ಡಾ| ರಾಜಶೇಖರ್ ಆರ್. ಕೋಟ್ಯಾನ್ಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ
Team Udayavani, Mar 8, 2017, 5:12 PM IST
ಮುಂಬಯಿ: ದ. ಕನ್ನಡ ಬಂಟ್ವಾಳದ ಸ್ವಸ್ತಿಕ್ ಪ್ರಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 9ನೇ ವಾರ್ಷಿಕ ಸಾಮೂಹಿಕ ವಿವಾಹ ಮತ್ತು ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಮಾ. 5ರಂದು ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜರಗಿತು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಬಂಟ್ವಾಳ ತಾಲೂಕು ಹಾಗೂ ಜೆಸಿಐ ಮಡಂತ್ಯಾರು ಇವರ ಜಂಟಿ ಆಶ್ರಯದಲ್ಲಿ ನಡೆದ ಸಮಾರಂಭಕ್ಕೆ ಮಂಗಳೂರು ಸಂಸದ ನಳಿನ್ಕುಮಾರ್ ಕಟೀಲ್ ಅವರನ್ನೊಳಗೊಂಡು ಪ್ರಸಿದ್ಧ ಚಲನಚಿತ್ರ ನಟ, ಪಡುಮಲೆ ಕುತ್ಯಾಲ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ವಿನೋದ್ ಆಳ್ವ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪ್ರತಿವರ್ಷದಂತೆ ಕೊಡಮಾಡುವ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ-2017ನ್ನು ನಗರದ ಡಾ| ರಾಜಶೇಖರ್ ಆರ್. ಕೋಟ್ಯಾನ್ ಅವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಂಜಯ್ ಕುಮಾರ್ ಶೆಟ್ಟಿ ಗೋಣಿಬೀಡು, ವಿನಾಯಕ ರಾವ್ ಕನ್ಯಾಡಿ, ರಮೇಶ್ ಬಾಯಾರು, ರಮೇಶ್ ಕಲ್ಲಡ್ಕ ಹಾಗೂ ಸ್ವಸ್ತಿಕ್ ಸಂಭ್ರಮ ಪುರಸ್ಕಾರ-2017ನ್ನು ಕಿಶೋರ್ ಪೆರಾಜೆ, ಸಂಜೀವ ಶೆಟ್ಟಿ ಮುಗೆರೋಡಿ, ಶೇಖರ ನಾರಾವಿ, ಕೆ. ಧರ್ಮಪಾಲ ಪೂಜಾರಿ, ಕುಮಾರಿ ಶ್ರುತಿ ದಾಸ್ ಮತ್ತು ಅತ್ಯುತ್ತಮ ಯುವ ಸಂಘಟನೆ ಪ್ರಶಸ್ತಿಯನ್ನು ಶ್ರೀ ಶಾರದಾಂಬಾ ಭಜನಾ ಮಂಡಳಿ ಕುಕ್ಕೇಡಿ-ಬುಳೆಕ್ಕರ ಸಂಸ್ಥೆಗೆ ಪ್ರದಾನಿಸಿ ಗೌರವಿಸಲಾಯಿತು.
ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್, ಮಾಜಿ ಸಚಿವ ಬಿ.ನಾಗರಾಜ್ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಯೋಜನೆ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ, ಸ್ವರ್ಣಲತಾ, ವಸಂತ ಹೆಗ್ಡೆ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರ, ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ರಂಜನ್ ಗೌಡ, ಉದ್ಯಮಿ ಜಿತೇಂದ್ರ ಎಸ್. ಕೊಟ್ಟಾರಿ, ಬಿಲ್ಲವ ಮಹಾಮಂಡಲ ವಕ್ತಾರ ಹರಿಕೃಷ್ಣ ಬಂಟ್ವಾಳ, ಡಾ| ಬಾಲಕೃಷ್ಣ ಶೆಟ್ಟಿ, ಸುಂದರ ರಾಜ್ ಹೆಗ್ಡೆ, ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಕುಡುಮೇರು, ರಶ್ಮಿ, ಹುಕುಂ ರಾಂ ಪಠೇಲ್, ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಪುಂಜಾಲಕಟ್ಟೆ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಕುಮಾರ್, ಉದ್ಯಮಿ ಹರೀಶ್ ಪೈ, ಸುಬ್ಬಣ್ಣ, ಚೆನ್ನಕೇಶವ ಉಪಸ್ಥಿತರಿದ್ದರು.
ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸಹಪುರೋಹಿತ ವೃಂದದ ಮಂತ್ರ ಘೋಷ ಗಳೊಂದಿಗೆ 13 ಜೋಡಿ ವಧೂ-ವರರು ಹಸೆ ಮಣೆಯನ್ನೇರಿದರು. ಗೋವಿಂದಕೃಷ್ಣ ದೇವಾಲಯ ಗುರುವಾಯನಕೆರೆಯ ಮಾಜಿ ಪ್ರಧಾನ ಅರ್ಚಕ ವೇ| ಮೂ| ಕೃಷ್ಣ ಭಟ್ ತಮ್ಮ ಪೌರೋಹಿತ್ಯದಲ್ಲಿ ಸಾಮೂಹಿಕ ವಿವಾಹ ನೆರವೇರಿಸಿ ಅನುಗ್ರಹಿಸಿದರು. ಸ್ವಸ್ತಿಕ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲ ಕಟ್ಟೆ, ಗೌರವಾಧ್ಯಕ್ಷ ಪಿ.ಅಬ್ದುಲ್ಲಾ ಪುಂಜಾಲ
ಕಟ್ಟೆ, ಕಾರ್ಯದರ್ಶಿ ಜಯರಾಜ್ ಅತ್ತಾಜೆ, ಕೋಶಾಧಿಕಾರಿ, ನಾಟಕೋತ್ಸವ ಸಂಚಾಲಕ ಎಚ್. ಕೆ. ನಯನಾಡು ಮತ್ತಿತರ ಪದಾಧಿಕಾರಿ ಗಳು ಉಪಸ್ಥಿತರಿದ್ದರು. ಪಿ. ಎಂ. ಪ್ರಭಾಕರ್ ಸ್ವಾಗತಿಸಿದರು. ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಪ್ರಸ್ತಾವನೆಗೈದರು. ಶಿಕ್ಷಕ ಬಿ. ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. ಜೆಸಿಐ ಮಡಂತ್ಯಾರು ಅಧ್ಯಕ್ಷ ರಾಜೇಶ್ ಪಿ. ಪುಂಜಾಲಕಟ್ಟೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್ ಖೇರ್ ಫೋಟೊ!
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Puttur: ಪಾಣಾಜೆ ಸಮುದಾಯ ಆರೋಗ್ಯ ಕೇಂದ್ರ ಶೀಘ್ರ ಸಿದ್ಧ
Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.