ಬದುಕುವ ಕಲೆ ಕರಗತ ಮಾಡಿಸುವುದೇ ಶಿಕ್ಷಣ


Team Udayavani, Mar 1, 2017, 1:23 PM IST

dvg5.jpg

ದಾವಣಗೆರೆ: ಶಿಕ್ಷಣದಲ್ಲಿ ಅತಿ ಮುಖ್ಯವಾಗಿರುವ ನೈತಿಕ ನೆಲೆಗಟ್ಟು ಕುಸಿದು ಹೋದಲ್ಲಿ ಶಿಕ್ಷಣಕ್ಕೆ ಬೆಲೆಯೇ ಇರುವುದಿಲ್ಲ ಎಂದು ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದ್ದಾರೆ. ಮಂಗಳವಾರ ಶಾಮನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸಲು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ ಹಾಗೂ ಶೈಕ್ಷಣಿಕ ಕಾರ್ಯಾಗಾರದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಪ್ರಸ್ತುತ ಶಿಕ್ಷಣದಲ್ಲಿ ನೈತಿಕತೆಯೇ ಕಾಣೆಯಾಗುತ್ತಿದೆ. 10ನೇ ತರಗತಿ ವಿದ್ಯಾರ್ಥಿಗಳೇ ಸಹಪಾಠಿಯನ್ನು ಇರಿದು ಕೊಲ್ಲುವ ವಾತಾವರಣ ಕಂಡು ಬರುತ್ತಿದೆ. ಮಕ್ಕಳಲ್ಲಿ ಮನೋಸ್ಥೈರ್ಯ, ಮನೋಬಲ, ಆತ್ಮವಿಶ್ವಾಸ ಮೂಡಿಸುವ ನೈತಿಕ ಶಿಕ್ಷಣಕ್ಕೆ ಗಮನ ನೀಡಬೇಕಿದೆ ಎಂದರು. ಜಗತ್ತಿನಲ್ಲಿ ಜ್ಞಾನಕ್ಕಿಂತಲೂ ಅಮೂಲ್ಯ ಆಸ್ತಿ ಇನ್ನೊಂದಿಲ್ಲ. 

ಶಾಲಾ-ಕಾಲೇಜಿನಲ್ಲಿ ಕಲಿತು ಪಡೆಯುವ ಪ್ರಮಾಣಪತ್ರ, ಪದವಿ ನಿಜವಾದ ಜ್ಞಾನ ಅಲ್ಲ. ನಿಜವಾದ ಅರಿವು, ವಿವೇಕ ಸಂಪಾದನೆ, ಬದುಕುವ ಕಲೆಯನ್ನು ಕರಗತ ಮಾಡಿಸುವುದೇ ನಿಜವಾದ ಶಿಕ್ಷಣ. ಪ್ರತಿಯೊಬ್ಬರ ಅಂತರಂಗದಲ್ಲಿರುವ ಅದ್ಬುತ ಶಕ್ತಿ ಗುರುತಿಸಿಕೊಂಡು ನಮ್ಮಿಂದ ಸಾಧ್ಯವೇ ಎಂಬ ನಕರಾತ್ಮಕ ಚಿಂತನೆ ದೂರ ಮಾಡಿ. ನಮ್ಮಿಂದ ಸಾಧ್ಯ ಎಂಬ ಧನಾತ್ಮಕ ಚಿಂತನೆಯ ಮೂಲಕ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ತಿಳಿಸಿದರು. 

ಈಗಿನ ವಾತಾವರಣದಲ್ಲಿ ಅವಿದ್ಯಾವಂತರಗಿಂತಲೂ ಮಹಾನ್‌  ಮೇಧಾವಿಗಳೇ ಸಮಾಜಘಾತುಕ ಕೃತ್ಯದಲ್ಲಿ ತೊಡಗುತ್ತಿದ್ದಾರೆ. ಜೀವನದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಯೇ ಅಂತಿಮ ಅಲ್ಲ. ಅವೆಲ್ಲ ಜೀವನದ ಒಂದು ಭಾಗ. ಹಾಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಎಂದಾಕ್ಷಣ ಭಯ ಬೀಳುವುದು, ಏನೋ ಆಗಿಯೇ ಹೋಯಿತು ಎಂಬ ಆತಂಕ ಪಡುವುದು ಸರಿಯಲ್ಲ. ಫೇಲಾದಾಗ ಆತ್ಮಹತ್ಯೆಯಂತಹ ಘೋರ ಕೃತ್ಯದ ಬಗ್ಗೆ ಆಲೋಚನೆ ಮಾಡುವುದು ಸಹ ಸರಿಯಲ್ಲ.

