ನಿಮ್ಮನ್ನು ತಿನ್ನುವುದೇ ನಿಮ್ಮನ್ನು ಕೊಲ್ಲುತ್ತದೆ:ಡಾ| ಬಿ.ಎಂ.ಹೆಗ್ಡೆ


Team Udayavani, Feb 25, 2017, 2:08 PM IST

bm-hegde.jpg

ಉಡುಪಿ: “ನೀವು ತಿಂದದ್ದು ನಿಮ್ಮನ್ನು ಕೊಲ್ಲುವುದಿಲ್ಲ. ನಿಮ್ಮನ್ನು ತಿನ್ನುವುದೇ ನಿಮ್ಮನ್ನು ಕೊಲ್ಲುತ್ತದೆ’ – ಇದು ಹೆಸರಾಂತ ವೈದ್ಯ ಡಾ| ಬಿ.ಎಂ. ಹೆಗ್ಡೆ ಅವರ ಹೇಳಿಕೆ. 

ಕುತ್ಪಾಡಿ ಆಯುರ್ವೇದ ಕಾಲೇಜಿನಲ್ಲಿ ಸ್ವಸ್ಥವೃತ್ತ ವಿಭಾಗದ ಸ್ನಾತಕೋತ್ತರ ವಿಭಾಗ ಶುಕ್ರವಾರ ಆಯೋಜಿಸಿದ ಆಯುರ್ವೇದ ಪಥ್ಯ-ಪೌಷ್ಟಿಕತೆ ಕುರಿತ “ಆಹಾರ ಮಂಥನ 2017′ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಹುಟ್ಟುವ ದ್ವೇಷ, ಕ್ರೋಧವೇ ಮೊದಲಾದ ಕೆಟ್ಟ ಚಿಂತನೆಗಳು ನಮ್ಮನ್ನು ಕೊಲ್ಲುತ್ತವೆ ಎಂದರು.

ಔಷಧದಿಂದಲೇ ಹೆಚ್ಚು ಸಾವು
ಪ್ರಪಂಚದಲ್ಲಿ ಅತಿ ಹೆಚ್ಚು ಸಾವು ಉಂಟಾಗುತ್ತಿರುವುದು ಔಷಧಿಗಳ ಅಡ್ಡಪರಿಣಾಮದಿಂದ. ಒಂದು ಔಷಧಿ ಅಡ್ಡಪರಿಣಾಮ ಗೊತ್ತಿರುತ್ತದೆ. ಒಂದಕ್ಕಿಂತ ಹೆಚ್ಚು ಔಷಧಿಗಳ ಅಡ್ಡಪರಿಣಾಮವನ್ನು ಅಧ್ಯಯನ ನಡೆಸಲು ಸಾಧ್ಯವಾಗಿಲ್ಲ. ಆದರೆ ಇದಾವುದನ್ನೂ ಮಾಧ್ಯಮಗಳು ಬೆಳಕುಚೆಲ್ಲುತ್ತಿಲ್ಲ. ಇದಕ್ಕೆ ಔಷಧಿ ಕಂಪೆನಿಗಳ ಲಾಬಿಯೇ ಕಾರಣ. ಸಮಗ್ರ ಚಿಕಿತ್ಸೆಯಾದ ಆಯುರ್ವೇದದಲ್ಲಿ ಮನಸ್ಸಿಗೆ ಚಿಕಿತ್ಸೆ ಕೊಡುವ “ಮೈಂಡೋಸ್ಕೋಪಿ’ ಕುರಿತು ಇನ್ನಷ್ಟು ಸಂಶೋಧನೆಗಳಾಗಬೇಕು ಎಂದರು. 

ಅಮೆರಿಕದಲ್ಲಿ ವೈದ್ಯಕೀಯ ಕೋರ್ಸ್‌ ಓದಿದ ಬಳಿಕ ಒಪಿಎಚ್‌ ಕೋರ್ಸ್‌ ನಲ್ಲಿ ಇತರ ವೈದ್ಯಕೀಯ ಪದ್ಧತಿಗಳ ಅಧ್ಯಯನ ನಡೆಯುತ್ತದೆ. ಆದರೆ ಇದರಲ್ಲಿ ಆಯುರ್ವೇದ ಸೇರಿಲ್ಲ. ಭಾರತ ಸರಕಾರ ಇದುವರೆಗೂ ಮಾನ್ಯತೆ ನೀಡದೇ ಇರುವುದು ಇದಕ್ಕೆ ಕಾರಣ. ಈಗ ಅದರ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಡಾ| ಹೆಗ್ಡೆ ಹೇಳಿದರು. 

