BMW ಕಾರಿಗೆ ಬೆಂಕಿ :ರೇಸರ್ ಅಶ್ವಿನ್,ಪತ್ನಿ ಸಜೀವ ದಹನ
Team Udayavani, Mar 18, 2017, 10:18 AM IST
ಚೆನ್ನೈ: ಚಲಿಸುತ್ತಿರುವಾಗಲೇ ಬಿಎಂಡಬ್ಲ್ಯೂ ಕಾರು ಹೊತ್ತಿ ಉರಿದ ಪರಿಣಾಮ ರೇಸರ್ ಅಶ್ವಿನ್ ಸುಂದರ್ ಮತ್ತು ಪತ್ನಿ ನಿವೇದಿತಾ ಸಜೀವವಾಗಿ ದಹನಗೊಂಡು ದುರ್ಮರಣಕ್ಕೀಡಾಗಿರುವ ಭೀಕರ ದುರಂತ ಶನಿವಾರ ಬೆಳಗ್ಗೆ ನಡೆದಿದೆ.
ಬೆಳಗಿನ ಜಾವ 3.30 ರ ವೇಳಗೆ ಪಟ್ಟಿನಾಂಪಕ್ಕಂ ಎಂಬಲ್ಲಿ ಅವಘಡ ನಡೆದಿದ್ದು ,ಇಬ್ಬರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಅಶ್ವಿನ್ ಮತ್ತು ಪತ್ನಿಗೆ ಹೊರಬರಲು ಸಾಧ್ಯವಾಗದೆ ಸಜೀವವಾಗಿ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ.
ದುಬಾರಿ ಕಾರಿಗೆ ಬೆಂಕಿ ಹೊತ್ತಿಕೊಂಡದ್ದನ್ನು ಗಮನಿಸಿದರೂ ಯಾರೊಬ್ಬರಿಂದಲೂ ಬೆಂಕಿಯನ್ನು ನಿಯಂತ್ರಿಸುವುದು ಅಸಾಧ್ಯವಾಗಿತ್ತು ಎಂದು ವರದಿಯಾಗಿದೆ.ಕಾರು ಸಂಪೂರ್ಣವಾಗಿ ಭಸ್ಮವಾಗಿದೆ.
ಜನರು ಬೆಳಗಿನ ಜಾವ ಕಾರು ಹೊತ್ತಿ ಉರಿಯುತ್ತಿರುವುದನ್ನು ಚಿತ್ರೀಕರಿಸುವುದರಲ್ಲಿ ನಿರತರಾಗಿದ್ದರು ಎಂದು ವರದಿಯಾಗಿದೆ.
32 ರ ಹರೆಯದ ಅಶ್ವಿನ್ ಅವರು ಅಪ್ರತಿಮ ಕಾರ್ ರೇಸರ್ ಆಗಿದ್ದು ,2003 ರಲ್ಲಿ ಎಂಆರ್ಎಫ್ ಫಾರ್ಮುಲಾ ಮಾಂಡಿನಲ್ ನ್ಯಾಷನ್ಲ್ ಚಾಂಪಿಯನ್ ಆಗಿದ್ದರು. ಎಫ್4 ನಲ್ಲೂ ನ್ಯಾಷನಲ್ ಚಾಂಪಿಯನ್ ಆಗಿ ಅಶ್ವಿನ್ ಹೊರ ಹೊಮ್ಮಿದ್ದರು.
ಅಶ್ವಿನ್ ದಂಪತಿಗಳ ದುರ್ಮರಣಕ್ಕೆ ಅಪಾರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.