ಶಾಲೆಗಳಲ್ಲಿ ಬೋಸ್‌ ದಿನ ಆಚರಿಸಲು ಸರ್ಕಾರದ ಜತೆ ಚರ್ಚೆ


Team Udayavani, Feb 26, 2017, 12:16 PM IST

padmavathi-mayor.jpg

ಕೆಂಗೇರಿ: ಜನವರಿ 23ರ ಸುಭಾಷ್‌ಚಂದ್ರ ಬೋಸ್‌ ಅವರ ಹುಟ್ಟುಹಬ್ಬವನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸುವ ಕುರಿತು ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮೇಯರ್‌ ಜಿ ಪದ್ಮಾವತಿ ಹೇಳಿದ್ದಾರೆ. 

ರಾಜರಾಜೇಶ್ವರಿ ನಗರದ ಸುಭಾಷ್‌ ಭವನದಲ್ಲಿ ಶನಿವಾರದಿಂದ ಆರಂಭವಾದ “3ನೇ ಅಖೀಲ ಭಾರತ ನೇತಾಜಿ ಸುಭಾಷ್‌ ಕ್ರಾಂತಿ ಸಮ್ಮೇಳನ’ ಉದ್ಘಾಟಸಿ ಮಾತನಾಡಿದ ಅವರು “ನೇತಾಜಿ ಸುಭಾಷ್‌ಚಂದ್ರ ಬೋಸ್‌ ಜನ್ಮ ದಿನವನ್ನು ದೇಶ ಪ್ರೇಮದ ದಿನವನ್ನಾಗಿ ಆಚರಿಸುವ ಮೂಲಕ ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕಿದೆ. 

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಮಡಿದ ಎಲ್ಲಾ ಚೇತನಗಳನ್ನು ಸ್ಮರಿಸುವುದು ಮತ್ತು ಹೋರಾಟಗಾರರ ಕುರಿತು ಮುಂದಿನ ಪೀಳಿಗೆಗೆ ಮಾಹಿತಿ ತಲುಪಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ,” ಅವರು ಹೇಳಿದರು. ನೇತಾಜಿ ಸುಭಾಷ್‌ಚಂದ್ರ ಬೋಸ್‌ ಸಂಶೋಧನಾ ಮತ್ತು ಬಹು ಅಭಿವೃದ್ಧಿ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿ ಎಂ.ರಾಜ್‌ಕುಮಾರ್‌ ಮಾತನಾಡಿ, “ಬೋಸ್‌ ಹುಟ್ಟು ಹಬ್ಬವನ್ನು ದೇಶ ಪ್ರೇಮ್‌ ದಿವಸವನ್ನಾಗಿ ಆಚರಿಸಬೇಕು.

ನ್ಯಾ. ಮುಖರ್ಜಿ ವಿಚಾರಣೆ ಆಯೋಗದ ವರದಿಯನ್ನು ಲೋಕಸಭೆ ಹಾಗೂ ರಾಜ್ಯ ಸಭೆಯಲ್ಲಿ ಮಂಡಿಸಿ ಚರ್ಚೆಗೆ ಒಳಪಡಿಸಬೇಕು. ನೇತಾಜಿಯವರ ಜೀವನ ಚರಿತ್ರೆ,  ಆಜಾದ್‌ ಹಿಂದ್‌ ಬ್ಯಾಂಕ್‌ ರಚನೆ ಹಾಗೂ ಐಎನ್‌ಎ ಸೈನ್ಯ ಅದರ ಹೋರಾಟವನ್ನು ಪಠ್ಯದಲ್ಲಿ ಸೇರಿಸಬೇಕು,” ಎಂದರು. ಎರಡು ದಿನ ನಡೆಯುವ ಸಮ್ಮೇಳನದಲ್ಲಿ ದೇಶದ ಹದಿನಾಲ್ಕು ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. 

