ಸರಕಾರಿ ಆಸ್ಪತ್ರೆಯ ವೈದ್ಯರನ್ನು ತರಾಟೆಗೆ: ಪ್ರತಿಭಟನೆಯ ಎಚ್ಚರಿಕೆ


Team Udayavani, Mar 15, 2017, 4:18 PM IST

1403kde13.jpg

ಕುಂದಾಪುರ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರು ಹಾಗೂ ಸಿಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ.  ಅಲ್ಲದೇ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು  ನೀಡುವ ಬಗ್ಗೆ ನಿಗಾ ವಹಿಸುತ್ತಿಲ್ಲ  ಎನ್ನುವ ದೂರಿನ ಹಿನ್ನೆಲೆಯಲ್ಲಿ  ಕರ್ನಾಟಕ ಕಾರ್ಮಿಕ ವೇದಿಕೆಯ ಸದಸ್ಯರು ಮಂಗಳವಾರ ಕುಂದಾಪುರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ಆಸ್ಪತ್ರೆಗೆ ಧಾವಿಸಿದ  ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ ನೇತೃತ್ವದ ವೇದಿಕೆಯ  ಸದಸ್ಯರು ಭೇಟಿ ನೀಡಿ ಅಲ್ಲಿ  ರೋಗಿಗಳಿಗೆ ನೀಡುತ್ತಿರುವ ಔಷಧೋಪಚಾರಗಳ ಬಗ್ಗೆ ಮಾಹಿತಿ ಪಡೆದು  ಕೆಲವು ರೋಗಿಗಳಿಂದ ಬಂದ ದೂರಿನ ವಿಚಾರವನ್ನು ತೆಗೆದುಕೊಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯ ಎಲ್ಲ  ವಿಭಾಗವನ್ನು ಭೇಟಿ ಮಾಡಿದ  ಸದಸ್ಯರು ಅಲ್ಲಿನ ಮೂಲ ಸೌಕರ್ಯದ ಬಗ್ಗೆ  ಮಾಹಿತಿಯನ್ನು ಪಡೆದರಲ್ಲದೇ ಕುಡಿಯುವ ನೀರಿನ ಯಂತ್ರವನ್ನು ಪರಿಶೀಲಿಸಿ ಅದು ಅಶುದ್ಧವಾಗಿರುವ ಬಗ್ಗೆ ಆಕ್ರೊಶ ವ್ಯಕ್ತಪಡಿಸಿದರಲ್ಲದೇ ಅದನ್ನು  ವೈದ್ಯಾಧಿಕಾರಿಗಳಿಗೆ ತೋರಿಸಿದರು. ಅಲ್ಲದೇ ಆಸ್ಪತ್ರೆಯ ಆವರಣದಲ್ಲಿ ಕೊಳಚೆ ನೀರು ಹರಿಯುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಆಸ್ಪತ್ರೆಗೆ ಆಗಮಿಸಿದ ಮುಖ್ಯ ವೈದ್ಯಾಧಿಕಾರಿ ಡಾ| ಉದಯ ಶಂಕರ್‌ ಅವರಲ್ಲಿ  ಆಸ್ಪತ್ರೆಯಲ್ಲಿ  ರೋಗಿಗಳಿಗೆ ಸ್ಪಂದಿಸದ ಮತ್ತು  ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ಕೇಳಿದ  ವೇದಿಕೆಯ ಅಧ್ಯಕ್ಷ  ರವಿ ಶೆಟ್ಟಿ ಅವರು ಸರಕಾರಿ ಆಸ್ಪತ್ರೆಗೆ ಬರುವ ರೋಗಿಗಳು  ಕಡು ಬಡವರಾಗಿದ್ದು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆಯ ಸ್ಪಂದನ ನೀಡುವ ಬದಲು ಅವರನ್ನು ಖಾಸಗಿ ಆಸ್ಪತ್ರೆಯತ್ತ ಮುಖ ಮಾಡಿಸುವುದು  ಎಷ್ಟು ಸಮಂಜಸ ಎಂದರು. 

