ಎಸ್‌ಡಿಪಿ ಯೋಜನೆ ಮಾಹಿತಿಯೇ ಗೊತ್ತಿಲ್ಲ!


Team Udayavani, Mar 24, 2017, 1:00 PM IST

dvg3.jpg

ದಾವಣಗೆರೆ: ಡಾ|ಡಿ.ಎಂ.ನಂಜುಂಡಪ್ಪ ವರದಿ ಆಧರಿಸಿ, ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ರಚಿಸಲಾದ ವಿಶೇಷ ಅಭಿವೃದ್ಧಿ ಕಾರ್ಯಕ್ರಮ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ! ಗುರುವಾರ ಜಿಲ್ಲಾ ಪಂಚಾಯತ್‌ ಮಿನಿ ಸಭಾಂಗಣದಲ್ಲಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ನಡೆದ ಎಸ್‌ಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸತ್ಯ ಬೆಳಕಿಗೆ ಬಂತು. 

ಎಸ್‌ಡಿಪಿ ಅನುದಾನ ಕುರಿತು ಮಾಹಿತಿ ಕೇಳಿದರೆ, ಇಡೀ ಇಲಾಖೆಯ ಮಾಹಿತಿ ಇಲ್ಲವೇ ಟಿಎಸ್‌ಪಿ, ಎಸ್‌ಸಿಪಿ ಯೋಜನೆಯ ಮಾಹಿತಿ ನೀಡಿದರು. ಅಷ್ಟೇ ಅಲ್ಲ, ಕೆಲ ಇಲಾಖೆ ಅಧಿಕಾರಿಗಳು ಯೋಜನೆಯ ಕಟ್ಟುಪಾಡುಗಳನ್ನು ಮೀರಿ ಮನಬಂದ ಹಾಗೆ ಖರ್ಚು ಮಾಡಿದ್ದ ಲೆಕ್ಕ ಬಯಲಾಯ್ತು. ನಂಜುಂಡಪ್ಪ ವರದಿ ಪ್ರಕಾರ ಜಿಲ್ಲೆಯ ಚನ್ನಗಿರಿ, ಹರಪನಹಳ್ಳಿ ಅತ್ಯಂತ ಹಿಂದುಳಿದ, ಹೊನ್ನಾಳಿ, ಜಗಳೂರು ಅತೀ ಹಿಂದುಳಿದ ತಾಲ್ಲೂಕುಗಳಾಗಿ ಗುರುತಿಸಲ್ಪಟ್ಟಿವೆ.

ಇದಕ್ಕಾಗಿ ವಿವಿಧ ಇಲಾಖೆಗಳ ಮೂಲಕ ವಿಶೇಷ ಅನುದಾನ ನೀಡಿ, ಪ್ರದೇಶ, ಜನರ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ. ಆದರೆ, ಸಭೆಯಲ್ಲಿ ಪಾಲ್ಗೊಂಡ ಈ ಕೆಲ ಅಧಿಕಾರಿಗಳಿಗೆ ಈ ಕುರಿತ ಕನಿಷ್ಠ ಮಾಹಿತಿ ಇದ್ದಂತೆ ಕಾಣಲಿಲ್ಲ. ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಜಂಟಿ ನಿರ್ದೇಶಕ ಸದಾಶಿವ ಯೋಜನೆ ಕುರಿತು ಯಾವುದೇ ಮಾಹಿತಿ ಇಲ್ಲದೇ ಇರುವುದನ್ನು ಬಹಿರಂಗವಾಗಿ ತೋರಿಸಿಕೊಂಡರು.

ಅವರು ಈ ಮೊದಲು ಜಿಪಂ ಅಧಿಕಾರಿಗಳಿಗೆ ಕೊಟ್ಟಿದ್ದ ಮಾಹಿತಿ, ಸಭೆಗೆ ಕೊಟ್ಟ ಮಾಹಿತಿ ಸಂಪೂರ್ಣ ಭಿನ್ನವಾಗಿತ್ತು. ಇದರಿಂದ ಕೊಂಚ ಕೋಪಗೊಂಡ ಸಿಇಒ ಎಸ್‌. ಅಶ್ವತಿ, ನೀವು ಸಭೆಗೆ ಕೊಡುತ್ತಿರುವ ಮಾಹಿತಿಯೇ ಬೇರೆ ಇದೆ. ವಾಸ್ತವದ ಮಾಹಿತಿಯೇ ಬೇರೆ ಇದೆ. ಇದೇನಿದು? ಎಂದು ತರಾಟೆಗೆ ತೆಗೆದುಕೊಂಡರು. ಇದೇ ರೀತಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಮ್ಮ ಇಲಾಖೆಯ ವರದಿ ಓದಲಾಗದೆ ಪರದಾಡಿದರು.