“ನೇತಾಜಿ ಸುಭಾಷ್‌ಚಂದ್ರ ಬೋಸ್‌ ಸಂಶೋಧನಾ ಮತ್ತು ಬಹು ಅಭಿವೃದ್ಧಿ ಟ್ರಸ್ಟ್‌’ನ ಅಧ್ಯಕ್ಷ ಜಿ.ಆರ್‌.ಶಿವಶಂಕರ್‌, ಪಂಜಾಬ್‌ನ ನೇತಾಜಿ ರೀಸರ್ಚ್‌ ಪೌಂಡೇಷನ್‌ ಅಧ್ಯಕ್ಷ ವಿ.ಪಿ.ಸೈನಿ, ರಾಣಿ ಝಾನ್ಸಿ ರೆಜಿಮೆಂಟ್‌ ಐಎನ್‌ಎ ಸದಸ್ಯ ತಮಿಳುನಾಡಿನ ಸರಸ್ವತಿ ರಾಜಾಮಣಿ, ನಗರ ಸಭೆ ಮಾಜಿ ಸದಸ್ಯ ಮಂಜು, ಟ್ರಸ್ಟ್‌ನ ರಾಜಯೋಗಿಂದ್ರ ವೀರಯ್ಯ ಸ್ವಾಮಿ ಶಾಸಿಮಠ ಗುರೂಜಿ. ಮತ್ತಿತರರು ಉಪಸ್ಥಿತರಿದ್ದರು.

ನನ್ನ ಅಪ್ಪನೂ ಸ್ವಾತಂತ್ರ್ಯ ಹೋರಾಟಗಾರ 
“ನಮ್ಮ ತಂದೆಯೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ 2 ವರ್ಷ 9 ತಿಂಗಳು ಜೈಲು ವಾಸ ಅನುಭವಿಸಿದ್ದರು. ಅವರ ಹೋರಾಟವನ್ನು ಕೇಳುವಾಗ ನಾಮಗೆಲ್ಲ ರೋಮಾಂಚನವಾಗುತ್ತದೆ. ಪ್ರತಿ ವರ್ಷ ಸ್ವಾತಂತ್ರ್ಯ ಹೋರಾಟಗಾರರಿಗೆ ರಾಜ್ಯಪಾಲರು ಔತಣ ಕೂಟ ಏರ್ಪಡಿಸುತ್ತಿದ್ದರು.

ನಮ್ಮ ತಂದೆಯವರ ಜೊತೆಯಲ್ಲಿ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು, ಸ್ವಾತಂತ್ರ್ಯ ಹೋರಾಟಗಾರರನ್ನು ನೋಡುವುದು ನನ್ನ ಪಾಲಿಗೆ ಸೌಭಾಗ್ಯವಾಗಿತ್ತು,” ಎಂದು ಮೇಯರ್‌ ಜಿ ಪದ್ಮಾವತಿ ಹೇಳಿದರು.  ಬಿಎನ್‌ಪಿ 9  ರಾಜರಾಜೇಶ್ವರಿ ನಗರದ ಸುಭಾಷ್‌ ಭವನದಲ್ಲಿ ಶನಿವಾರ ಆರಂಭವಾ 3ನೇ ಅಖೀಲ ಭಾರತ ನೇತಾಜಿ ಸುಭಾಷ್‌ ಕ್ರಾಂತಿ ಸಮ್ಮೇಳನದಲ್ಲಿ ರಾಣಿ ಝಾನ್ಸಿ ರೆಜಿಮೆಂಟ್‌ ಐಎನ್‌ಎ ಸದಸ್ಯ ತಮಿಳುನಾಡಿನ ಸರಸ್ವತಿ ರಾಜಾಮಣಿರವರನ್ನು ಮೇಯರ್‌ ಜಿ.ಪದ್ಮಾವತಿ ಸನ್ಮಾನಿಸದರು.

ಪಂಜಾಬ್‌ನ ನೇತಾಜಿ ರೀಸರ್ಚ್‌ ಪೌಂಡೇಷನ್‌ ಅಧ್ಯಕ್ಷ ವಿ.ಪಿ.ಸೈನಿ, ನೇತಾಜಿ ಸುಭಾಷ್‌ಚಂದ್ರ ಬೋಸ್‌ ಸಂಶೋಧನಾ ಮತ್ತು ಬಹು ಅಭಿವೃದ್ಧಿ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿ ಎಂ.ರಾಜ್‌ಕುಮಾರ್‌, ಅಧ್ಯಕ್ಷ ಜಿ.ಆರ್‌.ಶಿವಶಂಕರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.