ಕುಂಭಾಶಿ: ಆನೆಗುಡ್ಡೆ  ಶ್ರೀ ವಿನಾಯಕನಿಗೆ 6 ಸಾವಿರ ಕಡುಬು ನೈವೇದ್ಯ


Team Udayavani, Mar 16, 2017, 2:44 PM IST

1503tke1-3.jpg

ತೆಕ್ಕಟ್ಟೆ (ಆನೆಗುಡ್ಡೆ): ಪುರಾಣ ಪ್ರಸಿದ್ಧ  ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ. 16ರಂದು ನಡೆಯುವ ಸಂಕಷ್ಟ ಹರ ಚತುರ್ಥಿಯ ಹಿನ್ನೆಲೆಯಲ್ಲಿ   ವಿಶೇಷವಾಗಿ ಶ್ರೀದೇವರಿಗೆ ಸುಮಾರು 16 ಸಾವಿರ ಕಡಬು (ಮೂಡೆ) ನೈವೇದ್ಯಗೊಳ್ಳಲಿದ್ದು  ಅನಂತರ ಭಕ್ತರಿಗೆ ಕಡುಬು (ಮೂಡೆ) ಪ್ರಸಾದ ವಿತರಣಾ ಕಾರ್ಯಕ್ಕಾಗಿ  ದೇಗುಲದಲ್ಲಿ ಸಕಲ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

16 ಸಾವಿರ ಕಡುಬು (ಮೂಡೆ) ತಯಾರಿಯ ಹಿಂದೆ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಸಂಕಷ್ಟ ಹರ ಚತುರ್ಥಿಯ ಹಿನ್ನೆಲೆಯಲ್ಲಿ ಶ್ರೀದೇವರಿಗೆ ಸುಮಾರು 16 ಸಾವಿರ ಕಡುಬು (ಮೂಡೆ)  ತಯಾರಿಯ ಪೂರ್ವ ಸಿದ್ಧತೆಗಾಗಿ ಸುಮಾರು ಒಂದು ವಾರದಿಂದಲೂ ಹಾಲಾಡಿ, ಹೊಸಂಗಡಿ ಮುಂತಾದ ಗ್ರಾಮೀಣ ಭಾಗದಿಂದ  ಓಲೆಗಳನ್ನು (ಕುಂದಾಪ್ರ ಕನ್ನಡದಲ್ಲಿ ಮುಂಡ್ಕನೊಲಿ) ತಂದು  25 ಕ್ಕೂ ಹೆಚ್ಚು  ಗ್ರಾಮೀಣ ಮಹಿಳೆಯರು ಕಡುಬಿನ ಓಲೆ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ ಹಾಗೂ ಸುಮಾರು 500 ಕೆ.ಜಿ. ಅಕ್ಕಿ ಹಾಗೂ ಉದ್ದಿನ ಬೇಳೆ  ಪ್ರಮಾಣಕ್ಕನುಸಾರವಾಗಿ ಐದು ಅರೆಯುವ ಯಂತ್ರಗಳನ್ನು ಬಳಸಿಕೊಂಡು 25 ಕ್ಕೂ ಅಧಿಕ ಮಂದಿ ನುರಿತ ಪಾಕಶಾಸ್ತ್ರಜ್ಞರು ಮಾ. 15ರ ರಾತ್ರಿಯಿಂದಲೇ ನಿರಂತರವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.

ವಿಶೇಷವಾಗಿ ಸಂಕಷ್ಟ ಹರ ಚತುರ್ಥಿಯಂದು ನಂಬಿದ  ಸಹಸ್ರಾರು ಭಕ್ತರು ಆನೆಗುಡ್ಡೆ ಶ್ರೀ ವಿನಾಯಕ ದೇವರ ದರ್ಶನ ಪಡೆದು ಸೇವೆಯನ್ನು ಮಾಡಿಸಿಕೊಂಡು ಇಷ್ಟಾರ್ಥವನ್ನು ಪಡೆದು ಕೃತಾರ್ಥರಾಗುತ್ತಾರೆ. ಅಂಗಾರಕ ಚತುರ್ಥಿಯ ದಿನವು ಅತ್ಯಂತ ಮಂಗಳಕರವಾದುದು.
– ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿಗಳು
 
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಾ. 16ರ‌ಂದು ನಡೆಯುವ ಸಂಕಷ್ಟ ಹರ ಚತುರ್ಥಿಯ ಹಿನ್ನೆಲೆಯಲ್ಲಿ  ದೇಗುಲದ ಇತಿಹಾಸದಲ್ಲಿಯೇ ಅತೀ ಹೆಚ್ಚು ಪ್ರಮಾಣದಲ್ಲಿ  ದೇವರ ಪರಮ ಭಕ್ತರು ಹಾಗೂ ದೇಗುಲದ ಅರ್ಚಕ ಮನೆತನದವರಾದ ಕೃಷ್ಣಾನಂದ ಉಪಾಧ್ಯಾಯರು ಸುಮಾರು 16 ಸಾವಿರ ಕಡುಬು (ಮೂಡೆ)  ಶ್ರೀದೇವರಿಗೆ ನೈವೇದ್ಯ ನೀಡುತ್ತೇನೆ ಎಂದು ಸಂಕಲ್ಪ ಹೊಂದಿದ್ದಾರೆ.
– ಕುಂಭಾಶಿ ರವಿರಾಜ್‌ ಉಪಾಧ್ಯಾಯ, ಆನುವಂಶಿಕ ಪರ್ಯಾಯ ಅರ್ಚಕರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.