ಕೊನೆಗೆ ಅಶ್ವತಿ, ಇದೇನಿದು? ನೀವೇ ಕೊಟ್ಟ ವರದಿ ಓದಲು ನಿಮಗೆ ಬಾರದೇ ಇದ್ದರೆ ಹೇಗೆ? ನೀವೆಲ್ಲಾ ಸಭೆಗೆ ಬರುವಾಗ ಸಮರ್ಪಕ ಮಾಹಿತಿ ಇಟ್ಟುಕೊಂಡು ಬರಬೇಕು ಎಂಬುದು ಗೊತ್ತಾಗುವುದಿಲ್ಲವೇ? ಎಂದು ಪ್ರಶ್ನಿಸಿದರು. ಆಗ ಅಧಿಕಾರಿ, ನಾನು 2 ದಿನಗಳ ಹಿಂದಷ್ಟೇ ಅಧಿಕಾರ ಸೀಕರಿಸಿದ್ದೇನೆ. ಪೂರ್ಣ ಮಾಹಿತಿ ಇಲ್ಲ ಎಂದಾಗ, ಜಿಪಂ ಮುಖ್ಯ ಯೋಜನಾಧಿಕಾರಿ ಪಿ. ಬಸವನಗೌಡ, ಮಾಹಿತಿ ಇಲ್ಲ ಎಂದು ಹೇಳಬಾರದು.

ಮಾಹಿತಿ ಪಡೆದುಕೊಂಡು ಬರಬೇಕು. ನಿಮ್ಮ ನಿರ್ದೇಶಕರಿಗೆ ಮಾಹಿತಿ ಕೊಡಲು ಹೇಳಿ ಎಂದು ತಿಳಿಸಿದರು. ಬೆಸ್ಕಾಂನ ಪ್ರಗತಿ ಪರಿಶೀಲನೆ ವೇಳೆ ಸಹ ಇಂತಹುದ್ದೇ ಸನ್ನಿವೇಶ ನಡೆಯಿತು. ಸಹಾಯಕ ಕಾರ್ಯಪಾಲಕ ಅಭಿಯಂತರ ಸುಭಾಷ್‌ ಚಂದ್ರ ಇಲಾಖೆಯ ಪ್ರಗತಿ ಕುರಿತು ತಿಳಿಸುವಾಗ, ನಾವು ಅನುದಾನವನ್ನು ಎಲ್ಲಾ ತಾಲೂಕುಗಳಿಗೆ ಬಳಸಿಕೊಂಡಿದ್ದೇವೆ. ಎಲ್ಲಿ ಅಗ್ಯವಿದೆಯೋ ಅಲ್ಲಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದರು. 

ಮಧ್ಯ ಪ್ರವೇಶಿಸಿದ ಬಸವನಗೌಡ, ನೀವು ಆ ರೀತಿ ಎಲ್ಲಾ ತಾಲೂಕಿಗೆ ಈ ಅನುದಾನ ಬಳಕೆ ಮಾಡಿಕೊಳ್ಳಲು ಬರುವುದಿಲ್ಲ. ಕೇವಲ ವರದಿಯಲ್ಲಿ ಹೆಸರಿಸಲಾಗಿರುವ ತಾಲೂಕುಗಳಲ್ಲಿ ಮಾತ್ರ ಬಳಕೆಮಾಡಿಕೊಳ್ಳಬೇಕು ಎಂದರು. ಸಿ. ಅಶ್ವತಿ, ನೀವು ಸರ್ಕಾರಕ್ಕೆ ದುಡ್ಡು ಖರ್ಚಾಗಿದೆ ಎಂದು ವರದಿ ನೀಡಿದೀರಿ. ಇಲ್ಲಿ ನೋಡಿದರೆ ಹಣ ಖರ್ಚು ಆಗಿಲ್ಲ. ಏನಿದು? ಎಂದು ತರಾಟೆಗೆ ತೆಗೆದುಕೊಂಡು. ಸುಭಾಷ್‌ಚಂದ್ರ, ಸರಿಪಡಿಸುವುದಾಗಿ ಹೇಳಿದರು. 

ಜಿಪಂ ಮುಖ್ಯ ಲೆಕ್ಕಾಧಿಕಾರಿ ಆಂಜನೇಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ತ್ರಿಪುಲಾಂಬ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್‌.ಎಂ. ಪ್ರೇಮ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೇದಮೂರ್ತಿ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Tejasvi

Govt. Bungalow: ತೇಜಸ್ವಿ ಯಾದವ್ ತೆರವುಗೈದ ಸರಕಾರಿ ಬಂಗಲೆಯಲ್ಲಿ ಸೋಫಾ, ಎಸಿ ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.