ಆಶ್ರಯ ಮನೆ ಪರಭಾರೆ ಸಲ್ಲ
Team Udayavani, Mar 15, 2017, 1:07 PM IST
ದಾವಣಗೆರೆ: ಬಡವರಿಗೂ ಸೂರು ಸಿಗಬೇಕೆಂಬ ಕಾಂಗ್ರೆಸ್ನ ಆಶಯದಂತೆ ನೀಡಿರುವ ಆಶ್ರಯ ಮನೆಗಳನ್ನು ಯಾರೂ ಸಹ ಪರಭಾರೆ ಮಾಡದೇ ಸರ್ಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಮಂಗಳವಾರ ಗೃಹ ಕಚೇರಿ ನಡೆದ ಸರಳ ಸಮಾರಂಭದಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯ 41ನೇ ವಾರ್ಡ್ನ ಬೆಂಕಿನಗರದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. ಮನೆಗಳನ್ನು ಒತ್ತೆ ಇಟ್ಟು ಯಾರೂ ಕೂಡ ಸಾಲ ಮಾಡದೆ ತಮ್ಮ ದುಡಿಮೆಯ ಮೂಲಕ ಸರಳ ಜೀವನ ನಡೆಸಬೇಕು.
ದಾವಣಗೆರೆಯಲ್ಲಿ ಬಹಳಷ್ಟು ಜನ ಇನ್ನು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಅವರಿಗೆ ಸ್ವಂತ ಮನೆ ನಿರ್ಮಿಸಲು ಜಮೀನು ನೋಡಲಾಗುತ್ತಿದ್ದು, ಜಮೀನು ದೊರೆತ ತಕ್ಷಣ ಆಶ್ರಯ ಮನೆಗಳ ನಿರ್ಮಿಸಲಾಗುವುದು ಎಂದರು. ಈ ಹಿಂದೆ ತಾವು ಜಿಲ್ಲಾ ಸಚಿವರಾಗಿದ್ದಾಗ 14ರಿಂದ 15 ಸಾವಿರ ಆಶ್ರಯ ಮನೆಗಳ ನಿರ್ಮಿಸಿ ಅರ್ಹ ಬಡವರಿಗೆ ಹಂಚಿಕೆ ಮಾಡಲಾಗಿತ್ತು,
ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಮನೆಗಳ ಸಾಲವನ್ನು ಮನ್ನಾ ಮಾಡಿ ಇಂದು ಎಲ್ಲಾ ಆಶ್ರಯ ಮನೆಗಳಿಗೆ ಸ್ವಾಧೀನ ಮತ್ತು ಆಶ್ರಯ ಪತ್ರವಿತರಿಸಲಾಗಿದೆ ಎಂದು ತಿಳಿಸಿದರು. ಮೇಯರ್ ರೇಖಾ ನಾಗರಾಜ್, ಪಾಲಿಕೆ ಸದಸ್ಯರಾದ ಶಿವನಳ್ಳಿ ರಮೇಶ್, ಜೆ.ಎನ್. ಶ್ರೀನಿವಾಸ್, ಎಂ. ಹಾಲೇಶ್, ಶೈಲಾ ನಾಗರಾಜ್, ಶಿರಮಗೊಂಡನಹಳ್ಳಿ ರುದ್ರೇಶ್, ಆಶ್ರಯ ಸಮಿತಿ ಸದಸ್ಯರಾದ ಜರೀನಾ, ಕೆ.ಪಿ. ರವಿ ಧಣಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.