ಸಂಸದರ ವೇತನ ನಿಗದಿ ಸಂಸತ್ತಿನ ಪರಮಾಧಿಕಾರ
Team Udayavani, Mar 25, 2017, 3:50 AM IST
ಹೊಸದಿಲ್ಲಿ: ಸಂಸದರ ವೇತನ ಮತ್ತು ಪಿಂಚಣಿ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವಿನ ಸಂಘರ್ಷಕ್ಕೆ ಕಾರಣವಾಗುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಸಂಸದರಿಗೆ ವೇತನ ಮತ್ತು ಪಿಂಚಣಿ ನಿಗದಿ ಮಾಡುವುದು ಸಂಸತ್ತಿನ ಪರಮಾಧಿಕಾರ. ಸುಪ್ರೀಂ ಕೋರ್ಟ್ ಈ ವಿಚಾರವನ್ನು ಕೈಬಿಟ್ಟು ಬೇರೆ ವಿಷಯಗಳ ಕಡೆ ಗಮನ ಹರಿಸುವುದು ಒಳಿತು ಎಂಬ ಪರೋಕ್ಷ ಸಂದೇಶವನ್ನು ಸಂಸದರು ರವಾನಿಸಿದ್ದಾರೆ.
ಇದು ಪೂರ್ಣ ಸಂಸತ್ತಿಗೆ ಒಳಪಡುವ ವಿಚಾರವಾಗಿದ್ದು, ಸಂಸದರ ವೇತನ ಮತ್ತು ಪಿಂಚಣಿಯನ್ನು ನಿರ್ಧರಿಸುವ ಎಲ್ಲ ಹಕ್ಕು ಇರುವುದು ಸಂಸತ್ಗೆ ಮಾತ್ರ ಎಂದು ಶುಕ್ರವಾರ ಲೋಕಸಭೆಯಲ್ಲಿ ಸಚಿವ ಅನಂತ್ ಕುಮಾರ್ ಹೇಳಿದರು. ದೇಶದಲ್ಲಿನ ಶೇ. 80ರಷ್ಟು ಚುನಾಯಿತ ಪ್ರತಿನಿಧಿಗಳು ಕೋಟ್ಯಧಿಪತಿಗಳು ಎಂದು ಸುಪ್ರೀಂ ಕೋರ್ಟ್ ಅಭಿ ಪ್ರಾಯ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಚಿವರು ಸದನದಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.
ಶೂನ್ಯವೇಳೆ ಟಿಎಂಸಿ ನಾಯಕ ಸುಗತ ರಾಯ್ ಕೂಡ ಇದಕ್ಕೆ ಧ್ವನಿ ಗೂಡಿಸಿದ್ದು, ಸಂಸತ್ ನಿರ್ಧಾರ ಮಾಡಬೇಕಾದ ವಿಷಯವನ್ನು ಕೋರ್ಟ್ ಮಾಡಲು ಹೊರಟು ಸಂಸತ್ತಿನ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸತ್ತೇನೂ “ನಿವೃತ್ತ ಜಡ್ಜ್ಗಳಿಗೆ ಪಿಂಚಣಿಯನ್ನೇಕೆ ನೀಡುತ್ತೀರಿ’ ಎಂದು ಪ್ರಶ್ನಿಸಲಿಲ್ಲ ತಾನೇ? ನೀವೇಕೆ ಸಂಸದರ ವಿಚಾರದಲ್ಲಿ ಪ್ರಶ್ನಿಸುತ್ತೀರಿ ಎಂದೂ ಕೇಳಿದ್ದಾರೆ ರಾಯ್. ಗುರುವಾರವಷ್ಟೇ ರಾಜ್ಯಸಭೆಯಲ್ಲಿ ಸಚಿವ ಜೇಟ್ಲಿ ಅವರೂ ಸುಪ್ರೀಂ ನಿಲುವಿನ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.