ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ
Team Udayavani, Mar 27, 2017, 1:20 PM IST
ಹರಿಹರ: ಹಿಂದುಳಿದ ಹಾಗೂ ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನ ಬಳಸಿಕೊಳ್ಳದೇ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯವೆಸಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ನಗರ ಹೊರವಲಯದ ಬೆಳ್ಳೂಡಿ ಕಾಗಿನೆಲೆ ಕನಕ ಶಾಖಾ ಮಠದ ಆವರಣದಲ್ಲಿ ಭಾನುವಾರ ನಡೆದ ವಾರ್ಷಿಕೋತ್ಸವ, ಕನಕ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರದಲ್ಲಿ ಹಿಂದುಳಿದ, ದಲಿತ ವರ್ಗಗಳಿಗೆ 98 ಕೋಟಿ ರೂ. ಅನುದಾನ ಬಳಕೆ ಮಾಡಿದ್ದರೆ, ಈಗಿನ ಸರ್ಕಾರ ಇದರಲ್ಲಿ ಶೇ.53ರಷ್ಟು ಅನುದಾನ ಮಾತ್ರ ಬಳಕೆ ಮಾಡಿದೆ ಎಂದರು. ಅನುದಾನ ಬಳಸಿಕೊಳ್ಳದ ಬಗ್ಗೆ ಸಿಎಂ ಹಾಗೂ ಸಮಾಜ ಕಲ್ಯಾಣ ಸಚಿವರು ಬೇಡಿಕೆ ಬಂದಿಲ್ಲ, ಯಾರೂ ಅರ್ಜಿ ಸಲ್ಲಿಸಿಲ್ಲ ಎನ್ನುತ್ತಿದ್ದು, ಹಿಂದುಳಿದ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾಗಿರುವ ಕಾಗಿನೆಲೆ ಶ್ರೀಗಳು ಕೂಡಲೇ ಒಕ್ಕೂಟದ ಸಭೆ ನಡೆಸಿ ಸರಕಾರಕ್ಕೆ ಅರ್ಜಿ ಹಾಕಿಸಬೇಕು.
ನಾನು ಕೂಡ ಅನುದಾನ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ. ಸರ್ಕಾರ ಹಿಂದುಳಿದ, ದಲಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕನಕ ಶಾಖಾ ಮಠದಲ್ಲಿ ಐಎಎಸ್, ಕೆಎಎಸ್ ತರಬೇತಿ ಕೇಂದ್ರ ಆರಂಭಿಸಿರುವುದು ಗ್ರಾಮೀಣ ಭಾಗದ ಯುವಕರಿಗೆ ಅನುಕೂಲವಾಗಿದೆ.
ತರಬೇತಿಗೆಂದು ಮಹಾನಗರಗಳಿಗೆ ವಲಸೆ ಹೋಗುವುದು ತಪ್ಪಿದಂತಾಗಿದೆ. ಹಿಂದೆ ಮಠದ ಜಾಗದ ಖರೀದಿಗೆ 20 ಲಕ್ಷ ರೂ. ಅನುದಾನ ನೀಡಿದ್ದೆ, ಈಗ ಹೆಚ್ಚುವರಿಯಾಗಿ 5 ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ಧಾನ ಮಾಡಿದರು. ಸಾನ್ನಿಧ್ಯ ವಹಿಸಿದ್ದ ನಿರಂಜನಾನಂದಪುರಿ ಶ್ರೀಗಳು ಮಾತನಾಡಿ, ಶಾಖಾ ಮಠವು ವರ್ಷದ ಅವಧಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ತರಬೇತಿ ಕೇಂದ್ರದ ಕಟ್ಟಡ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ 4 ಕೋಟಿ ರೂ. ಅನುದಾನ ನೀಡಿದ್ದಾರೆ.
ವಿವಿಧ ಪಕ್ಷಗಳ ರಾಜಕಾರಣಿಗಳು ನೀಡಿದ 98 ಲಕ್ಷ ರೂ. ಗಳಲ್ಲಿ ಜಮೀನು ಖರೀದಿಸಿ, ಭಕ್ತರು ನೀಡಿದ ಹಣದಲ್ಲಿ ಕಟ್ಟಡ ನಿರ್ಮಿಸಲಾಗಿದೆ. 2ನೇ ವರ್ಷಾಚರಣೆ ವೇಳೆ ಸಿಎಂ ಕರೆಸಿ ತರಬೇತಿ ಕೇಂದ್ರ ಉದ್ಘಾಟಿಸುವುದಾಗಿ ತಿಳಿಸಿದರು. ಹೊಸಹಳ್ಳಿ ವೇಮನಾನಂದ ಶ್ರೀ, ನಂದಿಗುಡಿ ಸಿದ್ದರಾಮೇಶ್ವರ ಶ್ರೀ, ಶಾಖಾ ಮಠದ ಈಶ್ವರಾನಂದ ಶ್ರೀ, ಶಿವಾನಂದಪುರಿ ಶ್ರೀ, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ,
ಎಚ್. ವಿಶ್ವನಾಥ್, ಜಿ.ಕರುಣಾಕರ ರೆಡ್ಡಿ, ಮಾಜಿ ಶಾಸಕ ಬಸವರಾಜ ನಾಯ್ಕ, ನಗರಸಭಾ ಅಧ್ಯಕ್ಷೆ, ಆಶಾ ಮರಿಯೋಜಿರಾವ್, ಕಾಂಗ್ರೆಸ್ ಮುಖಂಡ ಎಸ್.ರಾಮಪ್ಪ, ಬಿ.ರೇವಣಸಿದ್ದಪ್ಪ, ಜಿಪಂ ಸದಸ್ಯರಾದ ಜಯಶೀಲ, ಪರಮೇಶ್ವರಪ್ಪ, ವೃತ್ತ ನಿರೀಕ್ಷಕ ಕುಣಿಬೆಳೆಕೆರೆ ದೇವೇಂದ್ರಪ್ಪ, ಎಂ.ನಾಗೇಂದ್ರಪ್ಪ, ಕುಂಬಳೂರು ವಿರೂಪಾಕ್ಷಪ್ಪ, ಸಿ.ಎನ್. ಹುಲಗೇಶ್, ಡಾ| ಮಹೇಶ್ವರಪ್ಪ, ಎಚ್.ಕೆ. ಕನ್ನಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.