ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ


Team Udayavani, Mar 24, 2017, 1:06 PM IST

dvg5.jpg

ಹರಪನಹಳ್ಳಿ: ದೇಶದಲ್ಲಿ ಮಾಂಸ ರಫ್ತು ಮಾಡಿ ಹಣ ಮಾಡುವಂತಹ ದಂಧೆ ನಡೆಯುತ್ತಿದ್ದು, 33 ಕೋಟಿಗೂ ಹೆಚ್ಚು ದೇವತೆಗಳಿರುವ ಗೋ-ಹತ್ಯೆ ಮಾಡುವುದನ್ನು ತಡೆಯಲು ಗೋ-ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಪಂಚಪೀಠದ ಉಜ್ಜಯಿನಿ ಪೀಠಾಧ್ಯಕ್ಷ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು. 

ತಾಲೂಕಿನ ನಿಚ್ಚವನಹಳ್ಳಿ ಗ್ರಾಮದಲ್ಲಿ ಗುರುವಾರ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಪಟ್ಟಾಧಿಧಿಕಾರದ ಸಂಭ್ರಮಾಚರಣೆ ಮತ್ತು ಧರ್ಮ ಸಭೆಯ ಸಾನ್ನಿಧ್ಯವಹಿಸಿ ಅವರು ಆಶೀವರ್ಚನ ನೀಡಿದರು. ಜನ್ಮ ನೀಡುವ ತಾಯಿ ಮಗುವಿಗೆ 2 ವರ್ಷ ಹಾಲು ಕುಡಿಸಬಹುದು ಆದರೆ ಗೋವು ಸಾಯುವವರಿಗೂ ಹಾಲು ಕೊಡುತ್ತದೆ. 

ಅಂತಹ ಗೋ ಮಾತೆಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ವಿದೇಶಕ್ಕೆ ರಪು¤ ಮಾಡಿ ಅದರಲ್ಲಿ ಬದುಕುವುದು ವಿಪರ್ಯಾಸ ಎಂದು ವಿಷಾಧಿಸಿದರು. ಬರಗಾಲ ಆವರಿಸಿರುವುದರಿಂದ ರೈತರು ಸರ್ಕಾರವನ್ನು ದೂರುವ ಬದಲು ವೈಚಾರಿಕತೆ ಬೆಳೆಸಿಕೊಂಡು ಗಿಡಗಳನ್ನು ನೆಟ್ಟು ಅವುಗಳನ್ನು ರಕ್ಷಿಸಿಸುವ ಸಂಕಲ್ಪ ತೊಡಬೇಕು.

ಮರಗಳು ಇದ್ದಲ್ಲಿ ಮಳೆ ಬರುತ್ತದೆ, ಆಮ್ಲಜನಕ ಸಿಗುತ್ತದೆ ಎಂದ ಅವರು ಬದುಕಿನಲ್ಲಿ ಅನ್ನವನ್ನು ಆರೋಗ್ಯವಾಗಿ ಶರೀರಕ್ಕೆ ಕೊಡುವ ಗುಣ ಇರಬೇಕು. ಮನುಷ್ಯ ಊಟ ಮಾತ್ರ ಸಾಕು ಎನ್ನುತ್ತಾನೆ, ಬೇಕು ಎನ್ನುವುದನ್ನು ಬಿಟ್ಟು ಸಾಕು ಎನ್ನುವ ಗುಣ ಬೆಳೆದಲ್ಲಿ ಬದುಕು ಬಂಗಾರವಾಗಲಿದೆ ಎಂದರು. 

ಹಾವೇರಿ ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮಿಗಳು ಮಾತನಾಡಿ, ಮನುಷ್ಯನ ಬದುಕನ್ನು ಕಟ್ಟಿ ಕೊಡುವ ಚಿಂತನಾ ಸಮಾವೇಶ ಇದಾಗಿದೆ. ಶರಣರ ಬದುಕು ಆಡಂಬರವಲ್ಲ, ಆದರ್ಶವಾಗಿದೆ. ಶರಣರ ಚರಿತ್ರೆ ಬರೀ ಕೇಳುವುದಲ್ಲ, ಅವರ ಹಾದಿಯಲ್ಲಿ ನಡೆಯಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಲ್ಲಿ ಸಂಸ್ಕಾರವಂತರಾಗಿ ಬೆಳೆಯುತ್ತಾರೆ ಎಂದು ಹೇಳಿದರು. 

ಹಡಗಲಿ ಗವಿಮಠದ ಡಾ| ಹಿರಿಶಾಂತವೀರ ಸ್ವಾಮೀಜಿ, ರಾಮಘಟ್ಟದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ, ಶಿವಯೋಗಿ ಸದ್ಗುರು ಹಾಲಸ್ವಾಮಿಗಳು, ಹಗರಿಬೊಮ್ಮನಹಳ್ಳಿ ಹಾಲಸ್ವಾಮೀಜಿ, ಚನ್ನಮಲ್ಲಯ್ಯ ದೇವರು, ಪ್ರಗತಿಪರ ಸಂಘಟನೆ ಮುಖಂಡ ಎ.ಎಂ. ವಿಶ್ವನಾಥ, ಕೆ.ಪರಶುರಾಮಪ್ಪ ಮತ್ತಿತರರಿದ್ದರು. 

ಟಾಪ್ ನ್ಯೂಸ್

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

Hebri1

Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Kanaka-Durga

Famous Goddess Temple: ಅಭಯಪ್ರದಾಯಿನಿ ಶಕ್ತಿಮಾತೆ ಕನಕದುರ್ಗಾ ದೇವಾಲಯ

1-tirr

Tirupati; ಹೆಚ್ಚುವರಿ 250 ಟನ್‌ ನಂದಿನಿ ತುಪ್ಪಕ್ಕೆ ಟಿಟಿಡಿ ಬೇಡಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva Lingayat Mahasabha’s opposition to caste census: Shamanur Shivshankarappa

Davanagere: ಜಾತಿಗಣತಿಗೆ ವೀರಶೈವ ಲಿಂಗಾಯತ ಮಹಾಸಭಾದ ವಿರೋಧ: ಶಾಮನೂರು ಶಿವಶಂಕರಪ್ಪ

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು

Somannna-DVG

Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Navratri Special: ರಕ್ಕಸಿ ಹಿಡಿಂಬೆಯ ನಿಷ್ಕಲ್ಮಶ ಪ್ರೀತಿಗೆ ಯಾವ ಹೆಸರು ಕೊಡಲಿ

Chagoes-2

Welcome Development: ಚಾಗೋಸ್‌ ದ್ವೀಪ ಸಮೂಹ ಮತ್ತೆ ಮಾರಿಷಸ್‌ ಪಾಲಿಗೆ

PM-Modi-Myizzu

Relationship Build: ರಾಜಧಾನಿ ಬೆಂಗಳೂರಲ್ಲಿ ಮಾಲ್ದೀವ್ಸ್‌ ದೂತಾವಾಸ ಕಚೇರಿ ಶೀಘ್ರ ಸ್ಥಾಪನೆ

Hebri1

Hebri Cloud Burst: ಇಂಥ ದುರಂತ, ಪ್ರವಾಹ ಈ ಹಿಂದೆ ಆಗಿದ್ದೇ ನೆನಪಿಲ್ಲವೆಂದ ಹಿರಿಯರು

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Horoscope: ನಯವಂಚಕರ ಕುತಂತ್ರಕ್ಕೆ ಸೋಲು ಆಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.