ನೋಟ್‌ ಬ್ಯಾನ್‌ನಿಂದ ಜನ ಕಂಗಾಲು


Team Udayavani, Feb 27, 2017, 1:11 PM IST

dvg6.jpg

ಹೊನ್ನಾಳಿ: ಕೇಂದ್ರ ಸರ್ಕಾರ 500 ಮತ್ತು ಸಾವಿರ ಮುಖಬೆಲೆಯ ನೋಟಗಳನ್ನು ಬ್ಯಾನ್‌ ಮಾಡಿದ ಪರಿಣಾಮ ದೇಶದ ಸಾಮಾನ್ಯ ಜನತೆ ಕಂಗಾಲಾಗಿದ್ದಾರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು. ತಾಲೂಕಿನ ಕುಂದೂರು ಗ್ರಾಮದಲ್ಲಿ ಭಾನುವಾರ ತಾಲೂಕು ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಜನ ವೇದನ ಸಮಾವೇಶ ಉದ್ಘಾಟಿಸಿ ಮಾತನಾಡಿದರು. 

ನೋಟ್‌ ಬ್ಯಾನ್‌ನಿಂದ ಹಣವಂತರಿಗೆ ಯಾವುದೇ ತೊಂದರೆಯಾಗಲಿಲ್ಲ. ಕೂಲಿ ಕಾರ್ಮಿಕರಿಗೆ ಮಧ್ಯಮ ವರ್ಗದವರಿಗೆ ಮಾತ್ರ ಇನ್ನಿಲ್ಲದ ತೊಂದರೆ ಅನುಭವಿಸಿ ಅಂದೇ ದುಡಿದು ಅಂದೇ ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳುವವರಿಗೆ ಕೂಲಿ ಇಲ್ಲದಂತಾಗಿ ಉಪವಾಸ ಬೀಳುವಂತಾಯಿತು ಎಂದು ಆರೋಪಿಸಿದರು.  

ಹೊಸ ಒಂದು ಸಾವಿರ ನೋಟನ್ನು ತಕ್ಷಣ ಕೇಂದ್ರ ಸರ್ಕಾರ ಹೊರ ತರಬೇಕು. ಈಗಿರುವ 2ಸಾವಿರ ಇಟ್ಟುಕೊಂಡು ಬೇರೆ ಊರಿಗೆ ಹೋದರೆ ಚಿಲ್ಲರೆ ಸಮಸ್ಯೆಯಾಗಿ ಸ್ವಂತ ಊರಿಗೆ ತಲುಪುವುದು ದೊಡ್ಡ ಸಮಸ್ಯೆ ಆಗಿದೆ ಎಂದು ದೂರಿದರು. ಡೈರಿ ವಿಷಯವನ್ನು ತೆಗೆದುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಟಕವಾಡುತ್ತಿದ್ದಾರೆ. 

ಅನಾವಶ್ಯಕವಾಗಿ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಐಟಿ ದಾಳಿ ಕೇವಲ ಕಾಂಗ್ರೆಸ್‌ ನಾಯಕರ ಮನೆಗಳ ಮೇಲೆ ಮಾತ್ರ ಸೀಮಿತವಾಗಿದೆ. ಬಿಜೆಪಿಯವರಲ್ಲಿ ಯಾರೂ ಹಣವಂತರಿಲ್ಲವೇ ಎಂದು ಪ್ರಶ್ನಿಸಿದ ಅವರು, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್‌ನವರು ಹುಚ್ಚರು ಎಂದು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ.

ಸೋತು ಕೆಲಸವಿಲ್ಲದೇ ಇಲ್ಲ ಸಲ್ಲದ ಹೇಳಿಕೆಗಳನ್ನು ಮಾಧ್ಯಮದವರ ಮುಂದೆ ಬಡಬಡಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಮಂಜೂರು ಮಾಡುಲು ಸತಾಯಿಸುತ್ತಿದೆ. ರಾಜ್ಯದಿಂದ ಲೋಕಸಭೆಗೆ ಆರಿಸಿ ಹೋಗಿರುವ 17ಜನ ಬಿಜೆಪಿ ಸಂಸದರು ಈ ಬಗ್ಗೆ ಕೇಂದ್ರಕ್ಕೆ ಒತ್ತಾಯ ತರಬೇಕು.

ರಾಜ್ಯದಲ್ಲಿ ಬಿಜೆಪಿ ಅಧಿಧಿಕಾರ ಬಂದು ಮುಖ್ಯಮಂತ್ರಿಯಾದರೆ 24ಗಂಟೆಯೊಳಗೆ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳಿಸುತ್ತೇನೆ, ರೈತರ ಸಾಲಮನ್ನಾ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಬಾಲಿಶಾ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು. 

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ. ಮಂಜಪ್ಪ ಮಾತನಾಡಿ, ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ ಗಾಂಧಿಧಿಯವರ ಆದೇಶದ ಮೇರೆಗೆ ಜನ ವೇದನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಜನ ವೇದನ ಸಮಾವೇಶಗಳನ್ನು ಬ್ಲಾಕ್‌ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು. 

ಸಾಸ್ವೆಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎ.ಗದ್ದಿಗೇಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಡಿ.ಜಿ.ವಿಶ್ವನಾಥ್‌, ಹೊನ್ನಾಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಮುಖಂಡರಾದ ಬಿ.ಸಿದ್ದಪ್ಪ, ಕೆ.ವಿ.ಚನ್ನಪ್ಪ, ಗುರುಮೂರ್ತಿ, ಷಣ್ಮುಖಪ್ಪ, ಆರ್‌.ನಾಗಪ್ಪ, ಮರಳುಸಿದ್ದಪ್ಪ, ಜಿ.ಹನುಮಂತಪ್ಪ, ಶಂಭಣ್ಣ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಎಸ್‌.ಎಸ್‌. ಬೀರಪ್ಪ, ನಿರ್ದೇಶಕ ಎ.ಜಿ. ಪ್ರಕಾಶ್‌, ಪಿ.ಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

Tragedy: ಅನ್ನ, ನೀರು ಬಿಟ್ಟು ಮನೆಯೊಳಗೆ ನಿಗೂಢ ಪೂಜೆ… 2 ಮೃತ್ಯು, ನಾಲ್ವರ ಸ್ಥಿತಿ ಗಂಭೀರ

11-malpe

Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Channapatna ByPoll: ಜೆಡಿಎಸ್ ಗೆ ಟಿಕೆಟ್ ನೀಡುವಂತೆ ಒತ್ತಾಯವಿಲ್ಲ, ಆದರೆ…: ನಿಖಿಲ್‌

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

Tahshildar: ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

12-biggboss

BBK11: ಜಗದೀಶ್ ಗೆ ನ್ಯಾಯ ಸಿಗಬೇಕು.. ವಕೀಲ್ ಸಾಬ್ ಪರ ನಿಂತ ಜನ

Udupi: Scooter caught fire near petrol pump

Udupi: ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌; ತಪ್ಪಿದ ಭಾರೀ ಅನಾಹುತ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Road Mishap: ಹಸುಗಳನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಬಸ್… ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.