್ಡ್ಸ್‌, ದಿ ಎಂಚಾಂಟೆಡ್‌ ಪೂಲ್‌… ಎಂಗ ಆಂಗ್ಲ ನಾಟಕ ಪ್ರದರ್ಶನ ನೀಡುವರು. ಗ್ರಾಮೀಣ ಭಾಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಆಂಗ್ಲ ಭಾಷೆ ಓದುವುದು ಮತ್ತು ಬರೆಯುವುದೇ ಕಷ್ಟ.

ಅದರಲ್ಲೂ  ಆಂಗ್ಲ ನಾಟಕ ಪ್ರದರ್ಶನ  ನೀಡುವುದು ಸುಲಭದ ಮಾತಲ್ಲ. ಶಿಕ್ಷಕ ಪ್ರಕಾಶ್‌ ಕೊಡಗನೂರು ಅದನ್ನು ಸಾಧ್ಯವಾಗಿಸಿದ್ದಾರೆ. ಮಕ್ಕಳು ಆಂಗ್ಲ ಭಾಷಾ ರಂಗ ಪ್ರದರ್ಶನ ನೀಡುವಂತೆ ಸಜ್ಜುಗೊಳಿಸಿದ್ದಾರೆ ಎಂದು ತಿಳಿಸಿದರು. ಶನಿವಾರ ಸಂಜೆ 4ಕ್ಕೆ ಮಕ್ಕಳ ರಂಗ ಪ್ರದರ್ಶನವನ್ನು ಶಿಕ್ಷಣಾಧಿಕಾರಿ ಜಿ.ಎಂ. ಬಸವಲಿಂಗಪ್ಪ ಉದ್ಘಾಟಿಸುವರು. 

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎನ್‌.ಆರ್‌. ಅಣ್ಣೇಶಪ್ಪ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣಗೌಡ ಬಣ) ಜಿಲ್ಲಾ ಗೌರವಾಧ್ಯಕ್ಷ ಎನ್‌. ವಾಸುದೇವರಾಯ್ಕರ್‌, ಬಿಇಒ ಬಿ.ಆರ್‌. ಬಸವರಾಜಪ್ಪ ಇತರರು ಭಾಗವಹಿಸುವರು. ಫೆ. 26ರ ಭಾನುವಾರ ಬೆಳಗ್ಗೆ 10.30ಕಕೆ ನಡೆಯುವ ರೋಲ್‌ ಪ್ಲೇಸ್‌… ಕೃತಿ ಬಿಡುಗಡೆ ಸಮಾರಂಭದಲ್ಲಿ ಲೇಖಕ ಪ್ರೊ. ಮಲ್ಲಿಕಾರ್ಜುನ್‌ ಪಾಟೀಲ್‌, ಡಿಡಿಪಿಐ ಎಚ್‌.ಎಂ. ಪ್ರೇಮಾ, ಪ್ರೊ. ಭಿಕ್ಷಾವರ್ತಿ, ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಕಾರ್ಯದರ್ಶಿ ಎಲ್‌.ಎಚ್‌. ಅರುಣ್‌ಕುಮಾರ್‌ ಇತರರು ಭಾಗವಹಿಸುವರು ಎಂದು ತಿಳಿಸಿದರು. 

ಶಿಕ್ಷಕ ಪ್ರಕಾಶ್‌ ಕೊಡಗನೂರು ಮಾತನಾಡಿ, ನನ್ನಂಥಹ ಸಾವಿರಾರು ಶಿಕ್ಷಕರಿಗೆ ಸೇವೆ ಒದಗಿಸುವ ಅವಕಾಶ ಮಾಡಿಕೊಟ್ಟವರು ಮಾಜಿ ಶಿಕ್ಷಣ ಸಚಿವ ದಿ. ಎಚ್‌. ಜಿ. ಗೋವಿಂದೇಗೌಡರು. ಹಾಗಾಗಿ ಅವರ ಸ್ಮರಣಾರ್ಥ ರೋಲ್‌ ಪ್ಲೇಸ್‌… ಕೃತಿ ಬಿಡುಗಡೆ ಹಾಗೂ ಮಕ್ಕಳ ರಂಗ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಆಂಗ್ಲ ಭಾಷೆಯಲ್ಲಿ ಮಾತನಾಡುವುದು ಮಾತ್ರವಲ್ಲ ನಾಟಕಗಳನ್ನು ಮಾಡಬಲ್ಲರು ಎಂಬುದನ್ನು ರುಜುವಾತುಪಡಿಸುವುದಕ್ಕಾಗಿಯೇ ಆಂಗ್ಲ ನಾಟಕಗಳ ಪ್ರದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಾಹಿತಿ ಬಿ. ಶಿವಯೋಗಿ , ಭುವನ್‌ ಪ್ರಕಾಶ್‌ ಕೊಡಗನೂರು ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

1-deee

Siddaramaiah ವಿರುದ್ಧ ಹರಿಯಾಣದಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

siddaramaiah

Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basvaraj

CM Aspirant: ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಿಂದ ಖ್ಯಾತ ನಟಿ ಔಟ್

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

9(1)

Mangaluru: ಟ್ರಾಫಿಕ್‌ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ

13-

ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

Kollur: ಸಂಪೂರ್ಣ ಹದಗೆಟ್ಟ ವಂಡ್ಸೆ- ಕೊಲ್ಲೂರು ಮುಖ್ಯ ರಸ್ತೆ; ವಾಹನ ಸಂಚಾರವೇ ಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.