ಪೊಲೀಸರ ನಿರ್ಲಕ್ಷ್ಯತನ ಖಂಡಿಸಿ ಪ್ರತಿಭಟನೆ
Team Udayavani, Mar 1, 2017, 1:13 PM IST
ದಾವಣಗೆರೆ: ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮ ಪಂಚಾಯತಿ ಕಾರ್ಯದರ್ಶಿ, ಚನ್ನಗಿರಿ ತಾಲೂಕಿನ ತಿಪ್ಪಗೊಂಡನಹಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಹಲ್ಲೆ ಖಂಡಿಸಿ, ತಪ್ಪಿತಸ್ಥರ ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷತನ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ.
ತಿಪ್ಪಗೊಂಡನಹಳ್ಳಿ ಗ್ರಾಮದ ಶಂಕರಯ್ಯ ಎಂಬುವರು ಸರ್ಕಾರಿ ಜಾಗ ಒತ್ತುವರಿಮಾಡಿಕೊಂಡು ಅಕ್ರಮವಾಗಿ ನಿರ್ಮಿಸಿರುವ ಕಾಂಪೌಂಡ್ ಯಾವುದೇ ಸಂದರ್ಭದಲ್ಲಿ ಬೀಳುವ ಸ್ಥಿತಿಯಲ್ಲಿದ್ದು, ಕಾಂಪೌಂಡ್ಗೆ ಹೊಂದಿಕೊಂಡಂತೆ ವಿದ್ಯುತ್ ಕಂಬ, ಶಾಲೆ ಇವೆ.
ಕಾಂಪೌಂಡ್ ಬಿದ್ದಲ್ಲಿ ಅನಾಹುತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅದರ ತೆರವಿಗೆ ಹೋಗಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್.ಪಿ. ಯಶವಂತ್ ಕುಮಾರ್ ಮೇಲೆ ಮೂರ್ತಯ್ಯ ಎಂಬಾತ ಹಲ್ಲೆ ನಡೆಸಿದರೂ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಅದನ್ನು ತಡೆಯದೆ ವಿಡಿಯೋ ಚಿತೀಕರಣ ಮಾಡಿದ್ದಾರೆ.
ಸಂಬಂಧಿತ ಆರೋಪಿಯನ್ನು ಠಾಣೆಗೆ ಕರೆ ತಂದಿಲ್ಲ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಜಗಳೂರು ತಾಲೂಕಿನ ತೋರಣಗಟ್ಟೆಯಲ್ಲಿ ಫೆ. 22 ರಂದು ಸಂಭವಿಸಿದ ವಿದ್ಯುತ್ ಅವಘಡದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ಸಂದರ್ಭದಲ್ಲಿಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿದ್ದರು.
ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು. ಸಾರ್ವಜನಿಕ ಕೆಲಸ ಮಾಡುವ ಅಧಿಕಾರಿಗಳ ಮೇಲೆ ನಡೆಯುವ ಹಲ್ಲೆ ತಡೆದು, ಸೂಕ್ತ ರಕ್ಷಣೆ ನೀಡಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಂ. ಸಂಗಮೇಶ್, ಎಸ್. ವಿವೇಕಾನಂದ, ಎಂ.ಆರ್. ಸಿದ್ದಪ್ಪ, ಐ.ಸಿ. ವಿದ್ಯಾವತಿ, ಪ್ರೇಮಾ, ಕೆ.ಎಸ್. ರಮೇಶ್, ಉಮೇಶ್, ಶ್ರೀನಿವಾಸ್, ದೇವೇಂದ್ರಪ್ಪಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ
K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ
Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!
ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ
La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.