ಕಾಡ್ಗಿಚ್ಚು ಪ್ರಕರಣ: ಸಿಐಡಿ ತನಿಖೆಗೆ ವಹಿಸಲು ತೀರ್ಮಾನ


Team Udayavani, Mar 4, 2017, 3:50 AM IST

Z-FIRE-1.jpg

ಬೆಂಗಳೂರು: ರಾಜ್ಯದಲ್ಲಿ ಕಾಡಿಗೆ ಬೆಂಕಿ ಬೀಳುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದೆ.

ಇತ್ತೀಚೆಗಿನ ಕಾಡ್ಗಿಚ್ಚು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆಯು  ಇದಕ್ಕೆ ಮೂಲ ಕಾರಣ ಏನು ಎಂಬುದರ ಬಗ್ಗೆ ನಿಖರ ಕಾರಣ ಪತ್ತೆ ಹಚ್ಚಲು ಸಿಐಡಿ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಅರಣ್ಯ ಸಚಿವ ರಮಾನಾಥ್‌ರೈ ಅಧ್ಯಕ್ಷತೆಯಲ್ಲಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಕಾಡ್ಗಿಚ್ಚು ನಿಯಂತ್ರಣಕ್ಕೆ ತುರ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಅಂತಿಮವಾಗಿ ಕಾಡ್ಗಿಚ್ಚು ಪ್ರಕರಣ ಸಿಐಡಿ ತನಿಖೆ ನಡೆಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.

ಈ ಬಗ್ಗೆ “ಉದಯವಾಣಿ’ಗೆ ಮಾಹಿತಿ ನೀಡಿದ ಅರಣ್ಯ ಸಚಿವ ರಮಾನಾಥ ರೈ, “ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ, ಈ ಬಾರಿ ಕಾಡಿಗೆ ಬೆಂಕಿ ಬೀಳುವ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಪಶ್ಚಿಮ ಘಟ್ಟದುದ್ದಕ್ಕೂ ಬೆಂಕಿ ಬಿದ್ದಿರುವ ಬಗ್ಗೆ ಪ್ರತಿದಿನವೂ ನಾವು ಊಹಿಸಲಾಗದಷ್ಟು ದೂರುಗಳು ಬರುತ್ತಿವೆ. ಬಹಳಷ್ಟು ಕಡೆಗಳಲ್ಲಿ ಕಿಡಿಗೇಡಿಗಳೇ ಕಾಡಿಗೆ ಬೆಂಕಿಯಿಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕಾಡ್ಗಿಚ್ಚು ಪ್ರಕರಣಗಳ ಬಗ್ಗೆ ಶೀಘ್ರದಲ್ಲೇ ಸಿಐಡಿ ಪೊಲೀಸರಿಂದ ತನಿಖೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

“ಕಾಡ್ಗಿಚ್ಚು ನಿಯಂತ್ರಿಸುವುದಕ್ಕೆ ನಮ್ಮಲ್ಲಿ ಈಗ ಸಿಬ್ಬಂದಿ ಕೊರತೆಯಿರುವುದು ನಿಜ. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಾಲ್ಕು ಸಾವಿರ ಹೊಸ ಸಿಬ್ಬಂದಿ ನೇಮಕವಾಗಿದೆ. ಕಾಡ್ಗಿಚ್ಚು ನಿಯಂತ್ರಿಸುವುದಕ್ಕೆ ಹೆಲಿಕಾಪ್ಟರ್‌ನಂಥಹ ಅತ್ಯಾಧುನಿಕ ಸೇವೆ ಅಳವಡಿಸುವುದಕ್ಕೆ ನಾವು ಕೂಡ ಸಿದ್ಧ. ಆದರೆ, ಈಗ ಅಂಥಹ ಸೌಲಭ್ಯ ದೇಶದಲ್ಲೇ ಇಲ್ಲ. ಕೇಂದ್ರ ಸರ್ಕಾರದ ಬಳಿಯೇ ಆ ಸೌಲಭ್ಯ ಇಲ್ಲದಿರುವಾಗ, ಕರ್ನಾಟಕದಲ್ಲಿ ಕಾಡಿಗೆ ಬೆಂಕಿ ಬಿದ್ದ ತಕ್ಷಣ ಹೆಲಿಕಾಪ್ಟರ್‌ ಮೂಲಕ ನಂದಿಸುವ ವ್ಯವಸ್ಥೆ ಬೇಕು ಎಂದು ವಾದಿಸುವುದು ಎಷ್ಟು ಸರಿ? ಕಾಡಿನಲ್ಲಿ ಕಿಡಗೇಡಿಗಳಿಂದ ಉಂಟಾಗುತ್ತಿರುವ ಬೆಂಕಿ ಪ್ರಕರಣಗಳನ್ನು ತಡೆಗಟ್ಟಬೇಕಾದರೆ ಆ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಬೆಂಕಿ ಭೀತಿ
ಬಂಡೀಪುರ-ನಾಗರಹೊಳೆಯಿಂದ ಹಿಡಿದು ದಾಂಡೇಲಿವರೆಗೆ ರಾಜ್ಯದ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಈಗ ಕಾಡ್ಗಿಚ್ಚಿನದ್ದೇ ಭೀತಿ.ಹೀಗಿರುವಾಗ, ಧಗಧಗ ಉರಿಯುತ್ತಿರುವ ಬಿಸಿಲಿಗೆ ಬೆಂಕಿಯ ಸಣ್ಣ ಕಿಡಿ ಹಾಕಿದರೂ ಸಾಕು; ಇಡೀ ಕಾಡಿಗೆ ಕಾಡೇ ಹೊತ್ತಿ ಉರಿಯುತ್ತದೆ. ಇದರ ಪರಿಣಾಮ, ಕಾಡಿನಲ್ಲಿ ಯಾವಾಗ, ಎಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂಬುದನ್ನು ಅರಣ್ಯ ಸಿಬ್ಬಂದಿಗೆ ಊಹಿಸಲು ಕೂಡ ಸಾಧ್ಯವಾಗುತ್ತಿಲ್ಲ. ಅದರಲ್ಲಿಯೂ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಜನವಸತಿಯಿರುವ ಕಾಡು ಪ್ರದೇಶಗಳಲ್ಲಿ  ಕಾಡ್ಗಿಚ್ಚು ನಿಯಂತ್ರಿಸುವುದು ಅರಣ್ಯ ಇಲಾಖೆಗೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದರೆ, ರಾಜ್ಯದಲ್ಲಿ ಈಗ ಬಹುತೇಕ ಕಡೆ ಉಂಟಾಗುತ್ತಿರುವ ಕಾಡ್ಗಿಚ್ಚಿಗೆ ಕಿಡಿಗೇಡಿಗಳ ಅತಿಕ್ರಮಣ ಪ್ರವೇಶವೇ ಕಾರಣ ಎಂಬ ದಟ್ಟ ಅನುಮಾನ ಮೂಡಿದೆ.

