ಶಿವಕುಮಾರ ಸ್ವಾಮೀಜಿ ರಥಯಾತ್ರೆಗೆ ಪೂರ್ಣಕುಂಭ ಸ್ವಾಗತ
Team Udayavani, Mar 11, 2017, 12:31 PM IST
ಮೈಸೂರು: ಪದ್ಮವಿಭೂಷಣ ಡಾ.ಶಿವಕುಮಾರ ಸ್ವಾಮೀಜಿ ಅವರ 110ನೇ ಜನ್ಮದಿನೋತ್ಸವದ ಪ್ರಯುಕ್ತ ರಾಜಾÂದ್ಯಂತ ಸಂಚರಿಸುತ್ತಿರುವ ರಥಯಾತ್ರೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದು, ಶುಕ್ರವಾರ ನಗರದೆಲ್ಲೆಡೆ ಸಂಚರಿಸಿತು. ರಥವನ್ನು ವೀರಶೈವ ಸಮುದಾಯದ ಪ್ರಮುಖರು ಪೂರ್ಣಕುಂಭಗಳೊಂದಿಗೆ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಸಾಂಕೇತಿಕವಾಗಿ ಸಸಿ ನೆಡುವ ಮೂಲಕ, 110 ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.
ನಗರಕ್ಕಾಗಮಿಸಿದ ರಥ ಶುಕ್ರವಾರ ಕುವೆಂಪುನಗರದ ಡಾ.ಶಿವಕುಮಾರಸ್ವಾಮೀಜಿ ವೃತ್ತ, ವಿವೇಕಾನಂದ ವೃತ್ತ, ಅರವಿಂದನಗರ, ಶ್ರೀರಾಂಪುರ, ತಳೂರು ವೃತ್ತ, ತಳೂರು, ಸಿಂಧುವಳ್ಳಿ, ಬ್ಯಾತಳ್ಳಿ, ನೂರೊಂದು ಗಣಪತಿ ವೃತ್ತದಿಂದ ಬಸವೇಶ್ವರ ಪುತ್ಥಳಿ, ರಾಮಾನುಜ ರಸ್ತೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸಂಚರಿಸಿದ ರಥಯಾತ್ರೆ ಸಂಜೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠವನ್ನು ಪ್ರವೇಶಿಸಿತು.
ಮಠದಲ್ಲಿ ಸ್ವಾಗತ: ಸುತ್ತೂರು ಮಠದ ಆವರಣವನ್ನು ಪ್ರವೇಶಿಸಿದ ರಥಯಾತ್ರೆಗೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಪುಷ್ಪಾರ್ಚನೆ ಮಾಡುವ ಮೂಲಕ ಬರಮಾಡಿಕೊಂಡರು. ಇದಾದ ಬಳಿಕ ಮಠದ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಹೊಸಮಠದ ಚಿದಾನಂದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ,
ಮಾಜಿ ಸಚಿವ ಎಸ್.ಎ.ರಾಮದಾಸ್, ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಉಪ ಮೇಯರ್ ರತ್ನಲಕ್ಷ್ಮಣ್ ಇನ್ನಿತರರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಾಹಿತಿ ಪೊ›.ಮಲೆಯೂರು ಗುರುಸ್ವಾಮಿ, ಸಿದ್ಧಗಂಗಾ ಮಠದ ಧಾರ್ಮಿಕ ಪರಂಪರೆ, ಡಾ. ಶಿವಕುಮಾರ ಸ್ವಾಮೀಜಿ ಅವರ ತ್ರಿವಿಧ ದಾಸೋಹ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್ ಪಾರ್ಟಿ: ಪೊಲೀಸ್ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ
Lokayukta ADGP ಚಂದ್ರಶೇಖರ್ ಬ್ಲಾಕ್ಮೇಲರ್, ಕ್ರಿಮಿನಲ್:ಎಚ್ಡಿಕೆ ಕೆಂಡಾಮಂಡಲ
Mangaluru: ಟ್ರಾಫಿಕ್ ಸಿಗ್ನಲ್ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್
BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು
J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್ ಖರ್ಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.