ನೀರು ಉಳಿತಾಯ: ಮನಸ್ಸಿದ್ದರೆ ಮಾರ್ಗ ಹಲವು… 


Team Udayavani, Mar 31, 2017, 12:12 PM IST

260317uke1.jpg

ಉಡುಪಿ: ಬೇಸಗೆಯಲ್ಲಿ ನೀರು ಕೊರತೆ ಇದೆ ಎಂದಾಕ್ಷಣ “ಹಾಹಾಕಾರ’ ಕೇಳುತ್ತದೆ, ಸರಕಾರ, ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಒಂದಿಷ್ಟು ಬೈಯುತ್ತೇವೆ.  ನಿತ್ಯವೂ ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯ ನೀರನ್ನು ನಾವೆಷ್ಟು ಉಪಯೋಗಿಸುತ್ತಿದ್ದೇವೆ? ಎಷ್ಟೋ ಮನೆಗಳಲ್ಲಿ ತ್ಯಾಜ್ಯ ನೀರು ತ್ಯಾಜ್ಯವಾಗಿಯೇ ಹೋಗುತ್ತಿದೆ. ಇದನ್ನೇ ಗಿಡಗಳಿಗೆ ಹಾಕಿ ಬಳಸಬಹುದು.  

ಕಿನ್ನಿಮೂಲ್ಕಿ ನಿವಾಸಿ ರಾಮಚಂದ್ರ ಆಚಾರ್ಯರು ಬಟ್ಟೆ ಒಗೆದ ನೀರನ್ನು ಬೇರೆ ಬೇರೆ ಗಿಡಗಳಿಗೆ ಹಾಕುತ್ತಾರೆ. ದಿನವೂ ಒಂದೊಂದು ತೆಂಗಿನ ಮರದ ಬುಡದಲ್ಲಿ ಪಾತ್ರೆಯನ್ನು ತಿಕ್ಕುತ್ತಾರೆ. ಹೀಗೆ ಮಾಡಿದಾಗ ಆ ಮರಕ್ಕೆ ಒಂದಿಷ್ಟು ನೀರು ಸಿಕ್ಕಿದಂತಾಯಿತಲ್ಲ. ನೆಲ ಒರೆಸಿ ಶುಚಿಗೊಳಿಸಿದ ಬಕೆಟ್‌ ನೀರನ್ನೂ ಅವರು ಹೂಗಿಡಗಳಿಗೆ ಹಾಕುತ್ತಾರೆ.  ಕೆಲವು ಮನೆಗಳಲ್ಲಿ ಬಚ್ಚಲು ಮನೆ, ಬಾವಿ ಕಟ್ಟೆಯ ನೀರಿಗೆ ಪೈಪು ಅಳವಡಿಸಿ ಅದರಿಂದ ಬರುವ ನೀರನ್ನು ಒಂದೊಂದು ದಿನ ಕೆಲವು ಗಿಡಮರಗಳಿಗೆ ಹೋಗುವಂತೆ ವ್ಯವಸ್ಥೆ ಮಾಡಿದ್ದಾರೆ. ಇದಕ್ಕೆ ಕಡಿಮೆ ಶ್ರಮ ಸಾಕು. ಬೇಸಗೆಯಲ್ಲಿ ಇಷ್ಟು ನಾಜೂಕಾಗಿ ವ್ಯವಹರಿಸದೆ ಹೋದರೆ ಒಂದೋ ಗಿಡ ಸಾಯುತ್ತದೆ, ಇಲ್ಲವಾದರೆ ಅದಕ್ಕೂ ಇಷ್ಟೇ ಪ್ರಮಾಣದ ಒಳ್ಳೆಯ ನೀರು ಕೊಡಬೇಕು. ಮನುಷ್ಯರಿಗೇ ಒಳ್ಳೆಯ ನೀರು ಕುಡಿಯುವುದಕ್ಕೆ ಸಿಗದಿರುವಾಗ ಗಿಡಗಳಿಗೆ ಎಲ್ಲಿಂದ ತರುವುದು?  ರಾಮಚಂದ್ರ ಆಚಾರ್ಯರ ಮನೆಯ ಬಾವಿಗೆ ಪಂಪು ಇದ್ದರೂ ಅದನ್ನು ಈಗ ಚಾಲು ಮಾಡುವುದಿಲ್ಲ. ಪಂಪು ಚಾಲು ಮಾಡಿದರೆ ಒಂದೇ ಬಾರಿ ನೀರು ಖಾಲಿ ಆಗುತ್ತದೆ. ಮತ್ತೆ ಕುಡಿಯುವ ನೀರಿಗೆ ಪರದಾಡಬೇಕು. ಹೀಗಾಗಿ ನಿತ್ಯವೂ ಒಂದಿಷ್ಟು ಕೊಡ ನೀರನ್ನು ಸೇದಿ ತೆಂಗಿನ ಮರಗಳಿಗೆ ಹಾಕುತ್ತಾರೆ. ಮರಗಳಿಗೆ ನೀರುಣಿಸಿದಂತೆಯೂ ಆಯಿತು, ಇವರಿಗೆ ವ್ಯಾಯಾಮವೂ ಆಯಿತು ಎಂಬ ಸಕಾರಾತ್ಮಕ ಚಿಂತನೆ ಇದೆ. 
 
ಶೌಚಾಲಯದ ನೀರು ಹೊರತುಪಡಿಸಿ ಯಾವುದೇ ನೀರನ್ನೂ ಮನೆಯವರಿಗೆ ಮನಸ್ಸಿದ್ದರೆ ಗಿಡ ಮರಗಳಿಗೆ ಹಾಕಲು ಸಾಧ್ಯ. ಹೀಗೆ ಮಾಡಿದರೆ ಗಿಡಮರಗಳಿಗೆ ಕೊಡುವ ಉತ್ತಮ ಗುಣಮಟ್ಟದ ನೀರಿನ ಪ್ರಮಾಣ ವನ್ನು ಮನುಷ್ಯರು ಉಪಯೋಗಿಸಬಹುದು.

– ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.