![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 14, 2017, 3:35 AM IST
ಕೊಲಂಬೊ: ಬುಧವಾರದಿಂದ ಇಲ್ಲಿ ಆರಂಭವಾಗಲಿರುವ ಆತಿಥೇಯ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಆಲ್ರೌಂಡರ್ ಮೊಹಮ್ಮದುಲ್ಲ ಅವರನ್ನು ಕೈಬಿಡಲು ಬಾಂಗ್ಲಾದೇಶ ನಿರ್ಧರಿಸಿದೆ. ತಂಡದ ಮ್ಯಾನೇಜರ್ ಖಲೀದ್ ಮಹ್ಮದ್ ಇದನ್ನು ತಿಳಿಸಿದ್ದಾರೆ. ಇದು ಬಾಂಗ್ಲಾದೇಶದ 100ನೇ ಟೆಸ್ಟ್ ಪಂದ್ಯವೆಂಬುದು ವಿಶೇಷ. ಆದರೆ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅದೃಷ್ಟ ಸೀನಿಯರ್ ಆಟಗಾರ ಮೊಹಮದುಲ್ಲ ಅವರಿಗೆ ಇಲ್ಲವಾಗಿದೆ. ಇದಕ್ಕೆ ಅವರ ಕಳಪೆ ಫಾರ್ಮ್ ಕಾರಣ.
ಗಾಲೆ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 8 ರನ್ ಮಾಡಿದ ಮೊಹಮದುಲ್ಲ, ದ್ವಿತೀಯ ಸರದಿಯಲ್ಲಿ ಖಾತೆಯನ್ನೇ ತೆರೆದಿರ ಲಿಲ್ಲ. ಇದಕ್ಕೂ ಮುನ್ನ ಭಾರತದೆದುರು ಹೈದರಾಬಾದ್ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು ಅರ್ಧ ಶತಕ ಹೊಡೆದಿದ್ದರು. ಆದರೆ ಸೋಮವಾರದ ಅಭ್ಯಾಸದಲ್ಲಿ ಮೊಹಮದುಲ್ಲ ಪಾಲ್ಗೊಂಡಿದ್ದಾರೆ. ಪಂದ್ಯದ ಮೊದಲ ದಿನದಾಟದ ಬಳಿಕ ಬಾಂಗ್ಲಾದೇಶಕ್ಕೆ ವಾಪಸಾಗಲಿದ್ದಾರೆ ಎಂದು ಟೀಮ್ ಮ್ಯಾನೇಜರ್ ತಿಳಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.