ಪ್ರಬಲ ಬಂಟ, ಈಡಿಗ ಸಮುದಾಯದ ಮೇಲೆ ಬಿಜೆಪಿ ಕಣ್ಣು


Team Udayavani, Mar 10, 2017, 10:25 AM IST

bjp.jpg

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಕೈಕೊಟ್ಟಿದ್ದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ತನ್ನ ಶಕ್ತಿ ಹೆಚ್ಚಿಸಿಕೊಳ್ಳುವತ್ತ ಹೆಜ್ಜೆ ಇಟ್ಟಿರುವ ಬಿಜೆಪಿ ಆ ಭಾಗದ ಪ್ರಬಲ ಬಂಟ ಸಮುದಾಯ ಮತ್ತು ಹಿಂದುಳಿದ ವರ್ಗಗಳ
(ಪ್ರಮುಖವಾಗಿ ಈಡಿಗ) ಮತಗಳ ಮೇಲೆ ಕಣ್ಣು ಹಾಯಿಸಿದೆ.

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಲ್ಲೆಗಳನ್ನೊಳಗೊಂಡ ಈ ಭಾಗದಲ್ಲಿ ಈಗಾಗಲೇ ಬಂಟ ಸಮುದಾಯದ ಜಯಪ್ರಕಾಶ್‌ ಹೆಗ್ಡೆ, ಮೂಡಬಿದರೆಯ ಮೇಘನಾಥ ಶೆಟ್ಟಿ, ಕುಮಟಾದ ದಿನಕರ ಶೆಟ್ಟಿ, ಈಡಿಗ ಸಮುದಾಯದ ಸೊರಬದ ಕುಮಾರ್‌ ಬಂಗಾರಪ್ಪ, ಜಿ.ಡಿ.ನಾರಾಯಣಪ್ಪ, ಭಟ್ಕಳದ ಜೆ.ಡಿ.ನಾಯ್ಕರನ್ನು ಬಿಜೆಪಿಗೆ ಸೇರಿಸಿ ಕೊಳ್ಳಲಾಗಿದೆ. ಆ ಮೂಲಕ ಕಳೆದ ಬಾರಿ ಪಕ್ಷಕ್ಕೆ ಹಿನ್ನಡೆಯಾಗಿದ್ದ ಕಡೆಗಳಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಹೆಜ್ಜೆ ಇಟ್ಟಿದೆ.

ಈಗಾಗಲೇ ನಂಜನಗೂಡು ಕ್ಷೇತ್ರದಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್‌ರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ದಲಿತ ಸಮುದಾಯದ ಒಂದಷ್ಟು ಮತಗಳನ್ನು ಸೆಳೆಯುವತ್ತ ಹೆಜ್ಜೆ ಇಟ್ಟಿದ್ದ ಬಿಜೆಪಿ ಇದೀಗ ಕಾಂಗ್ರೆಸ್‌ನ
ಮತ್ತೂಂದು ಮತಬ್ಯಾಂಕ್‌ ಆಗಿದ್ದ ಹಿಂದುಳಿದ ವರ್ಗ (ಈಡಿಗ) ಮತ್ತು ಬಂಟ ಸಮುದಾಯವನ್ನು ಸೆಳೆಯಲು
ಯತ್ನಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಸಮುದಾಯದವರು ರಾಜಕೀಯದಲ್ಲಿ ನಿರ್ಣಾಯಕ ಪಾತ್ರ ಹೊಂದಿದ್ದಾರೆ. ಯಾರಿಗೆ ಈ ಸಮುದಾಯದ ಬೆಂಬಲ ಹೆಚ್ಚಾಗಿದೆಯೋ ಆ ಪಕ್ಷ ಚುನಾವಣೆಯಲ್ಲಿ ಗೆಲ್ಲುವುದು ಖಚಿತ ಎಂಬ ಭಾವನೆ ಇದೆ.

2008ರ ಚುನಾವಣೆಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಬಿಜೆಪಿ 15 ಸ್ಥಾನ ಗಳಿಸಿತ್ತು. ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆದ್ದಿದ್ದರೆ, ಜೆಡಿಎಸ್‌ 2 ಸ್ಥಾನ ಪಡೆದಿತ್ತು. ಆದರೆ, 2013ರ ಚುನಾವಣೆಯಲ್ಲಿ ಬಿಜೆಪಿ ಹೋಳಾಗಿ ಕೆಜೆಪಿ ಹುಟ್ಟಿಕೊಂಡಿದ್ದರಿಂದ
ಬಿಜೆಪಿ ಸಾಕಷ್ಟು ನಷ್ಟ ಅನುಭವಿಸಿತ್ತು. 2008ರಲ್ಲಿ 15 ಸೀಟುಗಳನ್ನು ಗೆದ್ದಿದ್ದ ಬಿಜೆಪಿ ಕೇವಲ 4 ಸ್ಥಾನಕ್ಕೆ
ತೃಪ್ತಿಪಟ್ಟುಕೊಂಡಿತ್ತು. ಕಾಂಗ್ರೆಸ್‌ ತನ್ನ ಸ್ಥಾನಗಳನ್ನು 9 ರಿಂದ 16ಕ್ಕೆ ಹೆಚ್ಚಿಸಿಕೊಂಡಿದ್ದರೆ, ಉತ್ತರ ಕನ್ನಡದಲ್ಲಿ 2 ಸೀಟುಗಳನ್ನು ಕಳೆದುಕೊಂಡಿದ್ದ ಜೆಡಿಎಸ್‌ ಶಿವಮೊಗ್ಗ ಜಿಲ್ಲೆಯಲ್ಲಿ 3 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿತ್ತು.

