ರಾಜಧಾನಿಯಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹ


Team Udayavani, Mar 21, 2017, 12:57 PM IST

tax home.jpg

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಗುರಿ ಮೀರಿ ಸಾಧನೆ ಮಾಡಿದ್ದು ಬೆಂಗಳೂರಿನಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಆದಾಯ ತೆರಿಗೆ ಇಲಾಖೆಯ ಗೋವಾ-ಕರ್ನಾಟಕ ವಿಭಾಗ ಪ್ರಸಕ್ತ ವರ್ಷದಲ್ಲಿ 85 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಿತ್ತು. ಆದರೆ, ಮಾರ್ಚ್‌ 16ರ ವೇಳೆಗೆ 86,229 ಕೋಟಿ ತೆರಿಗೆ ಸಂಗ್ರಹವಾಗಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಾಯ ತೆರಿಗೆ ಗೋವಾ-ಕರ್ನಾಟಕ ವಿಭಾಗದ ಆಯುಕ್ತರಾದ ನೂತನ್‌ ಒಡೆಯರ್‌, ಇದೇ ಮೊದಲ ಬಾರಿಗೆ ಗುರಿ ಮುಟ್ಟುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. 2016-17 ನೇ ಸಾಲಿನಲ್ಲಿ 85 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿತ್ತು. ಆದರೆ, ಆರ್ಥಿಕ ವರ್ಷ ಮುಗಿಯುವ ಮೊದಲೇ ಗುರಿ ತಲುಪಿದ್ದು, ಮಾರ್ಚ್‌ 16ರ ವೇಳೆಗೆ 86,229 ಕೋಟಿ ತೆರಿಗೆ ಸಂಗ್ರಹವಾಗಿದೆ.

ಬೆಂಗಳೂರಿನಲ್ಲಿ ಅತಿಹೆಚ್ಚು ತೆರಿಗೆ ಸಂಗ್ರಹವಾಗಿದ್ದು, ಶೇ.22.48 ರಷ್ಟು ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದರು. ರಾಜ್ಯದ ತೆರಿಗೆ ಸಂಗ್ರಹ ಬೆಳವಣಿಗೆ ದುಪ್ಪಟ್ಟಾಗಿದ್ದು, ಮುಂಬೈ ಮತ್ತು ದೆಹಲಿಯ ನಂತರದ ಸ್ಥಾನ ಬೆಂಗಳೂರಿಗೆ ಲಭಿಸಿದೆ ಎಂದರು. ಈ ಆರ್ಥಿಕ ವರ್ಷದಲ್ಲಿ ಸ್ವಯಂ ಘೋಷಿತವಾಗಿ ಆದಾಯ ಘೋಷಿಸಿಕೊಂಡ ಮೊತ್ತ 4,828 ಕೋಟಿ ರೂ.ಗಳಾಗಿದ್ದು, ಐಟಿ ದಾಳಿ ವೇಳೆ 132 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಆಯುಕ್ತ ರವಿಚಂದ್ರನ್‌ ಮಾತನಾಡಿ, ಗರಿಷ್ಠ  ಮುಖಬೆಲೆಯ 500 ಮತ್ತು 1 ಸಾವಿರ ನೋಟುಗಳು ನಿಷೇಧದ ನಂತರ ಹಣಕಾಸು ವಹಿವಾಟಿನ ಮಾಹಿತಿ ಸಮರ್ಪಕವಾಗಿ ನೀಡದ 307 ಕೋ ಆಪರೇಟೀವ್‌ ಬ್ಯಾಂಕ್‌ಗಳು ಮತ್ತು ಏಳು ರಾಷ್ಟ್ರೀಕೃತ ಬ್ಯಾಂಕುಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ವೇಳೆ 9 ಸಾವಿರ ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದ್ದು, ಶಿವಮೊಗ್ಗದ ಎರಡು ಮತ್ತು ಮಂಗಳೂರಿನ ಒಂದು ಸಹಕಾರಿ ಬ್ಯಾಂಕುಗಳಿಂದ 900 ಕೋಟಿ ಹಣ ವಶಪಡಿಸಿಕೊಳ್ಳಲಾಗಿದೆ ಎಂದರು.

ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಮಹಾನಿರ್ದೇಶಕ ಬಿ.ಆರ್‌. ಬಾಲಕೃಷ್ಣನ್‌ ಮಾತನಾಡಿ, ಕರ್ನಾಟಕ-ಗೋವಾ ವಲಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಅಘೋಷಿತ ಆದಾಯವನ್ನು ಹೆಚ್ಚಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ 2135 ಕೋಟಿ ವಶಪಡಿಸಿಕೊಂಡಿದ್ದರೆ, ಪ್ರಸಕ್ತ ಸಾಲಿನಲ್ಲಿ 4828 ಕೋಟಿ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ 73 ಗ್ರೂಪ್‌ಗ್ಳ ಮೇಲೆ ದಾಳಿ ನಡೆಸಲಾಗಿದ್ದು, 328 ಪರಿಶೀಲನಾ ವಾರೆಂಟ್‌ ರವಾನಿಸಲಾಗಿದೆ. ಚಿನ್ನದ ವ್ಯಾಪಾರಿಗಳು, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಸೇರಿದಂತೆ ಇತರೆ ಉದ್ಯಮಿಗಳೇ ಇದರಲ್ಲಿ ಹೆಚ್ಚಾಗಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Kabbinale

Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌ ಗುಂಡೂರಾವ್‌

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

Jamadhar

Vachana Darshan: ಆರ್‌ಎಸ್‌ಎಸ್‌ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kabbinale

Dense Forest: ಹೆಬ್ರಿಯ ಕಬ್ಬಿನಾಲೆ, ತಿಂಗಳೆ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

1-weweqe

Ayodhya ಸಂಸದನ ಪುತ್ರನ ವಿರುದ್ಧ ಎಫ್ಐಆರ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌

RTI ಕಾರ್ಯಕರ್ತರ ರೀತಿ ರಾಜ್ಯಪಾಲರ ಕೆಲಸ: ಸಚಿವ ದಿನೇಶ್‌ ಗುಂಡೂರಾವ್‌

1-eewqeq-eqeeqe

Video; ಅಲ್‌ ಜಜೀರಾ ಬ್ಯೂರೋ ಮುಚ್ಚಿಸಿದ ಇಸ್ರೇಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.