ಕೆಸಿಡಿಸಿ ಪರ-ವಿರುದ್ಧ ಪ್ರತಿಭಟನೆ


Team Udayavani, Mar 21, 2017, 12:52 PM IST

protest.jpg

ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಕೆಸಿಡಿಸಿ ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಗಿತಗೊಳಿಸುವ ವಿಚಾರದಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕೆಸಿಡಿಸಿ ತ್ಯಾಜ್ಯ ಸಂಸ್ಕರಣೆ ಘಟಕ ಸ್ಥಗಿತಗೊಳಿಸುವಂತೆ ಸಂಸ್ಕರಣೆ ಘಟಕ ವಿರೋಧಿ ಸಂಘಟನೆಗಳ ಒಕ್ಕೂಟ ಭಾನುವಾರ ಅಹೋರಾತ್ರಿ ಧರಣಿ ನಡೆಸಿದರೆ ಮತ್ತೂಂದು ಗುಂಪು ಘಟಕ ಸ್ಥಳಾಂತರ ಬೇಡ ಎಂದು ಸೋಮವಾರ ಧರಣಿ ನಡೆಸಿತು.  

ಈ ಹಿನ್ನೆಲೆಯಲ್ಲಿ ಪಾಲಿಕೆಯ ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತ ಸಫ್ರಾಜ್‌ಖಾನ್‌  ಸ್ಥಳಕ್ಕೆ ಭೇಟಿ ನೀಡಿ ಎರಡೂ ಗುಂಪುಗಳ ಜತೆ ಮಾತುಕತೆ ನಡೆಸಿದರು. ಘಟಕವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಘಟಕ ಸ್ಥಗಿತಗೊಳಿಸದೆ ಸಮಸ್ಯೆ ಪರಿಹರಿಸಲು ಪರ್ಯಾಯ ಕ್ರಮಗಳಿಗೆ ಮುಂದಾಗಲು ಬಿಬಿಎಂಪಿ ಆಯುಕ್ತರು ಮತ್ತು ಸಚಿವರೊಂದಿಗೆ ಸಭೆ ನಡೆಸುವ ಭರವಸೆ ನೀಡಿದರು.

ಜಂಟಿ ಆಯುಕ್ತರ ಭರವಸೆ ಹಿನ್ನೆಲೆಯಲ್ಲಿ ಅಸೋಸಿಯೇಷನ್‌ ಸದಸ್ಯರು ಸೋಮವಾರ ಸಂಜೆ 5 ಗಂಟೆಗೆ ಅಹೋರಾತ್ರಿ ಪ್ರತಿಭಟನೆ ಹಿಂಪಡೆದರು. ಈ ವೇಳೆ ಮಾತನಾಡಿದ ಸಂಸ್ಕರಣೆ ಘಟಕ ವಿರೋಧಿ ಸಂಘಟನೆಗಳ ಒಕ್ಕೂಟದ ಸದಸ್ಯೆ ಕವಿತಾ ರೆಡ್ಡಿ, ಕೆಸಿಡಿಸಿ ಘಟಕವನ್ನು ಕೂಡಲೇ ಸ್ಥಗಿತಗೊಳಿಸಲು ಸಾಧ್ಯವಿಲ್ಲವೆಂದು ಹೇಳಿದ್ದು, ಘಟಕಕ್ಕೆ ತ್ಯಾಜ್ಯ ವಿಲೇವಾರಿ ಮಾಡುವ ಕಾರ್ಯವನ್ನು ನಿಲ್ಲಿಸುವುಂತೆ ತಿಳಿಸಲಾಗಿದೆ.

