ಕೆರೆ ಸಂಜೀವಿನಿ ಅಡಿ ಕೆರೆಗಳ ಅಭಿವೃದ್ಧಿ
Team Udayavani, Feb 27, 2017, 1:02 PM IST
ದಾವಣಗೆರೆ: ರಾಜ್ಯ ಸರ್ಕಾರದ ಕೆರೆ ಸಂಜೀವಿನಿ ಯೋಜನೆಯಡಿ ಬೆಳವನೂರು, ತುರ್ಚಘಟ್ಟ ಸೇರಿದಂತೆ ಈ ಭಾಗದ ಕೆರೆಗಳ ಅಭಿವೃದ್ಧಿಗೆ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಭಾನುವಾರ ತಾಲೂಕಿನ ಬೆಳವನೂರು ಗ್ರಾಮದ ಕೆರೆ ಹೂಳು ಎತ್ತುವ ಕಾಮಗಾರಿಗೆ ಚಾಲನೆನೀಡಿದ ನಂತರ ಮಾತನಾಡಿದರು.
ಬೆಳವನೂರು ಕೆರೆ 32 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. 12 ಎಕರೆ ಜಾಗ ಒತ್ತುವರಿಮಾಡಲಾಗಿತ್ತು. ಇದೀಗ ರೈತರೇ ಸ್ವತಃ ಕೆರೆ ಒತ್ತುವರಿ ತೆರವುಗೊಳಿಸಿ, ಅಭಿವೃದ್ಧಿಗೆ ಅನುವುಮಾಡಿಕೊಟ್ಟಿದ್ದಾರೆ. ಈಗ 18 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ರೈತರು ಸಹ ಇದಕ್ಕೆ ಸಹಕಾರ ಕೊಡಬೇಕು.
ಕೆರೆಯ ಹೂಳನ್ನು ತಮ್ಮ ತಮ್ಮ ಹೊಲಗಳಿಗೆ ಸಾಗಿಸಿಕೊಳ್ಳುವ ಮೂಲಕ ಕೆರೆ ಹೂಳೆತ್ತುವ ಕೆಲಸ ಪೂರ್ಣಗೊಳ್ಳಲು ನೆರವಾಗಬೇಕು ಎಂದರು. ಕೆರೆಯ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳುವ ಉದ್ದೇಶ ಸಹ ಇದೆ. 1.5 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಸರ್ಕಾರ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲಿಯೇ ಕೆರೆಯ ಸಂಪೂರ್ಣ ಅಭಿವೃದ್ಧಿ ಮಾಡಿ, ಶುದ್ಧ ಕುಡಿಯುವ ನೀರಿನ ಘಟಕ ತೆರೆಯಲಾಗುವುದು.
ಇದೇ ಕೆರೆಯಿಂದ ದಾವಣಗೆರೆಯ ಕೆಲ ಭಾಗಗಳಿಗೂ ನೀರು ಒದಗಿಸುವ ಉದ್ದೇಶ ಇದೆ ಎಂದು ತಿಳಿಸಿದರು. ತುರ್ಚಘಟ್ಟ ಕೆರೆ ಅಭಿವೃದ್ಧಿಗೆ 1 ಕೋಟಿ ಬಿಡುಗಡೆ ಮಾಡಲಾಗಿದೆ. 22 ಕೆರೆ ತುಂಬಿಸುವ ಮಾದರಿಯಲ್ಲಿ ಯಾವುದೇ ಕೆರೆ ಅಭಿವೃದ್ಧಿ ಮಾಡಲ್ಲ. ಸ್ವಾಭಾವಿಕವಾಗಿ ನೀರು ಹರಿದುಬಂದು ತುಂಬುವಂತೆ ಕೆರೆಗಳ ಅಭಿವೃದ್ಧಿ ಮಾಡಲಾಗುವುದು.
ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಇದಕ್ಕಾಗಿ ನಮ್ಮ ಸರ್ಕಾರ ಹಿಂದೆ ಮುಂದೆ ನೋಡದೆ ಅನುದಾನ ನೀಡುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಉಮಾ ರಮೇಶ್, ತಾಲೂಕು ಪಂಚಾಯತ್ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ,
ಜಿಲ್ಲಾ ಪಂಚಾಯತ್ ಸದಸ್ಯ ಜಿ.ಸಿ. ನಿಂಗಪ್ಪ, ತಾಲೂಕು ಪಂಚಾಯತ್ ಸದಸ್ಯ ಮಂಜಪ್ಪ, ಬೆಳವನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಲಮ್ಮ, ಎಪಿಎಂಸಿ ಸದಸ್ಯ ಈರಣ್ಣ, ಮುಖಂಡರಾದ ಬಸವರಾಜ, ಚಂದ್ರಪ್ಪ, ರತ್ನಬಾಯಿ, ಉಜ್ಜಪ್ಪ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ ಎಲ್.ಎಸ್. ಪ್ರಭುದೇವ್ ಇತರರು ಈ ವೇಳೆ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ
BBK11: ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ
Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..
S.M.Krishna; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
MUDA Case; ಇಡಿ ದಾಳಿಗೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.