ಆತ್ಮಹತ್ಯೆ ಮಾಡಿಕೊಂಡಾಕ್ಷಣಕ್ಕೆ ಸಮಸ್ಯೆ ಬಗೆ ಹರಿಯದು ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಬರೀ ಪುಸ್ತಕದ ಕೀಟಗಳಂತಾಗಬಾರದು. ಶಿಕ್ಷಣದ ಮೂಲಕ ಬದುಕುವ ಕಲೆ ಬೆಳೆಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಸ್ಫೂರ್ತಿ, ಪ್ರೇರಣೆ ಪಡೆಯುವಂತಾಗಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನು ಒಂದು ತಿಂಗಳ ಕಾಲಾವಕಾಶ ಇದೆ. ಈಗಿನಿಂದಲೇ ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಅದಕ್ಕೆ ತಕ್ಕಂತೆ ಸತತ ಅಧ್ಯಯನ ಮಾಡಬೇಕು.

ಯಾವುದೇ ಪ್ರಶ್ನೆ ಬಂದರೂ ಉತ್ತರಿಸುತ್ತೇನೆ ಎಂಬ  ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಬೇಕು. ಎಷ್ಟು ಬೇಕೋ ಅಷ್ಟು ಉತ್ತರವನ್ನು ಸುಂದರ, ಸ್ಪುಟವಾಗಿ ಬರೆಯುವ ಮೂಲಕ ಹೆಚ್ಚಿನ ಅಂಕ ಪಡೆಯಬೇಕು ಎಂದು ಶ್ರೀಗಳು ಸಲಹೆ ನೀಡಿದರು. ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಮಾತನಾಡಿ, ಪರೀಕ್ಷೆ ಮುನ್ನ ವ್ಯಕ್ತಿತ್ವ ವಿಕಸನ ಆಗುವುದಕ್ಕಿಂತಲೂ ಪ್ರತಿನಿತ್ಯ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳ ಬೇಕು.

ಯಾವುದನ್ನೇ ಆಗಲಿ ಪ್ರಶ್ನಿಸುವ ಮನೋಭಾವ, ಆಲೋಚನೆ ಬೆಳೆಸಿಕೊಳ್ಳುವ ಮೂಲಕ ಪರಿಪೂರ್ಣ ವ್ಯಕ್ತಿಗಳಾಗುವ ನಿಟ್ಟಿನಲ್ಲಿ ಸಾಗಬೇಕು. ಜಾಗೃತಿ ಇರುವ ಕಡೆ ಭಯ ಇರುವುದಿಲ್ಲ ಎಂಬ ಮಾತಿನಂತೆ ಸದಾ ಜಾಗೃತಿಯಿಂದ ಅಧ್ಯಯನ ಮಾಡುವ ಮೂಲಕ ಉತ್ತಮ ಫಲಿತಾಂಶ ಗಳಿಸಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್‌.ಎಂ. ಪ್ರೇಮಾ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 25 ಸಾವಿರಕ್ಕೂ ಅಧಿಕ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ಸಾಲಿನಲ್ಲಿ ಶೇ. 80 ರಷ್ಟು ಫಲಿತಾಂಶದೊಂದಿಗೆ 17ನೇ ಸ್ಥಾನದಲ್ಲಿದ್ದೆವು.

ಈ ಬಾರಿ 10ನೇ ಸ್ಥಾನದೊಳಗೆ ಬರಬೇಕು ಎಂಬ ದೃಢ ನಿಶ್ಚಯ ಮಾಡಿದ್ದು ಶಿಕ್ಷಕರು, ವಿದ್ಯಾರ್ಥಿಗಳು ಸಹಕರಿಸಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಆರ್‌. ಮುದೇಗೌಡಪ್ಪ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎಚ್‌. ರಾಮಚಂದ್ರಪ್ಪ, ನಗರಪಾಲಿಕೆ ಮಾಜಿ ಸದಸ್ಯ ಸಂಕೋಳ್‌ ಚಂದ್ರಶೇಖರ್‌, ಶಾಮನೂರು ಎಚ್‌.ಆರ್‌. ಲಿಂಗರಾಜ್‌, ಪ್ರೊ. ವೈ. ವೃಷಭೇಂದ್ರಪ್ಪ ಇತರರು ಇದ್ದರು. ನಂದೀಶ್‌ ಬಿ.ಬಿ. ಶೆಟ್ಟರ್‌ ಉಪನ್ಯಾಸ ನೀಡಿದರು. ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಸ್ವಾಗತಿಸಿದರು. 

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.