ಏಕೆಂದರೆ, ಅರಣ್ಯ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಚಾರಣಿಗರ ಸಂಖೆ ಜಾಸ್ತಿಯಾಗಿದೆ. ಇನ್ನೊಂದೆಡೆ ದಟ್ಟ ಕಾಡಿನ ನಡುವೆಯೇ ಬಹಳಷ್ಟು ಹೋಮ್‌ಸ್ಟೇಗಳು ಕೂಡ ತಲೆಯೆತ್ತಿವೆ. ಈ ರೀತಿ ಕಾಡಿಗೆ ಅತಿಕ್ರಮಣ ಪ್ರವೇಶ ಮಾಡುವ ಕಿಡಿಗೇಡಿಗಳು ಕಾಡಿನಲ್ಲೇ ಮೋಜು-ಮಸ್ತಿ ಮುಗಿಸಿ ನಂತರ ಬೆಂಕಿ ಹಚ್ಚಿ ಹೋಗುತ್ತಿರುವುದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ. ಇನ್ನು ದಟ್ಟ ಅರಣ್ಯ ಪ್ರದೇಶದಿಂದ ಹಾದು ಹೋಗಿರುವ ರಸ್ತೆಗಳಲ್ಲಿಯೂ ಕಿಡಿಗೇಡಿಗಳು ಕಾಡಿಗೆ ಕೊಳ್ಳಿಯಿಡುತ್ತಿದ್ದಾರೆ. ಇತ್ತೀಚೆಗೆ ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿಕೊಳ್ಳುವ ದುರುದ್ದೇಶದಿಂದ ಸ್ಥಳೀಯ ಜನರೇ ಕಾಡಿಗೆ ಬೆಂಕಿ ಹಾಕಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ.

ಮತ್ತೂಂದೆಡೆ ಕಾಡ್ಗಿಚ್ಚು ನಂದಿಸುವುದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಕಡೆ ಬೆಂಕಿ ನಂದಿಸುವುದಕ್ಕೆ ತಮ್ಮಿಂದ ಸಾಧ್ಯವಾಗದೆ ಸ್ಥಳೀಯ ಜನರನ್ನು ಕರೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಆದರೆ, ಸ್ಥಳೀಯರಿಗೆ ಅವರು ಕೇಳಿದಷ್ಟು ಸಂಬಳ, ಊಟದ ವ್ಯವಸ್ಥೆಯನ್ನು ಅರಣ್ಯ ಸಿಬ್ಬಂದಿ ತನ್ನ ಜೇಬಿನಿಂದಲೇ ಕೊಡಬೇಕಾಗಿದೆ. ಹೀಗಾಗಿ, ಕಾಡ್ಗಿಚ್ಚು ಎಂದರೆ ನಾವೇ ಬೆಚ್ಚಿ ಬೀಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಹೇಳುತ್ತಾರೆ.

– ಸುರೇಶ್‌ ಪುದುವೆಟ್ಟು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.