ಧರ್ಮಾಚರಣೆಯಿಂದ ಸ್ವರಕ್ಷಣೆ ಸಾಧ್ಯ:ಸ್ವರ್ಣವಲ್ಲಿ  ಶ್ರೀ 


Team Udayavani, Mar 7, 2017, 4:36 PM IST

05-Mum02.jpg

ಮುಂಬಯಿ: ಆಧುನಿಕ ಯುಗದಲ್ಲಿ ದಿನಬಳಕೆಯಲ್ಲಿರುವ ವಸ್ತುಗಳನ್ನು ರೆಫ್ರಿಜರೇಟರ್‌ನಲ್ಲಿಟ್ಟು ಕೆಡದಂತೆ ಹೇಗೆ ನಾವು ಕಾಪಾಡುತ್ತೇವೆಯೋ ಅದೇ ರೀತಿ ಧರ್ಮಾಚರಣೆಯಿಂದ ನಮ್ಮನ್ನು ನಾವೂ ರಕ್ಷಿಸಿಕೊಳ್ಳಬಹುದು. ರೆಫ್ರಿಜರೇಟರ್‌ಗೆ ಹೇಗೆ ವಿದ್ಯುತ್‌ ಶಕ್ತಿ ಅವಶ್ಯವೋ ಅದೇ ರೀತಿ  ನಿತ್ಯಾನುಷ್ಠಾನವೂ ನಮ್ಮ ದೇಹಕ್ಕೆ ನಾವು ಪೂರೈಸುವ ವಿದ್ಯುತ್‌ ಆಗಿದೆ. ಆದರೆ ಕೆಲವೊಮ್ಮೆ ವಿದ್ಯುತ್‌ ಪೂರೈಕೆ ಕಡಿತವಾದಾಗ ಜನರೇಟರ್‌ಗಳನ್ನು ನಾವೂ ಬಳಸುತ್ತೇವೆ. ಅದೇ ರೀತಿ ಧರ್ಮಾಚರಣೆಯಲ್ಲಿ ಏರುಪೇರಾಗದಂತೆ ಕಾಪಾಡಲು ಯತಿಗಳು, ಸನ್ಯಾಸಿಗಳು ಶಿಷ್ಯರ ಜೀವನದಲ್ಲಿ ವಿದ್ಯುತ್‌ ಪೂರೈಸಲು ಸಂಚಾರವನ್ನು ಕೈಗೊಳ್ಳುತ್ತಾರೆ. ಇದೇ ಇಂದಿನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸೋಂದಾಶ್ರೀ ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸೋಂದಾಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಶ್ರೀಮದ್‌ ಜಗದ್ಗುರು ಶಂಕರಾ

ಚಾರ್ಯ ಗಂಗಾಧರೇಂದ್ರ ಸ್ವಾಮೀಜಿ ಅವರು ಮಾ. 4ರಂದು  ಸಂಜೆ ಮುಂಬಯಿಗೆ ಆಗಮಿಸಿ ಮಾಟುಂಗಾ ಪೂರ್ವದ ಶ್ರೀ ಶಂಕರ ಮಠದಲ್ಲಿ ನೆರೆದ ಸದ್ಭಕ್ತರ‌ು ಹಾಗೂ ಶಿಷ್ಯರನ್ನು ಅನುಗ್ರಹಿಸಿದರು.

ಶ್ರೀಗಳ‌ು ನಗರಪ್ರವೇಶ ಮಾಡುತ್ತಿದ್ದಂತೆಯೇ ಶ್ರೀ ಸ್ವರ್ಣವಲ್ಲಿ ಸೇವಾ ಸಮಿತಿ ಮುಂಬಯಿ ಹಾಗೂ ಶ್ರೀ ಶಂಕರ ಮಠದ ಪದಾಧಿಕಾರಿ ಮತ್ತು ಸದಸ್ಯರು, ಶಿಷ್ಯವೃಂದ, ಮಹಿಳೆಯರು, ಮುಂಬಯಿವಾಸಿ ಭಕ್ತರು ಶಾಸ್ತ್ರೋಕ್ತವಾಗಿ ಪೂರ್ಣಕುಂಭ ಸ್ವಾಗತದೊಂದಿಗೆ ಶ್ರೀಗಳನ್ನು ಬರಮಾಡಿಕೊಂಡರು. ವಿ. ಎನ್‌. ಹೆಗಡೆ ಮತ್ತು ಗಂಗಾ ಹೆಗಡೆ ದಂಪತಿ ಪಾದಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿ. ಎನ್‌. ಹೆಗಡೆ, ತನುಜಾ ಹೆಗಡೆ, ಡಾ| ಎನ್‌. ಜಿ. ಭಟ್‌ ಚಾರ್ಕೋಪ್‌, ಜಿ. ವಿ. ಹೆಗಡೆ, ಶಿವಾನಂದ ಭಟ್‌, ಕೆ. ಸಿ. ಹೆಗಡೆ, ಅನಂತ ಭಟ್‌, ರಾಜರಾಮ ಹೆಗಡೆ, ಚಂದ್ರಶೇಖರ ಭಟ್‌, ಆರ್‌. ಜಿ. ಹೆಗಡೆ, ಎಸ್‌. ಎಸ್‌. ಜೋಶಿ, ವಸಂತ ಭಟ್‌, ಸುರೇಶ್‌  ಹೆಗಡೆ, ಡಾ| ಎಸ್‌. ಆರ್‌. ನಾಯ್ಕ, ಮಧುಕರ ನಾಯ್ಕ, ಅಶೋಕ ನಾಯ್ಕ ಸೇರಿದಂತೆ ಅನೇಕ ರಾಮಕ್ಷತ್ರಿಯ ಹಾಗೂ ಹವ್ಯಕ ಬಂಧು ಭಕ್ತರು ಉಪಸ್ಥಿತರಿದ್ದರು.

ಮಾ. 11ರವರೆಗೆ ನಗರದಲ್ಲಿ ಮೊಕ್ಕಾಂ ಹೂಡಲಿರುವ ಶ್ರೀಗಳು ನಗರದ ವಿವಿಧೆಡೆಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಲಿದ್ದಾರೆ. ಪ್ರತಿದಿನ ಮುಂಜಾನೆ ಶ್ರೀಗಳಿಂದ ಕುಂಕುಮಾ

ರ್ಚನೆ ಪಾದಪೂಜೆ ಹಾಗೂ ಮಾ. 8ರಂದು  ಏಕಾದಶಿ ಹೊರತುಪಡಿಸಿ ಮಧ್ಯಾಹ್ನ ಭಿûಾ
ಸೇವೆ ನಡೆಯಲಿದೆ. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಹಾನಗರದ ಭಕ್ತಾದಿ ಗಳು ಪಾಲ್ಗೊಂಡು ಸಹಕರಿಸುಂತೆ ಶ್ರೀ  ಸ್ವರ್ಣವಲ್ಲಿ ಸೇವಾ ಸಮಿತಿ ಮುಂಬಯಿಯ    ಪದಾಧಿಕಾರಿಗಳು ಇದೇ ಸಂದರ್ಭ  ತಿಳಿಸಿದರು. 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.