ಜತೆಗೆ ಸೋಮಸಂದ್ರ ಕೆರೆಯನ್ನು ಸರ್ವೇ ಮಾಡಿಸಿ ಅಭಿವೃದ್ಧಿ ಮಾಡಿಕೊಡುವಂತೆ ತಿಳಿಸಿದ್ದು, ಕೆರೆ ಅಭಿವೃದ್ಧಿಗೆ ಒಪ್ಪಿಕೊಂಡಿದ್ದಾರೆ. ಬಿಬಿಎಂಪಿ ಆಯುಕ್ತರು ಹಾಗೂ ಸಚಿವರೊಂದಿಗೆ ಸಭೆ ನಡೆಸುವುದಾಗಿ ಜಂಟಿ ಆಯುಕ್ತರು ಭರವಸೆ ನೀಡಿದ್ದು, ಸಭೆಯಲ್ಲಿ ಧನಾತ್ಮಕ ನಿರ್ಧಾರ ಬರದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು.  ಘಟಕ ಸ್ಥಳಾಂತರ ಬೇಡ ಎಂದು ಒತ್ತಾಯಿಸಿದ ನಾಗರಾಜ್‌, ಕೆಸಿಡಿಸಿ ಘಟಕಕ್ಕೆ ನಿತ್ಯ 500 ಟನ್‌ ತ್ಯಾಜ್ಯ ಸಂಸ್ಕರಣೆ ಮಾಡುವ ಸಾಮರ್ಥ್ಯ ಹೊಂದಿದೆ.

ಆದರೆ, ಘಟಕದಲ್ಲಿ ಸದ್ಯ 100 ಟನ್‌ ತ್ಯಾಜ್ಯ ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದಿಯಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿಯೂ ಈ ಪ್ರದೇಶದ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಮೇಯರ್‌ ಭವಸೆ ನೀಡಿದ್ದಾರೆ. ಹೀಗಾಗಿ ಘಟಕ ಸ್ಥಗಿತಗೊಳಿಸಬಾರದು ಎಂದು ತಿಳಿಸಿದರು.

ಗುರುವಾರ ಸಭೆ: ಕೆಸಿಡಿಸಿ ಘಟಕದಿಂದ ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದ ನಾಗರಿಕರ ಜತೆ ಬಿಬಿಎಂಪಿ ಆಯುಕ್ತರು ಹಾಗೂ ಸಚಿವರೊಂದಿಗೆ ಗುರುವಾರ (ಮಾ.23) ಸಭೆ ಏರ್ಪಡಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಆಯಾ ವಲಯದಲ್ಲಿ ವಿಲೇವಾರಿ ಮಾಡಲು ಘಟಕಗಳ ಸ್ಥಾಪನೆಗೆ ಪಾಲಿಕೆ ಮುಂದಾಗಬೇಕು. ಕೆಸಿಡಿಸಿ ಘಟಕ 30 ವರ್ಷಗಳಿಗೂ ಹೆಚ್ಚು ಕಾಲದಿಂದ ಕೆಲಸ ಮಾಡುತ್ತಿದೆ. ಬೊಮ್ಮನಹಳ್ಳಿ ವಲಯದ ತ್ಯಾಜ್ಯವನ್ನು ಕೆಸಿಡಿಸಿಯಲ್ಲಿ ಸಂಸ್ಕರಣೆ ಮಾಡಲಿ, ಉಳಿದಂತೆ ನಗರದ ತ್ಯಾಜ್ಯವನ್ನು ಘಟಕಕ್ಕೆ ಹಾಕುವುದು ಬೇಡ. 
-ಮುನಿರೆಡ್ಡಿ, ಸ್ಥಳೀಯ ನಿವಾಸಿ

ಘಟಕದ ಸುತ್ತಲ ಪ್ರದೇಶವನ್ನು ಪರಿಶೀಲಿಸಿದ್ದು, ಎಲ್ಲೂ ದುರ್ವಾಸನೆಯಿಲ್ಲ. ಯಾವುದೇ ಕಾರಣಕ್ಕೂ ಘಟಕ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಘಟಕಕ್ಕೆ ಹಾಕಲಾಗುತ್ತಿದ್ದ ತ್ಯಾಜ್ಯವನ್ನು ಈಗಾಗಲೇ ಕಡಿಮೆ ಮಾಡಲಾಗಿದೆ. ಪ್ರಸ್ತುತ 100ರಿಂದ -120 ಟನ್‌ ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ನಾಗರಿಕರ ತೊಂದರೆಗೆ ಕಾರಣವೇನು ಎಂದು ಪರಿಶೀಲಿಸುತ್ತೇವೆ.
-ಸಫ್ರಾಜ್‌ಖಾನ್‌, ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತ

ಟಾಪ್ ನ್ಯೂಸ್

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.