ಅಧಿಕಾರ ಪಡೆಯಲು ಬಿಜೆಪಿ ಗೆಲ್ಲಿಸಿ: ಮಾಜಿ ಸಚಿವ ರಾಮದಾಸ್‌


Team Udayavani, Mar 11, 2017, 12:35 PM IST

mys4.jpg

ನಂಜನಗೂಡು: ಮುಂದಿನ ಬಾರಿ ರಾಜ್ಯದ ಅಧಿಕಾರವನ್ನು ಬಿಜೆಪಿ ಪಡೆಯಬೇಕಾದರೆ ನಂಜನಗೂಡಿನ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಅನಿವಾರ್ಯ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ತಿಳಿಸಿದ್ದಾರೆ.

ನಗರದ ಕಬಿನಿ ಸಂಗಮ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಗರದ 50 ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್‌ನ ಭ್ರಷ್ಟಾಚಾರಯುಕ್ತ ದುರಾಡಳಿತ ಜನತೆಗೆ ಸಾಕಾಗಿದೆ. ಹಾಗಾಗಿ ಜನ ಆ ಪಕ್ಷಕ್ಕೆ ಪಾಠ ಕಲಿಸಲು ಸಿದ್ಧರಾಗಿದ್ದಾರೆ. ನಂಜನಗೂಡಿನ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದರ ಮೂಲಕ 2018ರ ವಿಜಯೋತ್ಸವದ ಆರಂಭ ದಕ್ಷಿಣ ಕಾಶಿ ಎನ್ನುವ ಈ ಪವಿತ್ರ ಕ್ಷೇತ್ರದಿಂದಲೇ ಪ್ರಾರಂಭವಾಗಬೇಕಿದೆ ಎಂದರು.

ಶ್ರೀನಿವಾಸ್‌ ಪ್ರಸಾದ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ಕ್ಷೇತ್ರದ ನೆನಪಾಗಿದೆ ಎಂದು ಟೀಕಿಸಿದ ಅವರು, ಅದಕ್ಕಾಗಿಯೇ ಕ್ಷೇತ್ರದ 22 ಸಾವಿರ ಜನರಿಗೆ ಸಾಲ ಸೌಲಭ್ಯ ನೀಡಿದ್ದೂ ಅಲ್ಲದೆ ಆಡಳಿತ ಪಕ್ಷವಾಗಿ ಏನೇನು ಮಾಡಬಾರದಿತ್ತೋ ಅಂಥ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಅವರು ಮಾಡುತ್ತಿದ್ದಾರೆ. ಹಣ ಬಲ, ಅಧಿಕಾರ ಹಾಗೂ ಅಧಿಕಾರಿಗಳು ಮತ್ತು ಪೊಲೀಸ್‌ ಬೆಂಬಲ ನಮಗಿಲ್ಲ.

ಇರುವುದು ಜನರ ಶ್ರೀರಕ್ಷೆ ಎಂದು ರಾಮದಾಸ್‌ ಹೇಳಿದರು. ಫೈನಲ್‌ ಪ್ರವೇಶಿಸಬೇಕಿದ್ದರೆ ಸೆಮಿಫೈನಲ್‌ನ ಗೆಲುವು ಹೇಗೆ ಅನಿವಾರ್ಯವೂ ಹಾಗೆಯೇ ನಮ್ಮೆಲ್ಲರ ನಾಯಕ ಬಿ.ಎಸ್‌.ಯಡಿಯೂರಪ್ಪ2018ರಲ್ಲಿ ಮತ್ತೆ ಮುಖ್ಯಮಂತ್ರಿ ಆಗಬೇಕಾದರೆ ನಾವು ನಂಜನಗೂಡಿನ ಈ ಉಪ ಚುನಾವಣೆಯ ವಿಜಯೋತ್ಸವ ಆಚರಿಸುವಂತಾಗ‌ಬೇಕು. ಅದಕ್ಕಾಗಿ ನಾವು ಎಲ್ಲ ಪ್ರಯತ್ನ ಕೈಗೊಳ್ಳಬೇಕಿದೆ ಎಂದರು.

ಜಿಲ್ಲಾ ಗ್ರಾಮಾಂತರ  ಬಿಜೆಪಿ ಅಧ್ಯಕ್ಷ ಕೋಟೆ ಶಿವಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಜಿಪಂ ಸದಸ್ಯ ಎಚ್‌.ಎಸ್‌.ದಯಾನಂದಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ನಗರಾಧ್ಯಕ್ಷ ವಿನಯಕುಮಾರ್‌, ಮುಖಂಡ ಯು.ಎನ್‌.ಪದ್ಮನಾಭರಾವ್‌, ನಗರದ ಚುನಾವಣೆ ಉಸ್ತುವಾರಿ ಬೋರೆಗೌಡ, ನಗರಸಭಾ ಉಪಾಧ್ಯಕ್ಷ ಪ್ರದೀಪ್‌, ಸದಸ್ಯ ದೊರೆಸ್ವಾಮಿ, ಕೆ.ಜಿ.ಮಂಗಳಾ, ಸುಧಾಮಹೇಶ್‌, ಕೆ.ಜಿ.ಆನಂದ, ಗಿರೀಶ್‌, ಎನ್‌.ಆರ್‌.ಕೃಷ್ಣಪ್ಪಗೌಡ, ಗಣೇಶ ಮಹಿಳಾ ಮೋರ್ಚಾ ಅಧ್ಯಕ್ಷ ಗಾಯಿತ್ರಿ, ಎಪಿಎಂಸಿ ಸದಸ್ಯ ಗುರುಸ್ವಾಮಿ ಇದ್ದರು. 

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.