ಅಲ್ಲದೇ  ಈ ಆಸ್ಪತ್ರೆಯಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ದೊರಕಬೇಕು. ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಯವರಲ್ಲಿ ಈಗಾಗಲೇ ಮನವಿ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರೊಂದಿಗೆ ಮಾತಿನ ಚಕಮಕಿ: ತತ್‌ಕ್ಷಣ  ಆಸ್ಪತ್ರೆಗೆ ಆಗಮಿಸಿದ  ವೃತ್ತ ನಿರೀಕ್ಷಕ ಮಂಜಪ್ಪ ಹಾಗೂ ಠಾಣಾಧಿಕಾರಿ ನಾಸಿರ್‌ ಹುಸೇನ್‌  ಅವರೊಂದಿಗೆ ಮಾತಿನ ಚಕಮಕಿ ನಡೆಸಿದ ವೇದಿಕೆಯ ಸದಸ್ಯರು  ಇಲ್ಲಿನ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ  ತಿಳಿಸಿದರು.
 
ಇದೇ ಸಮಯದಲ್ಲಿ   ಸ್ಪಂದನೆ ನೀಡಿ ಮಾಹಿತಿ ನೀಡಬೇಕಾದ  ವೈದ್ಯರೊಬ್ಬರು ನಿರ್ಲಕ್ಷ ತೋರಿ ಅಸಭ್ಯವಾಗಿ ವರ್ತಿಸಿದ್ದಾರೆ ಅವರು  ತತ್‌ಕ್ಷಣ ಕ್ಷಮೆ ಕೇಳಬೇಕು ಎಂದು ಧರಣಿ ಕೂರಿದ ವೇದಿಕೆಯ ಸದಸ್ಯರು ವೈದ್ಯರ ವಿರುದ್ಧ ಘೋಷಣೆಯನ್ನು ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ  ಪೊಲೀಸ್‌ ಅಧಿಕಾರಿಗಳು ಪ್ರತಿಭಟನಕಾರರಿಗೆ ಎಚ್ಚರಿಕೆಯನ್ನು  ನೀಡಿದರಲ್ಲದೇ  ಎಲ್ಲರನ್ನು ಚದುರಿಸಿ  ಪರಿಸ್ಥಿತಿಯನ್ನು ಶಾಂತಗೊಳಿಸಿದರು.

ಅವ್ಯವಸ್ಥೆ ಸರಿಯಾಗಲಿ
ಕೊನೆಯಲ್ಲಿ ಮಾತನಾಡಿದ  ಕರ್ನಾಟಕ ಕಾರ್ಮಿಕ ವೇದಿಕೆ ಅಧ್ಯಕ್ಷ  ರವಿ ಶೆಟ್ಟಿ  ಅವರು  ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳು ಸರಿ ಯಾಗಬೇಕು. ಆಸ್ಪತ್ರೆಯಲ್ಲಿ ಲಭ್ಯರಿರುವ ವೈದ್ಯರು, ಇಲ್ಲಿರುವ ಸೌಲಭ್ಯಗಳು, ಸ್ಲಾÂನಿಂಗ್‌ ಹಾಗೂ ಇತರ ವ್ಯವಸ್ಥೆಗಳ ಬಗ್ಗೆ  ರೋಗಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಇಲ್ಲಿನ ಕುಡಿಯುವ ನೀರು, ಸ್ವತ್ಛತೆಯ  ಬಗ್ಗೆ  ಹೆಚ್ಚಿನ ನಿಗಾ ವಹಿಸಬೇಕು. ಈ ಎಲ್ಲ ವ್ಯವಸ್ಥೆಗಳು ಒಂದು ವಾರದಲ್ಲಿ  ಆಗದೇ ಹೋದಲ್ಲಿ  ಕರ್ನಾಟಕ ಕಾರ್ಮಿಕ ವೇದಿಕೆಯೊಂದಿಗೆ ಜಿಲ್ಲೆಯ ಇತರ ಸಂಘಟನೆಯೊಂದಿಗೆ ಕೂಡಿಕೊಂಡು  ಉಗ್ರ ಹೋರಾಟ ಮಾಡಲಾಗುವುದು  ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.