ಗ್ರಾಮೀಣ ಸಂಪರ್ಕ ರಸ್ತೆ ಅಭಿವೃದ್ಧಿ: 10 ಕೋ. ರೂ. ಮಂಜೂರು


Team Udayavani, Mar 15, 2017, 4:06 PM IST

1203tke3.jpg

ತೆಕ್ಕಟ್ಟೆ (ದಬ್ಬೆಕಟ್ಟೆ ): ಕುಂದಾಪುರ ತಾಲೂಕಿನ  ಜಿ.ಪಂ. ವ್ಯಾಪ್ತಿಯ  ತೆಕ್ಕಟ್ಟೆ -ದಬ್ಬೆಕಟ್ಟೆ  ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗೆ ಲೋಕೋಪಯೋಗಿ ಇಲಾಖೆಯ ಲೆಕ್ಕ ಶೀರ್ಷಿಕೆ  50-54 ರ ಅನುದಾನದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ವಿಶೇಷ ಮುತುವರ್ಜಿಯಿಂದ 10 ಕೋಟಿ ರೂ. ಮಂಜೂರಾಗಿದ್ದು ಸುಮಾರು 10 ಕಿ.ಮೀ. ತೆಕ್ಕಟ್ಟೆ -ದಬ್ಬೆಕಟ್ಟೆ  ಸಂಪರ್ಕ ರಸ್ತೆ ಕಾಮಗಾರಿಯೂ  ಯೋಜನೆ ಕಾರ್ಯರೂಪದ ಲ್ಲಿದ್ದು ವರ್ಷದ ಅಂತ್ಯದೊಳಗೆ  ಕಾಮಗಾರಿ ಆರಂಭಗೊಳ್ಳಲಿದೆ. 

ರಸ್ತೆಯು ಸಂಪೂರ್ಣ ಹದಗೆಟ್ಟಿರುವುದು  ಒಂದೆಡೆಯಾದರೆ  ಮತ್ತೂಂದೆಡೆಯಲ್ಲಿ  ಈ ಭಾಗದಲ್ಲಿ ಘನ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು  ಕೂಡ ತೀವ್ರವಾದ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣವಾದ ಬಗ್ಗೆ  ಉದಯವಾಣಿ ಜನಪರ ಕಾಳಜಿ ವಹಿಸಿ ಹಲವು ಬಾರಿ  ಸಮಸ್ಯೆಗಳ ಬಗ್ಗೆ  ಬೆಳಕು ಚೆಲ್ಲಿದ ಹಿನ್ನೆಲೆಯಲ್ಲಿ ಅಪಾಯದಲ್ಲಿ ಮಲ್ಯಾಡಿ  ಸಂಪರ್ಕ ಕಿರುಸೇತುವೆ:  ಕಳೆದ ಹಲವು ದಶಕಗಳಿಂದಲೂ ಗ್ರಾಮಸ್ಥರ ಕನಸಾಗಿ ಉಳಿದಿರುವ ಮಲ್ಯಾಡಿ ಕಿರುಸೇತುವೆ ಹಿಂದೆ ನಿರ್ಮಾಣದ ಸಂದರ್ಭದಲ್ಲಿ ಸೇತುವೆಯ ತಳಭಾಗದಲ್ಲಿ ಸಿಮೆಂಟ್‌ ಪೈಪ್‌ಗ್ಳನ್ನು  ಅಳವಡಿಸಿ ನಿರ್ಮಿಸಲಾಗಿತ್ತು. ಇದರೆ ತೆಕ್ಕಟ್ಟೆ – ದಬ್ಬೆಕಟ್ಟೆ ಈ ಪ್ರಮುಖ ಸಂಪರ್ಕ ರಸ್ತೆಯಲ್ಲಿ  ಘನವಾಹನಗಳ ಸಂಚಾರದಿಂದಾಗಿ  ಮಳೆಗಾಲದ ಸಂದರ್ಭ ಸೇತುವೆಯ ತಳಭಾಗದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮರಮಟ್ಟುಗಳು  ತೇಲಿ ಬಂದು  ಸೇತುವೆಯ ತಳ ಭಾಗದಲ್ಲಿ  ಸಂಗ್ರಹವಾಗುವುದರಿಂದ  ಈ ಕಿರು ಸೇತುವೆ ಅಪಾಯದ ಮಟ್ಟವನ್ನು ತಲುಪಿದೆ.

ಅವ್ಯವಸ್ಥಿತ ಒಳಚರಂಡಿ: ಸುಮಾರು 10 ಕಿ.ಮೀ. ಗ್ರಾಮೀಣ ಭಾಗಗಳ ಸಂಪರ್ಕ ಕಲ್ಪಿಸುವ ತೆಕ್ಕಟ್ಟೆ – ದಬ್ಬೆಕಟ್ಟೆ  ರಸ್ತೆಯೂ ಬರೀ ತೇಪೆ ಕಾರ್ಯದಲ್ಲಿಯೇ  ಕಳೆದ ಹಲವು ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದೆಯಾದರೂ ಕೂಡ ಈ ರಸ್ತೆಗೆ   ವ್ಯವಸ್ಥಿತವಾದ ಒಳ ಚರಂಡಿಗಳ ಕೊರತೆ ಎದ್ದು ಕಾಣುತ್ತಿರುವುದು ಮಾತ್ರ ವಾಸ್ತವ.