ಆರೋಗ್ಯವೆಂದರೇನು?
ಕೆಲಸ ಮಾಡಲು ಲವಲವಿಕೆ ಇದ್ದರೆ ಅದುವೇ ಆರೋಗ್ಯ. ಲವಲವಿಕೆ ಇಲ್ಲದಿದ್ದರೆ ಅನಾರೋಗ್ಯ. ಅನುಭವವನ್ನು ಅವಲೋಕನ ನಡೆಸಿ ಸಂಶೋಧಕರಾಗಬೇಕು ಎಂದು ಅವರು ಹೇಳಿದರು. 

ಪ್ರಾಂಶುಪಾಲ ಡಾ| ಶ್ರೀಕಾಂತ ಯು. ಅಧ್ಯಕ್ಷತೆ ವಹಿಸಿದ್ದರು. ವಿಚಾರ ಸಂಕಿರಣದ ಸಂಘಟನ ಕಾರ್ಯದರ್ಶಿ ಡಾ| ಬಿ.ಆರ್‌. ದೊಡ್ಡಮನಿ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಡಾ| ರವೀಂದ್ರ ಅಂಗಡಿ, ಡಾ| ಅಮಲಾ ಕಾರ್ಯಕ್ರಮ ನಿರ್ವಹಿಸಿ ಡಾ| ವಿಜಯ ಬಿ. ನೆಗಲೂರ್‌ ವಂದಿಸಿದರು. 

ಮಧುಮೇಹವೂ ಕೃತಕ ಹಾಲೂ…
ಪ್ರಕೃತಿಯಲ್ಲಿ ಒಂದು ಪ್ರಾಣಿ ಇನ್ನೊಂದು ಪ್ರಾಣಿಯ ಹಾಲು ಕುಡಿಯುವುದಿಲ್ಲ. ಆದರೆ ಮನುಷ್ಯ ಮಾತ್ರ ದನದ ಹಾಲು ಕುಡಿಯುತ್ತಾನೆ. ಈಗೀಗ ದನಗಳಿಗೆ ಚುಚ್ಚುಮದ್ದು, ರಾಸಾಯನಿಕ ಆಹಾರಗಳನ್ನು ಕೊಟ್ಟ ಪರಿಣಾಮ ಅದರ ಹಾಲು ಕುಡಿದು ಮನುಷ್ಯನಿಗೆ ಅನಾರೋಗ್ಯ ಕಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ “ಬಿ’ ಮಧುಮೇಹ ಜಾಸ್ತಿಯಾಗಲು ಇದು ಕಾರಣ. ಹಾಲು ಕುಡಿಯುವುದಾದರೆ ದೇಸೀ ದನದ ಹಾಲು ಕುಡಿಯಿರಿ. ಹಾಲಿಗಿಂತಲೂ ತುಪ್ಪ ಶ್ರೇಷ್ಠ. ಆದರೆ ಪಶ್ಚಿಮದವರು ಇದರಿಂದ ಕೊಲೆಸ್ಟ್ರಾಲ್‌ ಹೆಚ್ಚುತ್ತದೆ ಎನ್ನುತ್ತಾರೆ. ಶೇ. 90 ಕೊಲೆಸ್ಟ್ರಾಲ್‌ ಉತ್ಪಾದನೆಯಾಗುವುದು ಲಿವರ್‌ನಲ್ಲಿ. “ನಿಮ್ಮ ಮನಸ್ಸು ನಿಮ್ಮದಲ್ಲ, ನೀವೇ ಮನಸ್ಸು’, “ಮಕ್ಕಳು ನಿಮ್ಮದಲ್ಲ, ನಿಮ್ಮ ಮೂಲಕ ಮಕ್ಕಳು’ ಎಂದು ಹೇಳುವ ಕ್ವಾಂಟಂ ಫಿಸಿಕ್ಸ್‌ ಸಿದ್ಧಾಂತ ಮನಸ್ಸಿಗೆ ಕೊಡಬೇಕಾದ ಮಹತ್ವಕ್ಕೆ ಪೂರಕವಾಗುತ್ತದೆ ಎಂದು ಡಾ| ಬಿ.ಎಂ.ಹೆಗ್ಡೆ ಹೇಳಿದರು.

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.