2008ರಲ್ಲಿ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ಬಿಜೆಪಿಯಿಂದ ಗೆದ್ದಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ 2013ರಲ್ಲಿ ಪಕ್ಷೇತರರಾಗಿ ಜಯಗಳಿಸಿದ್ದರು. ನಂತರದಲ್ಲಿ ಬಿಜೆಪಿ ಸೇರಿ ಸಹ ಸದಸ್ಯರಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಬಿಜೆಪಿ ಬಲ ಐದಕ್ಕೆ ಏರಿಕೆಯಾಗಿತ್ತು.

ಈಡಿಗ ಸಮುದಾಯ
2013ರಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಸೊರಬ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕುಮಾರ ಬಂಗಾರಪ್ಪ ಕೂಡ ಬಿಜೆಪಿ ಜತೆಗೂಡಿದ್ದಾರೆ. ವಿಶೇಷವೆಂದರೆ ದಿನಕರಶೆಟ್ಟಿ ಬಂಟ ಸಮುದಾಯಕ್ಕೆ ಸೇರಿದವರಾಗಿದ್ದರೆ, ಸೊರಬದ ಕುಮಾರ ಬಂಗಾರಪ್ಪ ಮತ್ತು ಹೊಸನಗರ ಕ್ಷೇತ್ರದಿಂದ (ಪ್ರಸ್ತುತ ಆ ಕ್ಷೇತ್ರ ಇಲ್ಲ) ಕಾಂಗ್ರೆಸ್‌ ಶಾಸಕರಾಗಿದ್ದ ಜಿ.ಡಿ.ನಾರಾಯಣಪ್ಪ ಈಡಿಗ ಸಮುದಾಯದವರು. ಜತೆಗೆ, 2013ರ ಚುನಾವಣೆಯಲ್ಲಿ ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಜೆ.ಡಿ.ನಾಯ್ಕ ಇದೇ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಈ ಸಮುದಾಯವನ್ನು ಬಿಜೆಪಿಯತ್ತ ಸೆಳೆಯುವ ನಿರೀಕ್ಷೆ. 

ಬಂಟ ಸಮುದಾಯ
2008ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಕುಮಟಾದ ದಿನಕರ ಶೆಟ್ಟಿ ಈಗ ಬಿಜೆಪಿ ಸೇರಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಜೆಪಿ ಸೇರಿರುವ ಜಯಪ್ರಕಾಶ್‌ ಹೆಗ್ಡೆ ಮತ್ತು ಮೂಡಬಿದರೆ-ಮೂಲ್ಕಿ ವಿಧಾನಸಭಾ ಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಮೇಘನಾಥ ಶೆಟ್ಟಿ ಬಂಟ ಸಮುದಾಯಕ್ಕೆ ಸೇರಿದವರು. ಇವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟರ ಸಂಘಟನೆಯ ಹಲವು ಪದಾಧಿಕಾರಿ ಗಳೂ ಬಿಜೆಪಿ ಸೇರಿರುವುದರಿಂದ ಆ ಭಾಗದಲ್ಲಿ ಸಮುದಾಯದ ಮತಗಳು ಪಕ್ಷದತ್ತ ವಾಲಲಿದೆ ಎಂಬುದು ಬಿಜೆಪಿಯ ಲೆಕ್ಕಾಚಾರ.

ಟಾಪ್ ನ್ಯೂಸ್

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Crime-2-Sulya

Sulya: ವಾರಂಟ್‌ ಆರೋಪಿ ಪರಾರಿ ಪ್ರಕರಣ; ಆರೋಪಿಯ ಮಾಹಿತಿಗೆ ಪೊಲೀಸರ ಮನವಿ

Shabarimale

Sabarimala;ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

doctor

Doctor’s negligence?: ವೃಷಣ ಶಸ್ತ್ರಚಿಕಿತ್ಸೆ ವೇಳೆ ಬಾಲಕ ಸಾ*ವು

bk-Hari

Caste census ಕೂಗು ಮತ್ತಷ್ಟು ಜೋರು!: ಸರಕಾರ ಬಿದ್ದರೂ ಪರವಾಗಿಲ್ಲ, ಪ್ರಕಟಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ

Kota–Railway

Railway Connectivity: ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

1-redd

Digital arrest ವಂಚನೆಗೆ ಬಲಿಯಾಗಬೇಡಿ: ಕೇಂದ್ರ ಎಚ್ಚರಿಕೆ ಸಂದೇಶ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.