ಓಲಾ-ಊಬರ್ ಚಾಲಕರ ಕಾನೂನು ಹೋರಾಟಕ್ಕೆ ಎಚ್ಡಿಕೆ ನೆರವಿನ ಭರವಸೆ
Team Udayavani, Mar 1, 2017, 12:01 PM IST
ಬೆಂಗಳೂರು: ಓಲಾ-ಊಬರ್ ಚಾಲಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ನಾನೇ ಕಾನೂನು ಹೋರಾಟ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಓಲಾ-ಊಬರ್ ಚಾಲಕರ ಮನವಿ ಸ್ವೀಕರಿಸಿ ಮಾತನಾಡಿದ ಅವರು, “ಕಾನೂನು ತಜ್ಞರ ನೆರವು ಕಲ್ಪಿಸುವುದು ಸೇರಿ ಎಲ್ಲ ರೀತಿಯ ಸಹಾಯ ನೀಡಲು ಸಿದ್ಧ,” ಎಂದು ತಿಳಿಸಿದರು. “ರಾಜ್ಯ ಸರ್ಕಾರ ಈ ಸಮಸ್ಯೆ ತನ್ನದಲ್ಲ ಎಂದು ಹೇಳಿ ಸುಮ್ಮನಾಗುವಂತಿಲ್ಲ. ಅಸಂಘಟಿತ ಕಾರ್ಮಿಕರಾದ ಚಾಲಕರ ವಿಚಾರದಲ್ಲಿ ಅಸಡ್ಡೆ ತೋರಬಾರದು. ಶಾಂತಿಯು ತವಾಗಿ ಹೋರಾಟ ನಡೆಸಲು ಅವಕಾಶ ಮಾಡಿಕೊಡಬೇಕು.
ಅವರಿಗೆ ನ್ಯಾಯ ದೊರಕಿಸಿಕೊಡಲು ಸರ್ಕಾರ ಮುಂದಾಗಬೇಕು. ಓಲಾ ಮತ್ತು ಊಬರ್ ಕಂಪನಿಗಳು ಮೊದಲಿಗೆ ಮಾಸಿಕ 60 ರಿಂದ 70 ಸಾವಿರ ರೂ. ಆದಾಯದ ಆಸೆ ತೋರಿಸಿದ್ದರಿಂದ ಬಡ ಚಾಲಕರು ತಮ್ಮ ಆಸ್ತಿ ಅಡಮಾನ ಇಟ್ಟು ಕಾರು ಖರೀದಿಸಿ ಸಂಸ್ಥೆಗೆ ಬಿಟ್ಟಿದ್ದಾರೆ. ಆದರೆ, ಇದೀಗ ಸಾವಿರಾರು ಕೋಟಿ ರೂ. ದುಡಿದ ನಂತರ ಸಂಸ್ಥೆಯೇ ಹೊಸದಾಗಿ ಕಾರು ಖರೀದಿಸಿ ಹೊರಗುತ್ತಿಗೆ ರದ್ದು ಮಾಡಲು ಮುಂದಾಗಿದೆ.
ಇದರಿಂದ ಸ್ವಂತ ಕಾರು ಖರೀದಿಸಿ ಬಾಡಿಗೆಗೆ ಕೊಟ್ಟು ದುಡಿಯುತ್ತಿದ್ದ ಸಾವಿರಾರು ಚಾಲಕರಿಗೆ ತೊಂದರೆಯಾಗಲಿದೆ,” ಎಂದು ತಿಳಿಸಿದರು. “ಬೆಂಗಳೂರಿನ ನಾಗರಿಕರು ಸಹ ಚಾಲಕರ ಬೆಂಬಲಕ್ಕೆ ನಿಲ್ಲಬೇಕು. ಅವರ ನ್ಯಾಯಯುತ ಹೋರಾಟಕ್ಕೆ ಸಹಕಾರ ನೀಡಬೇಕು,” ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.