ಭಾರತ  ಸರಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ  17-8 -2007ರಿಂದ  24-4-2008 ರ ಅವಧಿಯಲ್ಲಿ  ತೆಕ್ಕಟ್ಟೆ-ದಬ್ಬೆಕಟ್ಟೆಯ ವರೆಗೆ ಒಟ್ಟು 2.14.96 ಕೋಟಿ ರೂ. ವೆಚ್ಚದ ಸುಮಾರು 10 ಕಿ.ಮೀ.  ರಸ್ತೆಯ ಕಾಮಗಾರಿ ಹಾಗೂ  ಐದು ವರ್ಷಗಳ  ಮೇಲ್ವಿಚಾರಣೆಯನ್ನು ಸ್ಥಳೀಯ ಗುತ್ತಿಗೆದಾರರು ನಿರ್ವಹಿಸುತ್ತಿದ್ದರು ಆದರೆ ಕಾಮಗಾರಿಗಳು ನಡೆದು ಕೆಲವೇ ವರ್ಷಗಳಲ್ಲಿ ರಸ್ತೆಯ ಮೂಲ ಸ್ವರೂಪಗಳನ್ನೇ ಕಳೆದುಕೊಂಡಿರುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿತ್ತು.

ಲೋಕೋಪಯೋಗಿ ಇಲಾಖೆಯಿಂದ ತೆಕ್ಕಟ್ಟೆ -ದಬ್ಬೆಕಟ್ಟೆ  ಜಿಲ್ಲಾ ಪಂಚಾಯತ್‌ ರಸ್ತೆಗೆ ಒನ್‌ ಟೈಮ್‌ ಇಂಪ್ರೂಮೆಂಟ್‌ನಲ್ಲಿ 10 ಕೋಟಿ ರೂ. ಮಂಜೂರಾಗಿದ್ದು  ತೆಕ್ಕಟ್ಟೆಯಿಂದ ಉಳೂ¤ರು ಗ್ರಾಮದ ವರೆಗೆ ಸುಮಾರು 4 ಕಿ.ಮೀ.  ಸಂಪೂರ್ಣ ಕಾಂಕ್ರೀಟ್‌ ರಸ್ತೆ  ಹಾಗೂ ಮಲ್ಯಾಡಿ ಕಿರು ಸೇತುವೆಗೆ  ನಿರ್ಮಾಣಕ್ಕೆ ಸುಮಾರು 60 ಲಕ್ಷ ರೂ.  ಸೇರಿದಂತೆ ಸುವ್ಯವಸ್ಥಿತವಾದ ರಸ್ತೆಗೆ ಯೋಜನೆ ರೂಪಿಸಲಾಗುತ್ತಿದೆ. ನಮ್ಮ ವಿಧಾನಸಭಾ ಕ್ಷೇತ್ರಕ್ಕೆ  ಸೆಂಟ್ರಲ್‌ ರೋಡ್‌ ಫಂಡ್‌ನ‌ಲ್ಲಿ (ಸಿಆರ್‌ಎಫ್‌) 28 ಕೋಟಿ ರೂ. ಮಂಜೂರಾಗಿದೆ, ಪಾಂಡೇಶ್ವರ  ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ.,  ಹಾಲಾಡಿ-ಕಕ್ಕುಂಜೆ ರೂ. 3 ಕೋಟಿ ಡಾಮರ್‌ರಸ್ತೆ, ಬಾರಕೂರು-ಮೈರ್‌ಕೊಮೆ 3 ಕೋಟಿ ರೂ. ರಸ್ತೆ, ಮುದ್ದುಮನೆ ಕಾಂಕ್ರೇಟ್‌ ರಸ್ತೆ ನಿರ್ಮಾಣಕ್ಕೆ 5 ಕೋಟಿ ರೂ., ಸೇತುವೆ ನಿರ್ಮಾಣಕ್ಕೆ 10 ಕೋಟಿ ರೂ. ಸೇರಿದಂತೆ ಹಲವು ಮೊಳಹಳ್ಳಿ ಹಾಗೂ ಮುಖ್ಯಮಂತ್ರಿ ಸಡಕ್‌ಯೋಜನೆಯಲ್ಲಿ ಮೊಳಹಳ್ಳಿ ಹಾಗೂ ಗೋಪಾಡಿ – ಚಾರುಕೊಟ್ಟಿಗೆ ಸಂಪರ್ಕ ರಸ್ತೆ ಸಂಪೂರ್ಣ ಕಾಂಕ್ರೀಟೀಕರಣವಾಗಲಿದೆ.
– ಹಾಲಾಡಿ ಶ್ರೀನಿವಾಸ ಶೆಟ್ಟಿ  ಶಾಸಕರು, ಕುಂದಾಪುರ ವಿಧಾನ ಸಭಾ ಕ್ಷೇತ್ರ

ಕುಂದಾಪುರ ತಾಲೂಕಿನ  ಬೀಜಾಡಿ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ  ತೆಕ್ಕಟ್ಟೆ -ದಬ್ಬೆಕಟ್ಟೆ  ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಳೆದ ಹಲವು ವರ್ಷಗಳಿಂದಲೂ ಅಭಿವೃದ್ಧಿ ಕಾಣದೆ ನನೆಗುದಿಯಲ್ಲಿರುವುದನ್ನು  ಕಂಡ  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ತನ್ನ ವಿಶೇಷ ಮುತುವರ್ಜಿಯಲ್ಲಿ  ಗ್ರಾಮೀಣ ರಸ್ತೆ  ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 10 ಕೋಟಿ ರೂ. ಮಂಜೂರು ಮಾಡಿರುವುದು ಸಂತಸ ತಂದಿದೆ.
– ಶ್ರೀಲತಾ ಸುರೇಶ್‌ ಶೆಟ್ಟಿ , ಸದಸ್ಯರು, ಬೀಜಾಡಿ ಜಿಲ್ಲಾ ಪಂಚಾಯತ್‌

ಟಾಪ್ ನ್ಯೂಸ್

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.